AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲೂ ಪ್ರಸಾದ್​ ಯಾದವ್​​ ಹಿರಿಯ ಪುತ್ರನ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಗುಂಪು; ತೇಜ್​ ಪ್ರತಾಪ್​ ಯಾದವ್​ ಸಹಾಯಕನ ಮೇಲೆ ಹಲ್ಲೆ

ಶ್ರೀಜನ್​ ಸ್ವರಾಜ್​ ಅವರು ತಮ್ಮ ದೂರಿನಲ್ಲಿ ಗೌರವ್​ ಯಾದವ್ ಎಂಬಾತನ ಹೆಸರನ್ನು ಉಲ್ಲೇಖಿಸಿದ್ದಾರೆ. ಗೌರವ್ ಯಾದವ್​ ತನ್ನ 10 ಮಂದಿ ಸಹಾಯಕರೊಂದಿಗೆ ಬಂದಿದ್ದ. ತೇಜ್​ ಪ್ರತಾಪ್​ ಯಾದವ್​ ಅವರ ಮನೆಗೆ ನುಗ್ಗಿದ್ದಾನೆ ಎಂದು ಹೇಳಿದ್ದಾರೆ.

ಲಾಲೂ ಪ್ರಸಾದ್​ ಯಾದವ್​​ ಹಿರಿಯ ಪುತ್ರನ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಗುಂಪು; ತೇಜ್​ ಪ್ರತಾಪ್​ ಯಾದವ್​ ಸಹಾಯಕನ ಮೇಲೆ ಹಲ್ಲೆ
ತೇಜ್​ ಪ್ರತಾಪ್​ ಯಾದವ್​
TV9 Web
| Edited By: |

Updated on: Feb 14, 2022 | 2:33 PM

Share

ಬಿಹಾರದ ಪಾಟ್ನಾದಲ್ಲಿರುವ ರಾಷ್ಟ್ರೀಯ ಜನತಾ ದಳದ ಮುಖಂಡ, ಲಾಲೂ ಪ್ರಸಾದ್ ಯಾದವ್​ ಅವರ ಹಿರಿಯ ಪುತ್ರ ತೇಜ್​ ಪ್ರತಾಪ್ ಯಾದವ್ (Tej Pratap Yadav) ಮನೆಗೆ ಭಾನುವಾರ ಸಂಜೆ ಒಂದಷ್ಟು ಜನರ ಗುಂಪೊಂದು ನುಗ್ಗಿ ದಾಂಧಲೆ ನಡೆಸಿದ್ದಲ್ಲದೆ, ತೇಜ್​ ಪ್ರತಾಪ್​ ಯಾದವ್​ರ ಸಹಾಯಕ ಶ್ರೀಜನ್​ ಸ್ವರಾಜ್​​ ಮೇಲೆ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲ, ಅವರಿಗೆ ಕೊಲೆ ಬೆದರಿಕೆಯನ್ನೂ ಹಾಕಿದೆ. ಈ ಬಗ್ಗೆ ಆರ್​ಜೆಡಿ ಯುವ ಘಟಕದ ಅಧ್ಯಕ್ಷರೂ ಆಗಿರುವ ಶ್ರೀಜನ್​ ಸ್ವರಾಜ್​ ಅವರೇ ಸ್ವತಃ ಪೊಲೀಸರಿಗೆ ದೂರು ನೀಡಿದ್ದಾರೆ.

ಶ್ರೀಜನ್​ ಸ್ವರಾಜ್​ ಅವರು ತಮ್ಮ ದೂರಿನಲ್ಲಿ ಗೌರವ್​ ಯಾದವ್ ಎಂಬಾತನ ಹೆಸರನ್ನು ಉಲ್ಲೇಖಿಸಿದ್ದಾರೆ. ಗೌರವ್ ಯಾದವ್​ ತನ್ನ 10 ಮಂದಿ ಸಹಾಯಕರೊಂದಿಗೆ ಬಂದಿದ್ದ. ತೇಜ್​ ಪ್ರತಾಪ್​ ಯಾದವ್​ ಅವರ ಮನೆಗೆ ನುಗ್ಗಿದ್ದಾನೆ. ಭದ್ರತಾ ಸಿಬ್ಬಂದಿ ತಡೆಯಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ವಿವರಿಸಿದ್ದಾರೆ. ಭಾನುವಾರ ಸಂಜೆ 6.30ರ ಹೊತ್ತಿಗೆ ಘಟನೆ ನಡೆದಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲ, ಗೌರವ್ ಯಾದವ್ ಮತ್ತು ಆತನೊಂದಿಗೆ ಇದ್ದವರು ಮದ್ಯಪಾನ ಮಾಡಿದ್ದರು. ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಆರೋಪಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ನನಗೆ ರಕ್ಷಣೆ ಬೇಕು ಎಂದು ಪೊಲೀಸರ ಬಳಿ ಶ್ರೀರಾಜ್ ಸ್ವರಾಜ್​ ಮನವಿ ಮಾಡಿದ್ದಾರೆ.

ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ಜೈಲು  ಸೇರಿದ್ದ ಲಾಲೂಪ್ರಸಾದ್ ಯಾದವ್ ಬಿಡುಗಡೆಯಾಗಿದ್ದರೂ ಅವರು ಆಗಾಗ ಕೋರ್ಟಿನ ವಿಚಾರಣೆಗೆ ಹಾಜರಾಗಬೇಕಾಗುತ್ತದೆ. ಅಂತೆಯೇ ಭಾನುವಾರವೂ ಕೂಡ ಸಿಬಿಐ ಕೋರ್ಟ್​​ಗೆ ವಿಚಾರಣೆಗಾಗಿ ರಾಂಚಿಗೆ  ತೆರಳಿದ್ದರು. ಈ ಕೇಸ್​ನ ಅಂತಿಮ ತೀರ್ಪನ್ನು ಕೋರ್ಟ್​ ಫೆ.15ರಂದು ನೀಡಲಿದೆ. ಲಾಲೂ ಪ್ರಸಾದ್​ ಯಾದವ್ ಜತೆ ತೇಜ್​ ಪ್ರತಾಪ್​ ಯಾದವ್​ ಕೂಡ ರಾಂಚಿಗೆ ತೆರಳುವವರು ಇದ್ದರು. ಆದರೆ ಕೊನೇ ಕ್ಷಣದಲ್ಲಿ ಅವರು ಹೋಗುವ ಯೋಜನೆ ರದ್ದಾಗಿ ಮನೆಯಲ್ಲೇ ಇದ್ದರು.

ಇದನ್ನೂ ಓದಿ: Uttar Pradesh Elections 2022: ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ದಾಳಿ

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು