AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರಾಬಂಕಿಯಲ್ಲಿ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಟ್ರಕ್​ ಒಂದಕ್ಕೊಂದು ಎಷ್ಟರ ಮಟ್ಟಿಗೆ ಅಂಟಿಕೊಂಡಿದ್ದವು ಎಂದರೆ, ಅದನ್ನು ಜೆಸಿಬಿ ತಂದು ಪ್ರತ್ಯೇಕ ಮಾಡಲಾಯಿತು.

ಬಾರಾಬಂಕಿಯಲ್ಲಿ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು
ಅಪಘಾತದ ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 07, 2021 | 10:11 AM

Share

ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಇಂದು ಬೆಳಗ್ಗೆ ಸುಮಾರು 5.30ರ ಹೊತ್ತಿಗೆ ಪ್ರವಾಸಿಗರ ಬಸ್​ ಮತ್ತು ಟ್ರಕ್​ ಡಿಕ್ಕಿಯಾಗಿ 9 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಮಾರು 27 ಮಂದಿ ಗಾಯಗೊಂಡಿದ್ದಾರೆ. ಬಾರಾಬಂಕಿ ಜಿಲ್ಲೆಯ ​ ಬಾಬುರಿ ಎಂಬ ಗ್ರಾಮದ ಕಿಸಾನ್​ ಪಾತ್ ರಿಂಗ್ ರೋಡ್​​ನಲ್ಲಿ, ದೇವಾ ಪೊಲೀಸ್​ ಸ್ಟೇಶನ್​ ಬಳಿ ದುರ್ಘಟನೆ ನಡೆದಿದೆ.   ಈ ಟೂರಿಸ್ಟ್​ ಬಸ್​ ದೆಹಲಿಯಿಂದ ಬಹ್ರೈಚ್​ಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಗಾಯಗೊಂಡ 27 ಮಂದಿಯಲ್ಲಿ ಐವರ ಸ್ಥಿತಿ ತೀವ್ರ ಗಂಭೀರವಾಗಿದೆ.

ಬಸ್​ ಮತ್ತು ಟ್ರಕ್​ ಎರಡೂ ವಾಹನಗಳು ಅತಿಯಾದ ವೇಗದಲ್ಲಿ ಹೋಗುತ್ತಿದ್ದವು. ಬಸ್​ ಬಹ್ರೈಚ್​ಗೆ ಹೋಗುತ್ತಿದ್ದರೆ, ಟ್ರಕ್​ ಎದುರಿನಿಂದ ಬರುತ್ತಿತ್ತು. ಇವೆರಡರ ಮಧ್ಯೆ ಜಾನುವಾರವೊಂದು ಬಂದ ಕಾರಣ ಈ ಎರಡೂ ವಾಹನಗಳು ಅದನ್ನು ತಪ್ಪಿಸಲು ಮುಂದಾದವು. ಆದರೆ ಚಾಲಕರು ಸಮತೋಲನ ಕಳೆದುಕೊಂಡಿದ್ದಾರೆ. ಈ ಎರಡೂ ವಾಹನಗಳು ಡಿಕ್ಕಿಯಾಗಿವೆ. ಬಸ್​ನಲ್ಲಿ ಸುಮಾರು 70 ಜನರಿದ್ದರು. ಹಾಗೇ ಟ್ರಕ್​​ ಮರಳು ತುಂಬಿಕೊಂಡು ಬರುತ್ತಿತ್ತು. ಸದ್ಯ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಗಾಯಗೊಂಡವರನ್ನೆಲ್ಲ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಟ್ರಕ್​ ಒಂದಕ್ಕೊಂದು ಎಷ್ಟರ ಮಟ್ಟಿಗೆ ಅಂಟಿಕೊಂಡಿದ್ದವು ಎಂದರೆ, ಅದನ್ನು ಜೆಸಿಬಿ ತಂದು ಪ್ರತ್ಯೇಕ ಮಾಡಲಾಯಿತು. ಬಸ್​ ಮತ್ತು ಟ್ರಕ್​ಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದೆ. ಅತಿಯಾದ ವೇಗ, ಮತ್ತು ಜಾನುವಾರ ಮಧ್ಯೆ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇನ್ನಷ್ಟು ತನಿಖೆ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಬಟ್ಟೆ ತೊಳೆಯಲು ದೇಸಿ ವಾಶಿಂಗ್​ ಮಷೀನ್​ ಕಂಡುಹಿಡಿದ ವಿದ್ಯಾರ್ಥಿ! ವಿಡಿಯೋ ಮಿಸ್​ ಮಾಡ್ಕೊಳ್ಬೇಡಿ

ಎಲ್ಲ ಚುನಾವಣೆಗಳೂ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ ಅಂತಾ ಹೇಳೋಕಾಗಲ್ಲ: ಡಿ.ಕೆ. ಶಿವಕುಮಾರ್​ ಯಾಕೆ ಹೀಗಂದ್ರು?

Published On - 9:59 am, Thu, 7 October 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್