AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರಾಬಂಕಿಯಲ್ಲಿ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಟ್ರಕ್​ ಒಂದಕ್ಕೊಂದು ಎಷ್ಟರ ಮಟ್ಟಿಗೆ ಅಂಟಿಕೊಂಡಿದ್ದವು ಎಂದರೆ, ಅದನ್ನು ಜೆಸಿಬಿ ತಂದು ಪ್ರತ್ಯೇಕ ಮಾಡಲಾಯಿತು.

ಬಾರಾಬಂಕಿಯಲ್ಲಿ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು
ಅಪಘಾತದ ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 07, 2021 | 10:11 AM

Share

ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಇಂದು ಬೆಳಗ್ಗೆ ಸುಮಾರು 5.30ರ ಹೊತ್ತಿಗೆ ಪ್ರವಾಸಿಗರ ಬಸ್​ ಮತ್ತು ಟ್ರಕ್​ ಡಿಕ್ಕಿಯಾಗಿ 9 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಮಾರು 27 ಮಂದಿ ಗಾಯಗೊಂಡಿದ್ದಾರೆ. ಬಾರಾಬಂಕಿ ಜಿಲ್ಲೆಯ ​ ಬಾಬುರಿ ಎಂಬ ಗ್ರಾಮದ ಕಿಸಾನ್​ ಪಾತ್ ರಿಂಗ್ ರೋಡ್​​ನಲ್ಲಿ, ದೇವಾ ಪೊಲೀಸ್​ ಸ್ಟೇಶನ್​ ಬಳಿ ದುರ್ಘಟನೆ ನಡೆದಿದೆ.   ಈ ಟೂರಿಸ್ಟ್​ ಬಸ್​ ದೆಹಲಿಯಿಂದ ಬಹ್ರೈಚ್​ಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಗಾಯಗೊಂಡ 27 ಮಂದಿಯಲ್ಲಿ ಐವರ ಸ್ಥಿತಿ ತೀವ್ರ ಗಂಭೀರವಾಗಿದೆ.

ಬಸ್​ ಮತ್ತು ಟ್ರಕ್​ ಎರಡೂ ವಾಹನಗಳು ಅತಿಯಾದ ವೇಗದಲ್ಲಿ ಹೋಗುತ್ತಿದ್ದವು. ಬಸ್​ ಬಹ್ರೈಚ್​ಗೆ ಹೋಗುತ್ತಿದ್ದರೆ, ಟ್ರಕ್​ ಎದುರಿನಿಂದ ಬರುತ್ತಿತ್ತು. ಇವೆರಡರ ಮಧ್ಯೆ ಜಾನುವಾರವೊಂದು ಬಂದ ಕಾರಣ ಈ ಎರಡೂ ವಾಹನಗಳು ಅದನ್ನು ತಪ್ಪಿಸಲು ಮುಂದಾದವು. ಆದರೆ ಚಾಲಕರು ಸಮತೋಲನ ಕಳೆದುಕೊಂಡಿದ್ದಾರೆ. ಈ ಎರಡೂ ವಾಹನಗಳು ಡಿಕ್ಕಿಯಾಗಿವೆ. ಬಸ್​ನಲ್ಲಿ ಸುಮಾರು 70 ಜನರಿದ್ದರು. ಹಾಗೇ ಟ್ರಕ್​​ ಮರಳು ತುಂಬಿಕೊಂಡು ಬರುತ್ತಿತ್ತು. ಸದ್ಯ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಗಾಯಗೊಂಡವರನ್ನೆಲ್ಲ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಟ್ರಕ್​ ಒಂದಕ್ಕೊಂದು ಎಷ್ಟರ ಮಟ್ಟಿಗೆ ಅಂಟಿಕೊಂಡಿದ್ದವು ಎಂದರೆ, ಅದನ್ನು ಜೆಸಿಬಿ ತಂದು ಪ್ರತ್ಯೇಕ ಮಾಡಲಾಯಿತು. ಬಸ್​ ಮತ್ತು ಟ್ರಕ್​ಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದೆ. ಅತಿಯಾದ ವೇಗ, ಮತ್ತು ಜಾನುವಾರ ಮಧ್ಯೆ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇನ್ನಷ್ಟು ತನಿಖೆ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಬಟ್ಟೆ ತೊಳೆಯಲು ದೇಸಿ ವಾಶಿಂಗ್​ ಮಷೀನ್​ ಕಂಡುಹಿಡಿದ ವಿದ್ಯಾರ್ಥಿ! ವಿಡಿಯೋ ಮಿಸ್​ ಮಾಡ್ಕೊಳ್ಬೇಡಿ

ಎಲ್ಲ ಚುನಾವಣೆಗಳೂ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ ಅಂತಾ ಹೇಳೋಕಾಗಲ್ಲ: ಡಿ.ಕೆ. ಶಿವಕುಮಾರ್​ ಯಾಕೆ ಹೀಗಂದ್ರು?

Published On - 9:59 am, Thu, 7 October 21

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​