AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತಾ ಪಡೆ ಬಳಿ ಸಿಕ್ಕಿಬಿದ್ದ ಲಷ್ಕರ್​ ಇ ತೊಯ್ಬಾ ಕಮಾಂಡರ್​; ಇಬ್ಬರು ಪೊಲೀಸರ ಹತ್ಯೆ ಮಾಡಿದ್ದ ಉಗ್ರ

ಪೂಂಚ್​ ಮತ್ತು ರಾಜೌರಿ ಜಿಲ್ಲೆಗಳಲ್ಲೂ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಇಲ್ಲಿ ಎನ್​ಕೌಂಟರ್​ 5ನೇ ದಿನಕ್ಕೆ ಕಾಲಿಟ್ಟಿದೆ. ಭಾರತೀಯ ಸೇನೆಯಲ್ಲಿ ಪ್ಯಾರಾ ಕಮಾಂಡರ್​​ಗಳನ್ನು ನಿಯೋಜಿಸಲಾಗಿದೆ.

ಭದ್ರತಾ ಪಡೆ ಬಳಿ ಸಿಕ್ಕಿಬಿದ್ದ ಲಷ್ಕರ್​ ಇ ತೊಯ್ಬಾ ಕಮಾಂಡರ್​; ಇಬ್ಬರು ಪೊಲೀಸರ ಹತ್ಯೆ ಮಾಡಿದ್ದ ಉಗ್ರ
ಸೇನಾ ಕಾರ್ಯಾಚರಣೆ
TV9 Web
| Updated By: Lakshmi Hegde|

Updated on: Oct 16, 2021 | 11:31 AM

Share

ಶ್ರೀನಗರದಲ್ಲಿ ಇಬ್ಬರು ಪೊಲೀಸ್​ ಸಿಬ್ಬಂದಿಯ ಹತ್ಯೆಯಲ್ಲಿ ಭಾಗವಹಿಸಿದ್ದ ಲಷ್ಕರ್​ ಇ ತೊಯ್ಬಾದ ಕಮಾಂಡರ್ ಉಮರ್ ಮುಸ್ತಾಕ್ ಖಾಂಡೇ (​​​ ಇದೀಗ ಭಾರತೀಯ ಭದ್ರತಾ ಪಡೆಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಜಮ್ಮು-ಕಾಶ್ಮಿರದ ಪುಲ್ವಾಮಾ ಜಿಲ್ಲೆಯ ಪಾಂಪೋರ್​​ನ ಡ್ರಾಂಗ್ಬಾಲ್​ ಎಂಬಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್​​ಕೌಂಟರ್​ ನಡೆಯುತ್ತಿದೆ. ಇಂದು ಬೆಳಗ್ಗೆ ಕಮಾಂಡರ್​​ನನ್ನು ಹಿಡಿಯಲಾಗಿದೆ ಎಂದು ಕಾಶ್ಮಿರ ವಲಯದ ಪೊಲೀಸರು ಟ್ವೀಟ್​ ಮಾಡಿದ್ದಾರೆ. 

ಡ್ರಾಂಗ್ಬಾಲ್​​ನಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಸೇನಾ ಸಿಬ್ಬಂತಿ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿದ್ದರು. ಆ ಪ್ರದೇಶವನ್ನು ಸುತ್ತುವರಿದಿದ್ದರು. ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಉಗ್ರರು ಸಿಕ್ಕಾಪಟೆ ಗುಂಡಿನ ದಾಳಿ ನಡೆಸಿದ್ದಾರೆ. ಅದಕ್ಕೆ ಪ್ರತಿಯಾಗಿ ರಕ್ಷಣಾ ಸಿಬ್ಬಂದಿಯೂ ಗುಂಡಿನ ದಾಳಿ ನಡೆಸಿದರು.

ಈ ಮಧ್ಯೆ ಪೂಂಚ್​ ಮತ್ತು ರಾಜೌರಿ ಜಿಲ್ಲೆಗಳಲ್ಲೂ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಇಲ್ಲಿ ಎನ್​ಕೌಂಟರ್​ 5ನೇ ದಿನಕ್ಕೆ ಕಾಲಿಟ್ಟಿದೆ. ಭಾರತೀಯ ಸೇನೆಯಲ್ಲಿ ಪ್ಯಾರಾ ಕಮಾಂಡರ್​​ಗಳನ್ನು ನಿಯೋಜಿಸಲಾಗಿದೆ. ಆದರೆ ಎಷ್ಟು ಉಗ್ರರ ಹತ್ಯೆಯಾಗಿದೆ? ಎಷ್ಟು ಮಂದಿಯ ಬಂಧನವಾಗಿದೆ ಎಂಬುದರ ನಿಖರ ಸಂಖ್ಯೆ ಇನ್ನೂ ಗೊತ್ತಾಗಿಲ್ಲ. ಅಂದಹಾಗೆ ಭಿಂಬರ್​ ಗಲಿ ಪ್ರದೇಶದಲ್ಲಿ ಪೂಂಚ್​​-ರಾಜೌರಿ ಹೆದ್ದಾರಿ  ಬಂದ್​ ಆಗಿ ಮೂರು ದಿನ ಆಗಿದ್ದು, ಇಂದೂ ಕೂಡ ಅದೇ ಸ್ಥಿತಿ ಇರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಇನ್ನು ಉಗ್ರರ ದಾಳಿಯಲ್ಲಿ ಮಂಗಳವಾರ ಕಿರಿಯ ಕಮಾಂಡರ್​ ಸೇರಿ ಐವರು ಯೋಧರು ಮೃತಪಟ್ಟಿದ್ದರೆ, ಶುಕ್ರವಾರ ಇಬ್ಬರು ಹುತಾತ್ಮರಾಗಿದ್ದಾರೆ.  ಇಲ್ಲಿನ ಕಾರ್ಯಾಚರಣೆ ಸಂಪೂರ್ಣ ಮುಕ್ತಾಯವಾದ ಮೇಲೆ, ಎಲ್ಲ ಮಾಹಿತಿಗಳನ್ನೂ ಹಂಚಿಕೊಳ್ಳಲಾಗುವುದು ಎಂದು ಸೇನೆ ಮಾಹಿತಿ ನೀಡಿದೆ.

ಇದನ್ನೂ ಓದಿ: ‘ಎರಡೂ ಡೋಸ್​ ಲಸಿಕೆ ಪಡೆದ ಭಾರತೀಯರು ಯುಎಸ್​ಗೆ ಪ್ರಯಾಣ ಮಾಡಬಹುದು’ -ಶ್ವೇತ ಭವನದಿಂದ ಹೊಸ ಮಾರ್ಗಸೂಚಿ ಘೋಷಣೆ

ದಾವಣಗೆರೆಯಲ್ಲಿ ಮಗುವಿನ ಮೇಲೆ ಹರಿದ ಕಾರು! ಮಗು ಸಾವು, ಗರ್ಭಿಣಿಗೆ ಗಾಯ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ