AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರಾಬಂಕಿಯಲ್ಲಿ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಟ್ರಕ್​ ಒಂದಕ್ಕೊಂದು ಎಷ್ಟರ ಮಟ್ಟಿಗೆ ಅಂಟಿಕೊಂಡಿದ್ದವು ಎಂದರೆ, ಅದನ್ನು ಜೆಸಿಬಿ ತಂದು ಪ್ರತ್ಯೇಕ ಮಾಡಲಾಯಿತು.

ಬಾರಾಬಂಕಿಯಲ್ಲಿ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು
ಅಪಘಾತದ ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 07, 2021 | 10:11 AM

Share

ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಇಂದು ಬೆಳಗ್ಗೆ ಸುಮಾರು 5.30ರ ಹೊತ್ತಿಗೆ ಪ್ರವಾಸಿಗರ ಬಸ್​ ಮತ್ತು ಟ್ರಕ್​ ಡಿಕ್ಕಿಯಾಗಿ 9 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಮಾರು 27 ಮಂದಿ ಗಾಯಗೊಂಡಿದ್ದಾರೆ. ಬಾರಾಬಂಕಿ ಜಿಲ್ಲೆಯ ​ ಬಾಬುರಿ ಎಂಬ ಗ್ರಾಮದ ಕಿಸಾನ್​ ಪಾತ್ ರಿಂಗ್ ರೋಡ್​​ನಲ್ಲಿ, ದೇವಾ ಪೊಲೀಸ್​ ಸ್ಟೇಶನ್​ ಬಳಿ ದುರ್ಘಟನೆ ನಡೆದಿದೆ.   ಈ ಟೂರಿಸ್ಟ್​ ಬಸ್​ ದೆಹಲಿಯಿಂದ ಬಹ್ರೈಚ್​ಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಗಾಯಗೊಂಡ 27 ಮಂದಿಯಲ್ಲಿ ಐವರ ಸ್ಥಿತಿ ತೀವ್ರ ಗಂಭೀರವಾಗಿದೆ.

ಬಸ್​ ಮತ್ತು ಟ್ರಕ್​ ಎರಡೂ ವಾಹನಗಳು ಅತಿಯಾದ ವೇಗದಲ್ಲಿ ಹೋಗುತ್ತಿದ್ದವು. ಬಸ್​ ಬಹ್ರೈಚ್​ಗೆ ಹೋಗುತ್ತಿದ್ದರೆ, ಟ್ರಕ್​ ಎದುರಿನಿಂದ ಬರುತ್ತಿತ್ತು. ಇವೆರಡರ ಮಧ್ಯೆ ಜಾನುವಾರವೊಂದು ಬಂದ ಕಾರಣ ಈ ಎರಡೂ ವಾಹನಗಳು ಅದನ್ನು ತಪ್ಪಿಸಲು ಮುಂದಾದವು. ಆದರೆ ಚಾಲಕರು ಸಮತೋಲನ ಕಳೆದುಕೊಂಡಿದ್ದಾರೆ. ಈ ಎರಡೂ ವಾಹನಗಳು ಡಿಕ್ಕಿಯಾಗಿವೆ. ಬಸ್​ನಲ್ಲಿ ಸುಮಾರು 70 ಜನರಿದ್ದರು. ಹಾಗೇ ಟ್ರಕ್​​ ಮರಳು ತುಂಬಿಕೊಂಡು ಬರುತ್ತಿತ್ತು. ಸದ್ಯ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಗಾಯಗೊಂಡವರನ್ನೆಲ್ಲ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಟ್ರಕ್​ ಒಂದಕ್ಕೊಂದು ಎಷ್ಟರ ಮಟ್ಟಿಗೆ ಅಂಟಿಕೊಂಡಿದ್ದವು ಎಂದರೆ, ಅದನ್ನು ಜೆಸಿಬಿ ತಂದು ಪ್ರತ್ಯೇಕ ಮಾಡಲಾಯಿತು. ಬಸ್​ ಮತ್ತು ಟ್ರಕ್​ಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದೆ. ಅತಿಯಾದ ವೇಗ, ಮತ್ತು ಜಾನುವಾರ ಮಧ್ಯೆ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇನ್ನಷ್ಟು ತನಿಖೆ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಬಟ್ಟೆ ತೊಳೆಯಲು ದೇಸಿ ವಾಶಿಂಗ್​ ಮಷೀನ್​ ಕಂಡುಹಿಡಿದ ವಿದ್ಯಾರ್ಥಿ! ವಿಡಿಯೋ ಮಿಸ್​ ಮಾಡ್ಕೊಳ್ಬೇಡಿ

ಎಲ್ಲ ಚುನಾವಣೆಗಳೂ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ ಅಂತಾ ಹೇಳೋಕಾಗಲ್ಲ: ಡಿ.ಕೆ. ಶಿವಕುಮಾರ್​ ಯಾಕೆ ಹೀಗಂದ್ರು?

Published On - 9:59 am, Thu, 7 October 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ