AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Rain: ನೋಡನೋಡುತ್ತಿದ್ದಂತೆ ಕುಸಿದು ನದಿಗೆ ಬಿದ್ದ ಮನೆ; ಭಯಾನಕ ದೃಶ್ಯದ ವಿಡಿಯೋ ವೈರಲ್​

ಅತಿಯಾದ ಮಳೆಯಿಂದಾಗಿ ಸಿಕ್ರಹ್ನಾ (ಬುರ್ಹಿ ಗಂಡಕ್) ನದಿಯ ನೀರಿನ ಮಟ್ಟ ಏರಿದೆ. ಇದರಿಂದಾಗಿ ನದಿ ದಡದಲ್ಲಿ ಮಣ್ಣಿನ ಸವಕಳಿ ಉಂಟಾಗುತ್ತಿದೆ. ನದಿ ದಡದಲ್ಲಿ ಇರುವ ಮನೆಗಳಿಗೆ ಇದು ಅಪಾಯ ತಂದೊಡ್ಡುತ್ತಿದೆ.

Bihar Rain: ನೋಡನೋಡುತ್ತಿದ್ದಂತೆ ಕುಸಿದು ನದಿಗೆ ಬಿದ್ದ ಮನೆ; ಭಯಾನಕ ದೃಶ್ಯದ ವಿಡಿಯೋ ವೈರಲ್​
ಮನೆ ಕುಸಿತ
TV9 Web
| Edited By: |

Updated on:Jul 04, 2021 | 3:26 PM

Share

ಪಾಟ್ನಾ: ಬಿಹಾರದಲ್ಲಿ ನಿರಂತರವಾಗಿ, ಸಿಕ್ಕಾಪಟೆ ಮಳೆ ಸುರಿಯುತ್ತಿದೆ. ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್​ ಘೋಷಣೆಯಾಗಿದೆ. ನದಿಗಳು ತುಂಬಿ ಹರಿಯುತ್ತಿವೆ. ಮಣ್ಣು ಕುಸಿತ, ಮನೆ ಕುಸಿತದಂಥ ಅವಘಡಗಳು ಸಂಭವಿಸುತ್ತಿವೆ. ಭವಾನಿಪುರದ ಮೋತಿಹಾರದಲ್ಲಿ ನೋಡುನೋಡುತ್ತಿದ್ದಂತೆಯೇ ಮನೆಯೊಂದು ಕುಸಿದುಬಿದ್ದಿದೆ. ಆ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗುತ್ತಿದೆ.

ಅತಿಯಾದ ಮಳೆಯಿಂದಾಗಿ ಸಿಕ್ರಹ್ನಾ (ಬುರ್ಹಿ ಗಂಡಕ್) ನದಿಯ ನೀರಿನ ಮಟ್ಟ ಏರಿದೆ. ಇದರಿಂದಾಗಿ ನದಿ ದಡದಲ್ಲಿ ಮಣ್ಣಿನ ಸವಕಳಿ ಉಂಟಾಗುತ್ತಿದೆ. ನದಿ ದಡದಲ್ಲಿ ಇರುವ ಮನೆಗಳಿಗೆ ಇದು ಅಪಾಯ ತಂದೊಡ್ಡುತ್ತಿದೆ. ಇದೀಗ ಕುಸಿದು ಬಿದ್ದಿರುವ ಮನೆಯೂ ಕೂಡ ಸಿಕ್ರಹ್ನಾ ನದಿ ದಡದಲ್ಲಿಯೇ ಇದ್ದಿದ್ದಾಗಿತ್ತು. ಅತಿಯಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈ ಮನೆ ತೀವ್ರವಾಗಿ ಹಾನಿಗೊಳಗಾದ ಹಿನ್ನೆಲೆಯಲ್ಲಿ, ಅದರಲ್ಲಿದ್ದ ನಿವಾಸಿಗಳು ಮನೆ ತೊರೆದಾಗಿತ್ತು. ಮನೆ ಕುಸಿದು ನದಿಗೆ ಬಿದ್ದು, ಅದರ ಭಗ್ನಾವಶೇಷಗಳೆಲ್ಲ ನದಿಯಲ್ಲಿ ತೇಲಿ ಹೋಗುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಬಿಹಾರದಲ್ಲಿ ಬುಧವಾರದವರೆಗೂ ಮಳೆ ಮುಂದುವರಿಯಲಿದೆ. ಹಾಗೇ, ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ, ಮೇಘಾಲಯ, ರಾಯಲ್​ಸೀಮಾ, ತಮಿಳುನಾಡು, ಪುದುಚೇರಿಗಳಲ್ಲಿ ಅತಿಯಾದ ಮಳೆಯಾಗಲಿದೆ ಎಂದು ಇಂದು ಹವಾಮಾನ ಇಲಾಖೆ ತಿಳಿಸಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್​, ಹರ್ಯಾಣ, ಚಂಡೀಗಢ್​, ದೆಹಲಿ ಮತ್ತು ಜಮ್ಮುಕಾಶ್ಮೀರ, ಲಡಾಖ್​, ಗಿಲ್ಗಿಟ್​ ಬಲ್ಚೀಸ್ತಾನ್​, ಉತ್ತರ ಪ್ರದೇಶ, ಛತ್ತೀಸ್​ಗಢ, ನಾಗಾಲ್ಯಾಂಡ್​, ಮಣಿಪುರದ ಕೆಲವು ಕಡೆ ಗುಡುಗು-ಮಿಂಚು-ಗಾಳಿ(30-40 ಕಿಮೀ ವೇಗ)ಸಹಿತ ಮಳೆ ಬೀಳಲಿದೆ ಎಂದೂ ಐಎಂಡಿ ಅಂದಾಜಿಸಿದೆ.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್​ಗೆ ಸ್ವಾತಂತ್ರ್ಯ ದಿನದ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

A house collapses Due to Heavy Rainfall in Bhawanipur Of Bihar

Published On - 3:24 pm, Sun, 4 July 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?