AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ-ಅಮ್ಮನ ಬಲವಂತಕ್ಕೆ ನೊಂದು ಕಾಲೇಜಿನ ಹಾಸ್ಟೆಲ್​ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪುತ್ರಿ; ಅಂಥದ್ದೇನು ಹೇಳಿದರು ಪಾಲಕರು?

ಈ ಹುಡುಗಿಗೆ ತನ್ನ ಅಪ್ಪ-ಅಮ್ಮನ ಮೇಲೆ ಕೋಪ ಕೂಡ ಬಂದಿತ್ತು. ಬಸ್​​ನಲ್ಲಿ ಬರುತ್ತಿದ್ದಾಗಲೇ ಅವಳು ತನ್ನ ಮೊಬೈಲ್​​ನ್ನು ಎಸೆದಿದ್ದಳು. ಮರುದಿನವೇ ಪಾಲಕರು ಹೊಸ ಮೊಬೈಲ್​ ತಂದು ಕೊಟ್ಟಿದ್ದರು. 

ಅಪ್ಪ-ಅಮ್ಮನ ಬಲವಂತಕ್ಕೆ ನೊಂದು ಕಾಲೇಜಿನ ಹಾಸ್ಟೆಲ್​ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪುತ್ರಿ; ಅಂಥದ್ದೇನು ಹೇಳಿದರು ಪಾಲಕರು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 17, 2022 | 11:43 AM

Share

ಆಂಧ್ರಪ್ರದೇಶದ ವಿಜಯನಗರಂನ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್​ ನಾಲೇಡ್ಜ್​ ಟೆಕ್ನಾಲಜೀಸ್​ (ಐಐಐಟಿ-ಶ್ರೀಕಾಕುಲಂ)ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 16ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಕಾಲೇಜಿನ ಹಾಸ್ಟೆಲ್​ ಕೋಣೆಯಲ್ಲೇ ಫೆ.16ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಸಹಪಾಠಿಗಳು ಬುಧವಾರ ಬಂದು ಬಾಗಿಲು ಬಡಿದರೂ ಯುವತಿ ಬಾಗಿಲು ತೆರೆಯಲಿಲ್ಲ. ಅನುಮಾನ ಬಂದು ಕಾಲೇಜಿನ ಸಿಬ್ಬಂದಿಗೆ ತಿಳಿಸಲಾಯಿತು. ಅವರೆಲ್ಲ ಬಂದು ಬಾಗಿಲು ಒಡೆದು ನೋಡಿದರೆ, ವಿದ್ಯಾರ್ಥಿನಿ ಸೀಲಿಂಗ್ ಫ್ಯಾನ್​ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಳು.

ಮೃತ ಹುಡುಗಿಯ ಹೆಸರು ಕೊಂಡಪಲ್ಲಿ ಮನೀಶಾ ಅಂಜು. ಈಕೆ ವಿಜಯನಗರಂನ ನೆಲ್ಲಿಮಾರ್ಲ ನಿವಾಸಿ. ಐಐಐಟಿ-ಶ್ರೀಕಾಕುಲಂನಲ್ಲಿ ಮೊದಲ ವರ್ಷದ ಪಿಯುಸಿ ಓದುತ್ತಿದ್ದಳು. ಹುಡುಗಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಪಾಲಕರು ಮಾಡಿದ ಒತ್ತಾಯ ಎಂದು ಹೇಳಲಾಗಿದೆ.  ಪ್ರಸಕ್ತ ಶೈಕ್ಷಣಿಕ ವರ್ಷ ಶುರುವಾದಾಗಿನಿಂದ ಇಲ್ಲಿಯವರೆಗೂ ಆಕೆ ಮನೆಯಲ್ಲೇ ಮನೆಯಲ್ಲೇ ಇದ್ದುಕೊಂಡು ಆನ್​ಲೈನ್ ಕ್ಲಾಸ್​ ಮೂಲಕ ಶಿಕ್ಷಣ ಪಡೆಯುತ್ತಿದ್ದಳು. ಆದರೆ ಇದೀಗ ಕಾಲೇಜುಗಳೆಲ್ಲ ಶುರುವಾದ ಹಿನ್ನೆಲೆಯಲ್ಲಿ ಪಾಲಕರು, ನೀನು ಕಾಲೇಜಿಗೇ ಹೋಗಿ, ಆಫ್​ಲೈನ್​ ಕ್ಲಾಸ್​ಗೆ ಹಾಜರಾಗು ಎಂದು ಹೇಳಿದ್ದಾರೆ. ಅವಳಿಗೆ ಇಷ್ಟವಿಲ್ಲದೆ ಇದ್ದರೂ, ಬಲವಂತವಾಗಿ ಕರೆತಂದು ಹಾಸ್ಟೆಲ್​​ನಲ್ಲಿ ಬಿಟ್ಟಿದ್ದಾರೆ. ಇದೇ ಕಾರಣಕ್ಕೆ ಆಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಕೊವಿಡ್​ 19 ಜಾಸ್ತಿ ಇದ್ದಾಗ ಈ ಕಾಲೇಜು ಆನ್​ಲೈನ್​ ಕ್ಲಾಸ್ ಪ್ರಾರಂಭ ಮಾಡಿತ್ತು. ಇದೀಗ ಕೊರೊನಾ ಕಡಿಮೆಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆಫ್​ಲೈನ್​ ಕ್ಲಾಸ್​ಗೆಂದು ಕಾಲೇಜಿಗೆ ಬೇಕಾದರೂ ಬರಬಹುದು. ಹಾಗೊಮ್ಮೆ ಇಲ್ಲಿ ಬರಲು ತೊಂದರೆಯಿದ್ದವರು, ಇಷ್ಟವಿಲ್ಲದೆ ಇದ್ದವರು ಮನೆಯಲ್ಲೇ ಇದ್ದು, ಪ್ರತಿದಿನ ಆನ್​ಲೈನ್​ ಕ್ಲಾಸ್​ ಅಟೆಂಡ್ ಆಗಬೇಕು ಎಂದು ಕಾಲೇಜು ಹೇಳಿತ್ತು. ಹುಡುಗಿಗೆ ಮನೆಯಲ್ಲೇ ಇದ್ದು ಆನ್​ಲೈನ್​ ಕ್ಲಾಸ್​ ತೆಗೆದುಕೊಳ್ಳುವ ಆಸೆ. ಆದರೆ ಪಾಲಕರಿಗೆ ಆಕೆ ಕಾಲೇಜಿಗೆ ಹೋಗಲಿ ಎಂಬ ಬಯಕೆ. ಅವರೇ ಬಲವಂತವಾಗಿ ಹಾಸ್ಟೆಲ್​​ಗೆ ಕರೆತಂದು ಬಿಟ್ಟಿದ್ದರು. ಇದರಿಂದಾಗಿ ಹುಡುಗಿಗೆ ಕೋಪ ಕೂಡ ಬಂದಿತ್ತು. ಬಸ್​​ನಲ್ಲಿ ಬರುತ್ತಿದ್ದಾಗಲೇ ಅವಳು ತನ್ನ ಮೊಬೈಲ್​​ನ್ನು ಎಸೆದಿದ್ದಳು. ಮರುದಿನವೇ ಪಾಲಕರು ಹೊಸ ಮೊಬೈಲ್​ ತಂದು ಕೊಟ್ಟಿದ್ದರು.  ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!

Published On - 9:51 am, Thu, 17 February 22

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ