AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಲಾರಿ ತಪ್ಪಿಸಲು ಹೋಗಿ, ಪಕ್ಕದಲ್ಲಿದ್ದ ಕಾಲುವೆಗೆ ಬಸ್​ ಬಿದ್ದಿದೆ.

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಸರ್ಕಾರಿ ಬಸ್​; 9 ಮಂದಿ ಸಾವು, ಹಲವರಿಗೆ ಗಾಯ
ಕಾಲುವೆಗೆ ಬಿದ್ದ ಬಸ್ (ಫೋಟೋ ಕೃಪೆ-ಟಿವಿ9 ತೆಲುಗು)
TV9 Web
| Edited By: |

Updated on: Dec 15, 2021 | 1:41 PM

Share

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಬಸ್​ ಅಪಘಾತಕ್ಕೀಡಾಗಿದ್ದು, 9ಮಂದಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸುಮಾರು 47 ಪ್ರಯಾಣಿಕರು ಇದ್ದ ಆಂಧ್ರಪ್ರದೇಶ ರಸ್ತೆ ಸಾರಿಗೆ ಬಸ್ (APSRTC)​ ಇದಾಗಿದ್ದು, ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ವಲಯದ ಜಲ್ಲೇರುವಗು ಎಂಬಲ್ಲಿ ಕಾಲುವೆಗೆ ಬಿದ್ದ ಪರಿಣಾಮ ಅವಘಡ ನಡೆದಿದೆ. ಈ ಬಸ್​ ಪಶ್ಚಿಮ ಗೋದಾವರಿಯ ಜಂಗಾರೆಡ್ಡಿ ಗುಡೆಂನಿಂದ ಭದ್ರಾದ್ರಿ ಕೊಥಗುಡೆಂನಲ್ಲಿರುವ ಅಶ್ವರಾವ್​ ಪೇಟೆಗೆ ತೆರಳುತ್ತಿತ್ತು.

ಎದುರಿನಿಂದ ಬಂದ ಲಾರಿಗೆ ಬಸ್​ ಗುದ್ದುವುದನ್ನು ತಪ್ಪಿಸಲು ಹೋದ ಚಾಲಕನಿಗೆ ಸಮತೋಲನ ತಪ್ಪಿದ್ದೇ ದುರಂತಕ್ಕೆ ಕಾರಣ. ಬಸ್​​ ಲಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ, ಸಮೀಪದ ಕಾಲುವೆಗೆ ಬಿದ್ದು, ಅಲ್ಲಿಯೇ ಮುಳುಗಿದೆ. ಈ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ‘ಆಡಿಷನ್​ ವೇಳೆ ಸೊಂಟ, ಎದೆ ಸೈಜ್​ ಬಗ್ಗೆ ಪ್ರಶ್ನೆ ಕೇಳಲಾಗಿತ್ತು’; ಕನ್ನಡ ಸಿನಿಮಾದಲ್ಲಿ ನಟಿಸಿದ ಹೀರೋಯಿನ್​ಗೆ ಕಹಿ ಅನುಭವ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು