AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಥಳಿಸಿದ ಪುರುಷರ ಗುಂಪು

ಮೇಘಾಲಯದಲ್ಲಿ ಮಹಿಳೆಯೊಬ್ಬರಿಗೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಕಂಡು ಬಂದಿದೆ. ಇದೀಗ ಘಟನೆಗೆ ಸಂಬಂಧಿಸಿಂದಂತೆ ವಿಡಿಯೋವೊಂದು ವೈರಲ್​​ ಆಗಿದೆ. ಮಹಿಳೆಯನ್ನು ಸಾರ್ವಜನಿಕವಾಗಿ ಕೆಲವು ಪುರುಷರು ಸೇರಿ ಥಳಿಸಿದ್ದಾರೆ. ಅಷ್ಟಕ್ಕೂ ಆ ಮಹಿಳೆಗೆ ಯಾಕೆ ಥಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಕ್ರಮವೇನು? ಇಲ್ಲಿದೆ ನೋಡಿ.

ಮಹಿಳೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಥಳಿಸಿದ ಪುರುಷರ ಗುಂಪು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 27, 2024 | 11:16 AM

Share

ಮೇಘಾಲಯದಲ್ಲಿ ವಿವಾಹಿತ ಮಹಿಳೆಯೊಬ್ಬರು ಬೇರೊಬ್ಬ ವ್ಯಕ್ತಿಯ ಜತೆಗೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದಾರೆ ಎಂಬ ಕಾರಣಕ್ಕೆ ಆಕೆಯನ್ನು ಮನಬಂದಂತೆ ಅಲ್ಲಿ ಪುರುಷರು ಸಾರ್ವಜನಿಕವಾಗಿ ಥಳಿಸಿದ್ದಾರೆ. ಇದೀಗ ಈ ಘಟನೆಯ ಬಗ್ಗೆ ವಿಡಿಯೋವೊಂದು ವೈರಲ್​​​ ಆಗಿದ್ದು, ಪಶ್ಚಿಮ ಗರೋ ಹಿಲ್ಸ್‌ನ ದಾಡೆಂಗ್ಗ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಹಿಳೆಯ ಮೇಲೆ ಸಾರ್ವಜನಿಕವಾಗಿ ಅಮಾನುಷವಾಗಿ ಹಲ್ಲೆ ಮಾಡಲಾಗಿದ್ದು, ಯಾರು ಕೂಡ ಆಕೆಯ ಸಹಾಯಕ್ಕೆ ಧಾವಿಸಿಲ್ಲ ಎಂದು ಹೇಳಲಾಗಿದೆ.

ಈ ವೀಡಿಯೊದಲ್ಲಿ ಅನೇಕ ಪುರುಷರು ಸೇರಿ ಆಕೆಗೆ ಸಾವರ್ಜನಿಕವಾಗಿ ಎಲ್ಲರ ಮುಂದೆ ಥಳಿಸಿದ್ದಾರೆ. ಇದೀಗ ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಆಕೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ಅವರು ಈ ರೀತಿ ಥಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮದುವೆ ದಿನ ಮಾಜಿ ಪ್ರೇಯಸಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ವಿಡಿಯೋ ಇಲ್ಲಿದೆ ನೋಡಿ:

ಮಹಿಳಾ ಸಬಲೀಕರಣದ ಮೇಘಾಲಯ ಅಸೆಂಬ್ಲಿ ಸಮಿತಿಯ ಅಧ್ಯಕ್ಷೆಯಾಗಿರುವ ಸುಟ್ಂಗಾ ಸೈಪುಂಗ್ ಶಾಸಕಿ ಸಾಂತಾ ಮೇರಿ ಶೈಲ್ಲಾ ಈ ಘಟನೆಯ ಬಗ್ಗೆ ಪೊಲೀಸರ ಬಳಿ ವರದಿಯನ್ನು ಕೇಳಿದ್ದಾರೆ. ಮೇಘಾಲಯದ ಎಲ್ಲಾ 12 ಜಿಲ್ಲೆಗಳ ಪೊಲೀಸ್ ಅಧೀಕ್ಷಕರಿಗೆ ಮಹಿಳೆಯರ ವಿರುದ್ಧ ಯಾವುದೇ ರೀತಿಯ ಅಪರಾಧದ ವಿರುದ್ಧ ಎಚ್ಚರದಿಂದ ಇರುವಂತೆ ಸರ್ಕಾರ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ