AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Postmortem: ಶವಪರೀಕ್ಷೆ ವೇಳೆ ಎದ್ದು ಕುಳಿತ ಬಾಲಕಿ! ಆಯೋಮಯಗೊಂಡ ವೈದ್ಯ

Postmortem: ಸ್ವಲ್ಪ ಹೊತ್ತಿನಲ್ಲೇ ಬಾಲಕಿಗೆ ಪೂರ್ಣ ಪ್ರಜ್ಞೆ ಬಂದಿದೆ. ಆಕೆಯ ಮಾನಸಿಕ ಸ್ಥಿತಿಯನ್ನೂ ವೈದ್ಯರು ಪರೀಕ್ಷಿಸಿದ್ದಾರೆ. ತನ್ನ ಹೆಸರು, ತಂದೆಯ ಹೆಸರು, ಊರಿನ ಹೆಸರು ಯಾವುದು... ಎಂಬೆಲ್ಲ ವೈದ್ಯರ ಪ್ರಶ್ನೆಗಳಿಗೆ ಬಾಲಕಿ ಸರಿಯಾದ ಉತ್ತರ ನೀಡಿ, ತಾನು ಸಂಪೂರ್ಣ ಆರೋಗ್ಯವಾಗಿದ್ದೇನೆ ಎಂದು ವೈದ್ಯರಿಗೆ ಸಾಬೀತುಪಡಿಸಿದಳು.

Postmortem: ಶವಪರೀಕ್ಷೆ ವೇಳೆ ಎದ್ದು ಕುಳಿತ ಬಾಲಕಿ! ಆಯೋಮಯಗೊಂಡ ವೈದ್ಯ
ಶವ ಪರೀಕ್ಷೆ ವೇಳೆ ಎದ್ದು ಕುಳಿತ ಬಾಲಕಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 22, 2023 | 7:01 AM

Share

ಕೆಲವೊಮ್ಮೆ ಕೆಲವು ಸುದ್ದಿಗಳು ನಮ್ಮನ್ನು ಬೆಚ್ಚಿ ಬೀಳಿಸುತ್ತವೆ. ಕೆಲವು ಸುದ್ದಿಗಳು ನಮ್ಮ ಕಣ್ಣು ಮತ್ತು ಕಿವಿಗಳನ್ನು ಆಶ್ಚರ್ಯಗೊಳಿಸುತ್ತದೆ. ಇಲ್ಲಿ ವೈರಲ್ ಆಗುತ್ತಿರುವ ಸುದ್ದಿಯೂ ಇದೇ ಆಗಿದೆ. ವೈರಲ್ ಆಗಿರುವ ಸುದ್ದಿಯ ಸಾರಾಂಶ ಇಷ್ಟು… ಪೋಸ್ಟ್ ಮಾರ್ಟಂಗೆ ಹೋದ ಮೃತ ದೇಹ ಮತ್ತೆ ಎದ್ದು ಕುಳಿತಿದೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ (Postmortem) ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಪೋಸ್ಟ್‌ಮಾರ್ಟಂ ಮಾಡಲು ಸಿದ್ಧವಾಗಿದ್ದ ವೈದ್ಯರು ಆಕೆಯನ್ನು ಮನೆಗೆ ವಾಪಸ್ ಕಳುಹಿಸಿದ್ದಾರೆ. ಇದು ನಿಜಕ್ಕೂ ನಡೆದಿದೆ. ಹೌದು… ಮಿರ್ಜಾಪುರದಲ್ಲಿ ಕಾಲುವೆಗೆ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ನೀರು ನುಂಗಿದ ಬಾಲಕಿ ಸತ್ತಿದ್ದಾಳೆ ಎಂದು ಎಲ್ಲರೂ ಭಾವಿಸಿದ್ದರು. ಪೊಲೀಸರು ಕೂಡ ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಆದರೆ ಮಗುವಿನ ಪೋಷಕರು ತಮ್ಮ ಮಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಂತೆ ಒತ್ತಾಯಿಸಿದರು. ಪೊಲೀಸರು ಆಕೆಯನ್ನು ಮರಣೋತ್ತರ ಪರೀಕ್ಷೆಗಾಗಿ (Girl Body) ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆಗ ಆಕೆ ಬದುಕುಳಿದಿದ್ದಾಳೆ.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಹೃದಯ ಬಡಿತವನ್ನು ಪರೀಕ್ಷಿಸಿದ ವೈದ್ಯರು ಮೊದಲು ಆಘಾತಕ್ಕೊಳಗಾದರು. ಹುಡುಗಿಯ ಹೃದಯ ಬಡಿತವನ್ನು ಗಮನಿಸಲಾಯಿತು. ಅಷ್ಟರಲ್ಲಿ ಹುಡುಗಿ ಕಣ್ಣು ತೆರೆದಳು. ಆ ವೈದ್ಯರು ಒಂದು ಕ್ಷಣ ಆಶ್ಚರ್ಯಚಕಿತರಾದರು. ಆದರೆ, ಬಾಲಕಿ ಮೃತಪಟ್ಟಿಲ್ಲ ಎಂದು ತಿಳಿದ ವೈದ್ಯರು ಆಕೆ ಪ್ರಜ್ಞಾಹೀನಳಾಗಿರುವುದನ್ನು ದೃಢಪಡಿಸಿ ತಕ್ಷಣ ತುರ್ತು ಚಿಕಿತ್ಸೆ ಆರಂಭಿಸಿದ್ದಾರೆ. ಬಾಲಕಿ ನುಂಗಿದ್ದ ನೀರನ್ನು ಹೊಟ್ಟೆಯನ್ನು ಒತ್ತಿ ಒತ್ತಿ ಹೊರತೆಗೆದು ಚಿಕಿತ್ಸೆ ನೀಡಲಾಯಿತು.

Also read:  ಅಧಿಕಾರದಲ್ಲಿದ್ದಾಗ 6ರ ಬದಲು 66 ಮರ ಕಡಿಯಲು ಅಕ್ರಮವಾಗಿ ಅನುಮತಿ ನೀಡಿದ್ದ ಐಎಫ್​ಎಸ್​ ಅಧಿಕಾರಿ ಸಸ್ಪೆಂಡ್

ಅದಾದ ಸ್ವಲ್ಪ ಹೊತ್ತಿನಲ್ಲೇ ಬಾಲಕಿಗೆ ಪೂರ್ಣ ಪ್ರಜ್ಞೆ ಬಂದಿದೆ. ಆಕೆಯ ಮಾನಸಿಕ ಸ್ಥಿತಿಯನ್ನೂ ವೈದ್ಯರು ಪರೀಕ್ಷಿಸಿದ್ದಾರೆ. ತನ್ನ ಹೆಸರು, ತಂದೆಯ ಹೆಸರು, ಊರಿನ ಹೆಸರು ಯಾವುದು… ಎಂಬೆಲ್ಲ ವೈದ್ಯರ ಪ್ರಶ್ನೆಗಳಿಗೆ ಬಾಲಕಿ ಸರಿಯಾದ ಉತ್ತರ ನೀಡಿ, ತಾನು ಸಂಪೂರ್ಣ ಆರೋಗ್ಯವಾಗಿದ್ದೇನೆ ಎಂದು ವೈದ್ಯರಿಗೆ ಸಾಬೀತುಪಡಿಸಿದಳು. ಮಿರ್ಜಾಪುರದಲ್ಲಿ ನಡೆದ ಈ ಘಟನೆ ಎಲ್ಲವನ್ನೂ ಬೆಚ್ಚಿ ಬೀಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ