AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರಾಬಂಕಿಯಲ್ಲಿ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಟ್ರಕ್​ ಒಂದಕ್ಕೊಂದು ಎಷ್ಟರ ಮಟ್ಟಿಗೆ ಅಂಟಿಕೊಂಡಿದ್ದವು ಎಂದರೆ, ಅದನ್ನು ಜೆಸಿಬಿ ತಂದು ಪ್ರತ್ಯೇಕ ಮಾಡಲಾಯಿತು.

ಬಾರಾಬಂಕಿಯಲ್ಲಿ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು
ಅಪಘಾತದ ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Oct 07, 2021 | 10:11 AM

Share

ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಇಂದು ಬೆಳಗ್ಗೆ ಸುಮಾರು 5.30ರ ಹೊತ್ತಿಗೆ ಪ್ರವಾಸಿಗರ ಬಸ್​ ಮತ್ತು ಟ್ರಕ್​ ಡಿಕ್ಕಿಯಾಗಿ 9 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಮಾರು 27 ಮಂದಿ ಗಾಯಗೊಂಡಿದ್ದಾರೆ. ಬಾರಾಬಂಕಿ ಜಿಲ್ಲೆಯ ​ ಬಾಬುರಿ ಎಂಬ ಗ್ರಾಮದ ಕಿಸಾನ್​ ಪಾತ್ ರಿಂಗ್ ರೋಡ್​​ನಲ್ಲಿ, ದೇವಾ ಪೊಲೀಸ್​ ಸ್ಟೇಶನ್​ ಬಳಿ ದುರ್ಘಟನೆ ನಡೆದಿದೆ.   ಈ ಟೂರಿಸ್ಟ್​ ಬಸ್​ ದೆಹಲಿಯಿಂದ ಬಹ್ರೈಚ್​ಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಗಾಯಗೊಂಡ 27 ಮಂದಿಯಲ್ಲಿ ಐವರ ಸ್ಥಿತಿ ತೀವ್ರ ಗಂಭೀರವಾಗಿದೆ.

ಬಸ್​ ಮತ್ತು ಟ್ರಕ್​ ಎರಡೂ ವಾಹನಗಳು ಅತಿಯಾದ ವೇಗದಲ್ಲಿ ಹೋಗುತ್ತಿದ್ದವು. ಬಸ್​ ಬಹ್ರೈಚ್​ಗೆ ಹೋಗುತ್ತಿದ್ದರೆ, ಟ್ರಕ್​ ಎದುರಿನಿಂದ ಬರುತ್ತಿತ್ತು. ಇವೆರಡರ ಮಧ್ಯೆ ಜಾನುವಾರವೊಂದು ಬಂದ ಕಾರಣ ಈ ಎರಡೂ ವಾಹನಗಳು ಅದನ್ನು ತಪ್ಪಿಸಲು ಮುಂದಾದವು. ಆದರೆ ಚಾಲಕರು ಸಮತೋಲನ ಕಳೆದುಕೊಂಡಿದ್ದಾರೆ. ಈ ಎರಡೂ ವಾಹನಗಳು ಡಿಕ್ಕಿಯಾಗಿವೆ. ಬಸ್​ನಲ್ಲಿ ಸುಮಾರು 70 ಜನರಿದ್ದರು. ಹಾಗೇ ಟ್ರಕ್​​ ಮರಳು ತುಂಬಿಕೊಂಡು ಬರುತ್ತಿತ್ತು. ಸದ್ಯ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಗಾಯಗೊಂಡವರನ್ನೆಲ್ಲ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಟ್ರಕ್​ ಒಂದಕ್ಕೊಂದು ಎಷ್ಟರ ಮಟ್ಟಿಗೆ ಅಂಟಿಕೊಂಡಿದ್ದವು ಎಂದರೆ, ಅದನ್ನು ಜೆಸಿಬಿ ತಂದು ಪ್ರತ್ಯೇಕ ಮಾಡಲಾಯಿತು. ಬಸ್​ ಮತ್ತು ಟ್ರಕ್​ಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದೆ. ಅತಿಯಾದ ವೇಗ, ಮತ್ತು ಜಾನುವಾರ ಮಧ್ಯೆ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇನ್ನಷ್ಟು ತನಿಖೆ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಬಟ್ಟೆ ತೊಳೆಯಲು ದೇಸಿ ವಾಶಿಂಗ್​ ಮಷೀನ್​ ಕಂಡುಹಿಡಿದ ವಿದ್ಯಾರ್ಥಿ! ವಿಡಿಯೋ ಮಿಸ್​ ಮಾಡ್ಕೊಳ್ಬೇಡಿ

ಎಲ್ಲ ಚುನಾವಣೆಗಳೂ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ ಅಂತಾ ಹೇಳೋಕಾಗಲ್ಲ: ಡಿ.ಕೆ. ಶಿವಕುಮಾರ್​ ಯಾಕೆ ಹೀಗಂದ್ರು?

Published On - 9:59 am, Thu, 7 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ