AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರಾಬಂಕಿಯಲ್ಲಿ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಟ್ರಕ್​ ಒಂದಕ್ಕೊಂದು ಎಷ್ಟರ ಮಟ್ಟಿಗೆ ಅಂಟಿಕೊಂಡಿದ್ದವು ಎಂದರೆ, ಅದನ್ನು ಜೆಸಿಬಿ ತಂದು ಪ್ರತ್ಯೇಕ ಮಾಡಲಾಯಿತು.

ಬಾರಾಬಂಕಿಯಲ್ಲಿ ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು
ಅಪಘಾತದ ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 07, 2021 | 10:11 AM

Share

ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಇಂದು ಬೆಳಗ್ಗೆ ಸುಮಾರು 5.30ರ ಹೊತ್ತಿಗೆ ಪ್ರವಾಸಿಗರ ಬಸ್​ ಮತ್ತು ಟ್ರಕ್​ ಡಿಕ್ಕಿಯಾಗಿ 9 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಮಾರು 27 ಮಂದಿ ಗಾಯಗೊಂಡಿದ್ದಾರೆ. ಬಾರಾಬಂಕಿ ಜಿಲ್ಲೆಯ ​ ಬಾಬುರಿ ಎಂಬ ಗ್ರಾಮದ ಕಿಸಾನ್​ ಪಾತ್ ರಿಂಗ್ ರೋಡ್​​ನಲ್ಲಿ, ದೇವಾ ಪೊಲೀಸ್​ ಸ್ಟೇಶನ್​ ಬಳಿ ದುರ್ಘಟನೆ ನಡೆದಿದೆ.   ಈ ಟೂರಿಸ್ಟ್​ ಬಸ್​ ದೆಹಲಿಯಿಂದ ಬಹ್ರೈಚ್​ಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಗಾಯಗೊಂಡ 27 ಮಂದಿಯಲ್ಲಿ ಐವರ ಸ್ಥಿತಿ ತೀವ್ರ ಗಂಭೀರವಾಗಿದೆ.

ಬಸ್​ ಮತ್ತು ಟ್ರಕ್​ ಎರಡೂ ವಾಹನಗಳು ಅತಿಯಾದ ವೇಗದಲ್ಲಿ ಹೋಗುತ್ತಿದ್ದವು. ಬಸ್​ ಬಹ್ರೈಚ್​ಗೆ ಹೋಗುತ್ತಿದ್ದರೆ, ಟ್ರಕ್​ ಎದುರಿನಿಂದ ಬರುತ್ತಿತ್ತು. ಇವೆರಡರ ಮಧ್ಯೆ ಜಾನುವಾರವೊಂದು ಬಂದ ಕಾರಣ ಈ ಎರಡೂ ವಾಹನಗಳು ಅದನ್ನು ತಪ್ಪಿಸಲು ಮುಂದಾದವು. ಆದರೆ ಚಾಲಕರು ಸಮತೋಲನ ಕಳೆದುಕೊಂಡಿದ್ದಾರೆ. ಈ ಎರಡೂ ವಾಹನಗಳು ಡಿಕ್ಕಿಯಾಗಿವೆ. ಬಸ್​ನಲ್ಲಿ ಸುಮಾರು 70 ಜನರಿದ್ದರು. ಹಾಗೇ ಟ್ರಕ್​​ ಮರಳು ತುಂಬಿಕೊಂಡು ಬರುತ್ತಿತ್ತು. ಸದ್ಯ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಗಾಯಗೊಂಡವರನ್ನೆಲ್ಲ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್​ ಮತ್ತು ಟ್ರಕ್​ ಒಂದಕ್ಕೊಂದು ಎಷ್ಟರ ಮಟ್ಟಿಗೆ ಅಂಟಿಕೊಂಡಿದ್ದವು ಎಂದರೆ, ಅದನ್ನು ಜೆಸಿಬಿ ತಂದು ಪ್ರತ್ಯೇಕ ಮಾಡಲಾಯಿತು. ಬಸ್​ ಮತ್ತು ಟ್ರಕ್​ಗಳ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದೆ. ಅತಿಯಾದ ವೇಗ, ಮತ್ತು ಜಾನುವಾರ ಮಧ್ಯೆ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇನ್ನಷ್ಟು ತನಿಖೆ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಬಟ್ಟೆ ತೊಳೆಯಲು ದೇಸಿ ವಾಶಿಂಗ್​ ಮಷೀನ್​ ಕಂಡುಹಿಡಿದ ವಿದ್ಯಾರ್ಥಿ! ವಿಡಿಯೋ ಮಿಸ್​ ಮಾಡ್ಕೊಳ್ಬೇಡಿ

ಎಲ್ಲ ಚುನಾವಣೆಗಳೂ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ ಅಂತಾ ಹೇಳೋಕಾಗಲ್ಲ: ಡಿ.ಕೆ. ಶಿವಕುಮಾರ್​ ಯಾಕೆ ಹೀಗಂದ್ರು?

Published On - 9:59 am, Thu, 7 October 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!