AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತಾ ಪಡೆ ಬಳಿ ಸಿಕ್ಕಿಬಿದ್ದ ಲಷ್ಕರ್​ ಇ ತೊಯ್ಬಾ ಕಮಾಂಡರ್​; ಇಬ್ಬರು ಪೊಲೀಸರ ಹತ್ಯೆ ಮಾಡಿದ್ದ ಉಗ್ರ

ಪೂಂಚ್​ ಮತ್ತು ರಾಜೌರಿ ಜಿಲ್ಲೆಗಳಲ್ಲೂ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಇಲ್ಲಿ ಎನ್​ಕೌಂಟರ್​ 5ನೇ ದಿನಕ್ಕೆ ಕಾಲಿಟ್ಟಿದೆ. ಭಾರತೀಯ ಸೇನೆಯಲ್ಲಿ ಪ್ಯಾರಾ ಕಮಾಂಡರ್​​ಗಳನ್ನು ನಿಯೋಜಿಸಲಾಗಿದೆ.

ಭದ್ರತಾ ಪಡೆ ಬಳಿ ಸಿಕ್ಕಿಬಿದ್ದ ಲಷ್ಕರ್​ ಇ ತೊಯ್ಬಾ ಕಮಾಂಡರ್​; ಇಬ್ಬರು ಪೊಲೀಸರ ಹತ್ಯೆ ಮಾಡಿದ್ದ ಉಗ್ರ
ಸೇನಾ ಕಾರ್ಯಾಚರಣೆ
Follow us
TV9 Web
| Updated By: Lakshmi Hegde

Updated on: Oct 16, 2021 | 11:31 AM

ಶ್ರೀನಗರದಲ್ಲಿ ಇಬ್ಬರು ಪೊಲೀಸ್​ ಸಿಬ್ಬಂದಿಯ ಹತ್ಯೆಯಲ್ಲಿ ಭಾಗವಹಿಸಿದ್ದ ಲಷ್ಕರ್​ ಇ ತೊಯ್ಬಾದ ಕಮಾಂಡರ್ ಉಮರ್ ಮುಸ್ತಾಕ್ ಖಾಂಡೇ (​​​ ಇದೀಗ ಭಾರತೀಯ ಭದ್ರತಾ ಪಡೆಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಜಮ್ಮು-ಕಾಶ್ಮಿರದ ಪುಲ್ವಾಮಾ ಜಿಲ್ಲೆಯ ಪಾಂಪೋರ್​​ನ ಡ್ರಾಂಗ್ಬಾಲ್​ ಎಂಬಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್​​ಕೌಂಟರ್​ ನಡೆಯುತ್ತಿದೆ. ಇಂದು ಬೆಳಗ್ಗೆ ಕಮಾಂಡರ್​​ನನ್ನು ಹಿಡಿಯಲಾಗಿದೆ ಎಂದು ಕಾಶ್ಮಿರ ವಲಯದ ಪೊಲೀಸರು ಟ್ವೀಟ್​ ಮಾಡಿದ್ದಾರೆ. 

ಡ್ರಾಂಗ್ಬಾಲ್​​ನಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಸೇನಾ ಸಿಬ್ಬಂತಿ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿದ್ದರು. ಆ ಪ್ರದೇಶವನ್ನು ಸುತ್ತುವರಿದಿದ್ದರು. ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಉಗ್ರರು ಸಿಕ್ಕಾಪಟೆ ಗುಂಡಿನ ದಾಳಿ ನಡೆಸಿದ್ದಾರೆ. ಅದಕ್ಕೆ ಪ್ರತಿಯಾಗಿ ರಕ್ಷಣಾ ಸಿಬ್ಬಂದಿಯೂ ಗುಂಡಿನ ದಾಳಿ ನಡೆಸಿದರು.

ಈ ಮಧ್ಯೆ ಪೂಂಚ್​ ಮತ್ತು ರಾಜೌರಿ ಜಿಲ್ಲೆಗಳಲ್ಲೂ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಇಲ್ಲಿ ಎನ್​ಕೌಂಟರ್​ 5ನೇ ದಿನಕ್ಕೆ ಕಾಲಿಟ್ಟಿದೆ. ಭಾರತೀಯ ಸೇನೆಯಲ್ಲಿ ಪ್ಯಾರಾ ಕಮಾಂಡರ್​​ಗಳನ್ನು ನಿಯೋಜಿಸಲಾಗಿದೆ. ಆದರೆ ಎಷ್ಟು ಉಗ್ರರ ಹತ್ಯೆಯಾಗಿದೆ? ಎಷ್ಟು ಮಂದಿಯ ಬಂಧನವಾಗಿದೆ ಎಂಬುದರ ನಿಖರ ಸಂಖ್ಯೆ ಇನ್ನೂ ಗೊತ್ತಾಗಿಲ್ಲ. ಅಂದಹಾಗೆ ಭಿಂಬರ್​ ಗಲಿ ಪ್ರದೇಶದಲ್ಲಿ ಪೂಂಚ್​​-ರಾಜೌರಿ ಹೆದ್ದಾರಿ  ಬಂದ್​ ಆಗಿ ಮೂರು ದಿನ ಆಗಿದ್ದು, ಇಂದೂ ಕೂಡ ಅದೇ ಸ್ಥಿತಿ ಇರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.  ಇನ್ನು ಉಗ್ರರ ದಾಳಿಯಲ್ಲಿ ಮಂಗಳವಾರ ಕಿರಿಯ ಕಮಾಂಡರ್​ ಸೇರಿ ಐವರು ಯೋಧರು ಮೃತಪಟ್ಟಿದ್ದರೆ, ಶುಕ್ರವಾರ ಇಬ್ಬರು ಹುತಾತ್ಮರಾಗಿದ್ದಾರೆ.  ಇಲ್ಲಿನ ಕಾರ್ಯಾಚರಣೆ ಸಂಪೂರ್ಣ ಮುಕ್ತಾಯವಾದ ಮೇಲೆ, ಎಲ್ಲ ಮಾಹಿತಿಗಳನ್ನೂ ಹಂಚಿಕೊಳ್ಳಲಾಗುವುದು ಎಂದು ಸೇನೆ ಮಾಹಿತಿ ನೀಡಿದೆ.

ಇದನ್ನೂ ಓದಿ: ‘ಎರಡೂ ಡೋಸ್​ ಲಸಿಕೆ ಪಡೆದ ಭಾರತೀಯರು ಯುಎಸ್​ಗೆ ಪ್ರಯಾಣ ಮಾಡಬಹುದು’ -ಶ್ವೇತ ಭವನದಿಂದ ಹೊಸ ಮಾರ್ಗಸೂಚಿ ಘೋಷಣೆ

ದಾವಣಗೆರೆಯಲ್ಲಿ ಮಗುವಿನ ಮೇಲೆ ಹರಿದ ಕಾರು! ಮಗು ಸಾವು, ಗರ್ಭಿಣಿಗೆ ಗಾಯ

ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ