AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾನದಿಯಲ್ಲಿ ಏಕಾಂಗಿಯಾಗಿ ಪವಿತ್ರ ಸ್ನಾನ ಮಾಡುವವರು ಹಿಂದುತ್ವವಾದಿ; ರಾಹುಲ್ ಗಾಂಧಿ ಹೊಸ ವ್ಯಾಖ್ಯಾನ

Rahul Gandhi In Amethi: ಪ್ರಧಾನಿ ನರೇಂದ್ರ ಮೋದಿಯವರು ವಾರಾಣಸಿಯ ಲಲಿತ್​ ಘಾಟ್​​ನಲ್ಲಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದರ ಬಗ್ಗೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವ್ಯಂಗ್ಯವಾಡಿದರು.

ಗಂಗಾನದಿಯಲ್ಲಿ ಏಕಾಂಗಿಯಾಗಿ ಪವಿತ್ರ ಸ್ನಾನ ಮಾಡುವವರು ಹಿಂದುತ್ವವಾದಿ; ರಾಹುಲ್ ಗಾಂಧಿ ಹೊಸ ವ್ಯಾಖ್ಯಾನ
ರಾಹುಲ್​ ಗಾಂಧಿ
Follow us
TV9 Web
| Updated By: Lakshmi Hegde

Updated on:Dec 19, 2021 | 3:39 PM

ನಿನ್ನೆ ರಾಹುಲ್​ ಗಾಂಧಿ (Congress Leader Rahul Gandhi)  ತಮ್ಮ ಹಳೆಯ ಲೋಕಸಭಾ ಕ್ಷೇತ್ರ ಅಮೇಠಿಗೆ (Amethi) ಭೇಟಿ ನೀಡಿ, ಅಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ತೊಲಗಿಸಿ, ಹಣದುಬ್ಬರ ಇಳಿಸಿ ಎಂಬ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಅವರು,  ಬಿಜೆಪಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಹಣದುಬ್ಬರಕ್ಕೆ ಬಿಜೆಪಿ ಸರ್ಕಾರಗಳೇ ಕಾರಣ ಎಂದು ಆರೋಪಿಸಿರುವ ಅವರು, ಅನ್ಯಾಯದ ವಿರುದ್ಧ ಈಗ ನಾವೆಲ್ಲರೂ ಒಂದಾಗಿದ್ದೇವೆ ಎಂದು ಹೇಳಿಕೊಂಡಿದ್ದಾರೆ. 

ನಾನು 2004ರಲ್ಲಿ ರಾಜಕೀಯಕ್ಕೆ ಬಂದೆ. ನಾನು ಮೊದಲ ಸಲ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಅಮೇಠಿಯಿಂದ. ಇಲ್ಲಿನ ಜನರು ನನಗೆ ರಾಜಕೀಯದ ಆಳಗಲವನ್ನು ಕಲಿಸಿದ್ದಾರೆ. ರಾಜಕೀಯದಲ್ಲಿ ದಾರಿಯನ್ನು ತೋರಿಸಿದ್ದಾರೆ. ಹಾಗಾಗಿ ಅಮೇಠಿಯ ಜನರಿಗೆ ನಾನು ಸದಾ ಕೃತಜ್ಞನಾಗಿ ಇರುತ್ತೇನೆ ಎಂದು ಹೇಳಿದ್ದಾರೆ.  ಅಂದಹಾಗೆ, ಅಮೇಠಿ ಕ್ಷೇತ್ರ ನೆಹರೂ ಮತ್ತು ಗಾಂಧಿ ಕುಟುಂಬದ ಸ್ವಕ್ಷೇತ್ರದಂತೆ ಇತ್ತು. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ, ಬಿಜೆಪಿಯ ನಾಯಕಿ ಸ್ಮೃತಿ ಇರಾನಿ ವಿರುದ್ಧ ಇಲ್ಲಿ ಸೋತಿದ್ದರು. ಅದಾದ ಬಳಿಕ ಇತ್ತ ಕಡೆ ಬಂದಿರಲಿಲ್ಲ. ಆದರೀಗ ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಇಲ್ಲಿಗೆ ಬಂದು, ಬಿಜೆಪಿ ವಿರುದ್ಧ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.

ಹಿಂದು V/S ಹಿಂದುತ್ವವಾದಿ ರಾಹುಲ್​ ಗಾಂಧಿಯವರು ಹಿಂದು ಮತ್ತು ಹಿಂದುತ್ವವಾದಿ ಎಂಬುದರ ಸಂಬಂಧ ನೀಡಿದ್ದ ಹೇಳಿಕೆಯ ಬಗ್ಗೆ ಇಂದಿಗೂ ಕೂಡ ಚರ್ಚೆ ನಡೆಯುತ್ತಿದೆ. ಈ ಚರ್ಚೆ ಸಕ್ರಿಯವಾಗಿರುವ ಹೊತ್ತಲ್ಲಿ, ರಾಹುಲ್ ಗಾಂಧಿ ಅಮೇಠಿಯಲ್ಲಿ ಮತ್ತೆ ಇದರ ಪ್ರಸ್ತಾಪ ಮಾಡಿದರು. ಹಿಂದು-ಹಿಂದುತ್ವವಾದಿ ಶಬ್ದಗಳನ್ನು ಬಳಸಿ ಮತ್ತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಟಾಂಗ್​ ನೀಡಿದರು.  ಯಾರು ಸತ್ಯದ ಹಾದಿಯನ್ನು ತುಳಿಯಲು ಸ್ವಲ್ಪವೂ ಭಯ ಪಡುವುದಿಲ್ಲವೋ ಅವರು ಹಿಂದು. ಅಷ್ಟೇ ಅಲ್ಲ, ಯಾರು ತಮ್ಮ ಭಯವನ್ನು ಹಿಂಸಾಚಾರ, ದ್ವೇಷ, ಸಿಟ್ಟನ್ನಾಗಿ ಬದಲಿಸುವುದಿಲ್ಲವೋ ಅವರು ನಿಜವಾದ ಹಿಂದು. ಅದಕ್ಕೆ ಉದಾಹರಣೆ ಮಹಾತ್ಮ ಗಾಂಧಿ.  ಆದರೆ ನಾಥೂರಾಮ್ ಗೋಡ್ಸೆ ಮತ್ತು ಆತನಂಥವರು ಹಿಂದುತ್ವವಾದಿ. ಸದಾ ಸತ್ಯವನ್ನೇ ಹೇಳುವ ಹಿಂದು (ಮಹಾತ್ಮ ಗಾಂಧಿ)ವನ್ನು ಕೊಂದ ಗೋಡ್ಸೆ ಒಬ್ಬ ಹಿಂದುತ್ವವಾದಿ. ಆತನೊಬ್ಬ ಹೇಡಿ. ಗೋಡ್ಸೆಗೆ ತನ್ನ ಭಯವನ್ನು ಗೆಲ್ಲಲು ಸಾಧ್ಯವಾಗಲೇ ಇಲ್ಲ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರು ವಾರಾಣಸಿಯ ಲಲಿತ್​ ಘಾಟ್​​ನಲ್ಲಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದರ ಬಗ್ಗೆ ವ್ಯಂಗ್ಯವಾಡಿದರು. ಒಬ್ಬ ಹಿಂದುತ್ವವಾದಿ ಗಂಗಾ ನದಿಯಲ್ಲಿ ಏಕಾಂಗಿಯಾಗಿ ಪವಿತ್ರ ಸ್ನಾನ ಮಾಡುತ್ತಾರೆ. ಅದೇ ಒಬ್ಬ ಹಿಂದು, ಕೋಟ್ಯಂತರ ಜನರೊಂದಿಗೆ ಸೇರಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡುತ್ತಾನೆ. ಪ್ರಧಾನಿ ನರೇಂದ್ರ ಮೋದಿ ತಾನೊಬ್ಬ ಹಿಂದು ಎಂದು ಹೇಳುತ್ತಾರೆ. ಆದರೆ ಸತ್ಯವನ್ನು ಅವರು ಯಾವಾಗ ರಕ್ಷಣೆ ಮಾಡಿದ್ದಾರೆ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Realme GT 2 Pro: ಒಂದೇ ದಿನ ಬಾಕಿ: ಸೋಮವಾರ ಮಾರುಕಟ್ಟೆಗೆ ಅಪ್ಪಳಿಸಲಿದೆ ಬಹುನಿರೀಕ್ಷೆಯ ರಿಯಲ್‌ ಮಿ GT 2 ಸರಣಿ

Published On - 3:38 pm, Sun, 19 December 21

ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್