AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ-ಅಮ್ಮನ ಬಲವಂತಕ್ಕೆ ನೊಂದು ಕಾಲೇಜಿನ ಹಾಸ್ಟೆಲ್​ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪುತ್ರಿ; ಅಂಥದ್ದೇನು ಹೇಳಿದರು ಪಾಲಕರು?

ಈ ಹುಡುಗಿಗೆ ತನ್ನ ಅಪ್ಪ-ಅಮ್ಮನ ಮೇಲೆ ಕೋಪ ಕೂಡ ಬಂದಿತ್ತು. ಬಸ್​​ನಲ್ಲಿ ಬರುತ್ತಿದ್ದಾಗಲೇ ಅವಳು ತನ್ನ ಮೊಬೈಲ್​​ನ್ನು ಎಸೆದಿದ್ದಳು. ಮರುದಿನವೇ ಪಾಲಕರು ಹೊಸ ಮೊಬೈಲ್​ ತಂದು ಕೊಟ್ಟಿದ್ದರು. 

ಅಪ್ಪ-ಅಮ್ಮನ ಬಲವಂತಕ್ಕೆ ನೊಂದು ಕಾಲೇಜಿನ ಹಾಸ್ಟೆಲ್​ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪುತ್ರಿ; ಅಂಥದ್ದೇನು ಹೇಳಿದರು ಪಾಲಕರು?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 17, 2022 | 11:43 AM

Share

ಆಂಧ್ರಪ್ರದೇಶದ ವಿಜಯನಗರಂನ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್​ ನಾಲೇಡ್ಜ್​ ಟೆಕ್ನಾಲಜೀಸ್​ (ಐಐಐಟಿ-ಶ್ರೀಕಾಕುಲಂ)ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 16ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಕಾಲೇಜಿನ ಹಾಸ್ಟೆಲ್​ ಕೋಣೆಯಲ್ಲೇ ಫೆ.16ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಸಹಪಾಠಿಗಳು ಬುಧವಾರ ಬಂದು ಬಾಗಿಲು ಬಡಿದರೂ ಯುವತಿ ಬಾಗಿಲು ತೆರೆಯಲಿಲ್ಲ. ಅನುಮಾನ ಬಂದು ಕಾಲೇಜಿನ ಸಿಬ್ಬಂದಿಗೆ ತಿಳಿಸಲಾಯಿತು. ಅವರೆಲ್ಲ ಬಂದು ಬಾಗಿಲು ಒಡೆದು ನೋಡಿದರೆ, ವಿದ್ಯಾರ್ಥಿನಿ ಸೀಲಿಂಗ್ ಫ್ಯಾನ್​ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಳು.

ಮೃತ ಹುಡುಗಿಯ ಹೆಸರು ಕೊಂಡಪಲ್ಲಿ ಮನೀಶಾ ಅಂಜು. ಈಕೆ ವಿಜಯನಗರಂನ ನೆಲ್ಲಿಮಾರ್ಲ ನಿವಾಸಿ. ಐಐಐಟಿ-ಶ್ರೀಕಾಕುಲಂನಲ್ಲಿ ಮೊದಲ ವರ್ಷದ ಪಿಯುಸಿ ಓದುತ್ತಿದ್ದಳು. ಹುಡುಗಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಪಾಲಕರು ಮಾಡಿದ ಒತ್ತಾಯ ಎಂದು ಹೇಳಲಾಗಿದೆ.  ಪ್ರಸಕ್ತ ಶೈಕ್ಷಣಿಕ ವರ್ಷ ಶುರುವಾದಾಗಿನಿಂದ ಇಲ್ಲಿಯವರೆಗೂ ಆಕೆ ಮನೆಯಲ್ಲೇ ಮನೆಯಲ್ಲೇ ಇದ್ದುಕೊಂಡು ಆನ್​ಲೈನ್ ಕ್ಲಾಸ್​ ಮೂಲಕ ಶಿಕ್ಷಣ ಪಡೆಯುತ್ತಿದ್ದಳು. ಆದರೆ ಇದೀಗ ಕಾಲೇಜುಗಳೆಲ್ಲ ಶುರುವಾದ ಹಿನ್ನೆಲೆಯಲ್ಲಿ ಪಾಲಕರು, ನೀನು ಕಾಲೇಜಿಗೇ ಹೋಗಿ, ಆಫ್​ಲೈನ್​ ಕ್ಲಾಸ್​ಗೆ ಹಾಜರಾಗು ಎಂದು ಹೇಳಿದ್ದಾರೆ. ಅವಳಿಗೆ ಇಷ್ಟವಿಲ್ಲದೆ ಇದ್ದರೂ, ಬಲವಂತವಾಗಿ ಕರೆತಂದು ಹಾಸ್ಟೆಲ್​​ನಲ್ಲಿ ಬಿಟ್ಟಿದ್ದಾರೆ. ಇದೇ ಕಾರಣಕ್ಕೆ ಆಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಕೊವಿಡ್​ 19 ಜಾಸ್ತಿ ಇದ್ದಾಗ ಈ ಕಾಲೇಜು ಆನ್​ಲೈನ್​ ಕ್ಲಾಸ್ ಪ್ರಾರಂಭ ಮಾಡಿತ್ತು. ಇದೀಗ ಕೊರೊನಾ ಕಡಿಮೆಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆಫ್​ಲೈನ್​ ಕ್ಲಾಸ್​ಗೆಂದು ಕಾಲೇಜಿಗೆ ಬೇಕಾದರೂ ಬರಬಹುದು. ಹಾಗೊಮ್ಮೆ ಇಲ್ಲಿ ಬರಲು ತೊಂದರೆಯಿದ್ದವರು, ಇಷ್ಟವಿಲ್ಲದೆ ಇದ್ದವರು ಮನೆಯಲ್ಲೇ ಇದ್ದು, ಪ್ರತಿದಿನ ಆನ್​ಲೈನ್​ ಕ್ಲಾಸ್​ ಅಟೆಂಡ್ ಆಗಬೇಕು ಎಂದು ಕಾಲೇಜು ಹೇಳಿತ್ತು. ಹುಡುಗಿಗೆ ಮನೆಯಲ್ಲೇ ಇದ್ದು ಆನ್​ಲೈನ್​ ಕ್ಲಾಸ್​ ತೆಗೆದುಕೊಳ್ಳುವ ಆಸೆ. ಆದರೆ ಪಾಲಕರಿಗೆ ಆಕೆ ಕಾಲೇಜಿಗೆ ಹೋಗಲಿ ಎಂಬ ಬಯಕೆ. ಅವರೇ ಬಲವಂತವಾಗಿ ಹಾಸ್ಟೆಲ್​​ಗೆ ಕರೆತಂದು ಬಿಟ್ಟಿದ್ದರು. ಇದರಿಂದಾಗಿ ಹುಡುಗಿಗೆ ಕೋಪ ಕೂಡ ಬಂದಿತ್ತು. ಬಸ್​​ನಲ್ಲಿ ಬರುತ್ತಿದ್ದಾಗಲೇ ಅವಳು ತನ್ನ ಮೊಬೈಲ್​​ನ್ನು ಎಸೆದಿದ್ದಳು. ಮರುದಿನವೇ ಪಾಲಕರು ಹೊಸ ಮೊಬೈಲ್​ ತಂದು ಕೊಟ್ಟಿದ್ದರು.  ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ ಸಿಎಂ ಕೆ ಚಂದ್ರಶೇಖರರಾವ್ 68ನೆ ಹುಟ್ಟುಹಬ್ಬ: ಕೋಳಿ ವಿತರಣೆ ಮಾಡಿದ ಕರೀಂನಗರ ಮೇಯರ್​!

Published On - 9:51 am, Thu, 17 February 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್