AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ರಾಜಸ್ಥಾನದಲ್ಲಿ ಭೀಕರ ಅಪಘಾತ; ಬೆಂಕಿ ಹೊತ್ತಿ ಉರಿದ ಬಸ್​​ನಲ್ಲಿದ್ದ 12 ಮಂದಿ ಸಜೀವ ದಹನ

ಬಸ್​​ ಬಲೋತ್ರಾದಿಂದ ಬೆಳಗ್ಗೆ 9.55ಕ್ಕೆ ಹೊರಟಿತ್ತು. ಟ್ಯಾಂಕರ್​ ಎದುರಿನಿಂದ ಬಂದು ಡಿಕ್ಕಿಹೊಡೆದಿದೆ. ಇದರಲ್ಲಿ ಟ್ಯಾಂಕರ್​ ಚಾಲಕ ರಸ್ತೆಯ ತಪ್ಪಾದ ಬದಿಯಲ್ಲಿ ವಾಹನ ಚಲಾಯಿಸಿಕೊಂಡು ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

Rajasthan: ರಾಜಸ್ಥಾನದಲ್ಲಿ ಭೀಕರ ಅಪಘಾತ; ಬೆಂಕಿ ಹೊತ್ತಿ ಉರಿದ ಬಸ್​​ನಲ್ಲಿದ್ದ 12 ಮಂದಿ ಸಜೀವ ದಹನ
ಖಾಸಗಿ ಬಸ್​ಗೆ ಬೆಂಕಿ
TV9 Web
| Edited By: |

Updated on:Nov 10, 2021 | 2:09 PM

Share

ಖಾಸಗಿ ಬಸ್​ ಮತ್ತು ಟ್ಯಾಂಕರ್​ ಡಿಕ್ಕಿಯಾದ ಪರಿಣಾಮ ಬಸ್​​ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾದ ದುರ್ಘಟನೆ ರಾಜಸ್ಥಾನದ ಬಾರ್ಮರ್​-ಜೋಧ್​ಪುರ ಹೆದ್ದಾರಿಯಲ್ಲಿ ನಡೆದಿದೆ. ಈ ಖಾಸಗಿ ಬಸ್​​ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಇದ್ದರು. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ಸಿಬ್ಬಂದಿ 10 ಮೃತದೇಹಗಳನ್ನು ಬಸ್​​ನಿಂದ ಹೊರತೆಗೆದಿದ್ದಾರೆ. ಈ ಬಸ್​​ ಬಲೋತ್ರಾದಿಂದ ಬೆಳಗ್ಗೆ 9.55ಕ್ಕೆ ಹೊರಟಿತ್ತು. ಟ್ಯಾಂಕರ್​ ಎದುರಿನಿಂದ ಬಂದು ಡಿಕ್ಕಿಹೊಡೆದಿದೆ. ಇದರಲ್ಲಿ ಟ್ಯಾಂಕರ್​ ಚಾಲಕ ರಸ್ತೆಯ ತಪ್ಪಾದ ಬದಿಯಲ್ಲಿ ವಾಹನ ಚಲಾಯಿಸಿಕೊಂಡು ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯಾಂಕರ್​ ಡಿಕ್ಕಿಯಾಗುತ್ತಿದ್ದಂತೆ ಒಮ್ಮೆಲೇ ಬಸ್​​ಗೆ ಬೆಂಕಿ ತಗುಲಿದೆ. ಈ ಹೆದ್ದಾರಿಯಲ್ಲಿ ಸಿಕ್ಕಾಪಟೆ ಟ್ರಾಫಿಕ್​ ಜಾಮ್​ ಆಗಿದೆ. ಸ್ಥಳದಲ್ಲಿ ಅನೇಕ ಪೊಲೀಸ್​ ಸಿಬ್ಬಂದಿಯಿದ್ದು, ರಕ್ಷಣಾ ಕಾರ್ಯಾಚರಣೆಯೂ ನಡೆಯುತ್ತಿದೆ. ಪಚ್ಪದ್ರ ಶಾಸಕ ಮದನ್ ಪ್ರಜಾಪತ್, ಉಸ್ತುವಾರಿ ಸಚಿವ ಸುಖರಾಮ್ ವಿಷ್ಣೋಯ್ ಇನ್ನಿತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಂತಾಪ ಖಾಸಗಿ ಬಸ್​ ಮತ್ತು ಟ್ಯಾಂಕರ್​ ನಡುವಿನ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸಂತಾಪ ಸೂಚಿಸಿದ್ದಾರೆ. ಬಾರ್ಮರ್​ ಜಿಲ್ಲಾಧಿಕಾರಿಯೊಟ್ಟಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ಕುರಿತಾಗಿ ಅವರಿಗೆ ನಿರ್ದೇಶನ ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನ ಕುರಿತು ಎನ್ಎಸ್ಎ ಮಟ್ಟದ ಶೃಂಗಸಭೆ ಆಯೋಜಿಸಿದ ಭಾರತ; 7 ರಾಷ್ಟ್ರಗಳು ಹಾಜರು

Published On - 12:42 pm, Wed, 10 November 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್