AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ, ಕಾಪಾಡಿದ ಮತ್ತೊಂದು ಶ್ವಾನ

ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ.

Maharashtra: ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ, ಕಾಪಾಡಿದ ಮತ್ತೊಂದು ಶ್ವಾನ
ಸಿಸಿಟಿವಿ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Jul 28, 2023 | 2:54 PM

Share

ನಾಸಿಕ್, ಜು.28​: ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ. ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದಾಗ ಪಕ್ಕದಲ್ಲೇ ಇದ್ದ ಮತ್ತೊಂದು ನಾಯಿ, ದಾಳಿಗೊಳಗಾಗಿದ್ದ ನಾಯಿಯ ಕೂಗು ಕೇಳಿ ಓಡಿ ಬಂದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​ ಆಗಿದೆ.

ನಾಸಿಕ್‌ನ ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ, ಸಿಸಿ ಟಿವಿಯಲ್ಲಿ ರೆಕಾರ್ಡ್​​ ಆಗಿರುವಂತೆ ವಿಡಿಯೋದಲ್ಲಿ ಚಿರತೆಯು ಮನೆ ಆವರಣದಿಂದ ಶ್ವಾನ ಮಲಗಿರುವ ಕಡೆಗೆ ಬರುವುದನ್ನು ನೋಡಬಹುದು. ಮನೆಯ ದ್ವಾರದ ಬಳಿ ಮಲಗಿದ್ದ ಶ್ವಾನದ ಬಳಿ ನಿಧಾನವಾಗಿ ಹೆಜ್ಜೆ ಹಾಕುತ್ತ ಬಂದು ಥಟ್ಟನೆ ದಾಳಿ ಮಾಡಿದೆ. ಈ ನಾಯಿ ಕೂಗು ಕೇಳಿ ಪಕ್ಕದಲ್ಲೇ ಮಲಗಿದ್ದ ಮತ್ತೊಂದು ಶ್ವಾನ ಚಿರತೆಯನ್ನು ಓಡಿಸಲು ಮುಂದಾಗಿದೆ. ನಂತರ ಎರಡು ನಾಯಿಗಳು ಸೇರಿ ಚಿರತೆಯನ್ನು ಮನೆಯ ಆವರಣದಿಂದ ಓಡಿಸಿದೆ.

ಇದನ್ನೂ ಓದಿ: ಒಂದೂವರೆ ತಾಸು ಮುಂಚಿತವಾಗಿ ಬಂದು 45 ಪ್ರಯಾಣಿಕರನ್ನು ಬಿಟ್ಟು ಹೊರಟೇ ಬಿಡ್ತು ಗೋವಾ ಎಕ್ಸ್​ಪ್ರೆಸ್​ ರೈಲು

ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿ ವೃಶಾಲಿ ಗಾಡೆ ಅವರು ಸುದ್ದಿ ಸಂಸ್ಥೆ ಎಎನ್​​ಐಗೆ ನೀಡಿರುವ ಹೇಳಿಕೆ ಪ್ರಕಾರ ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಪ್ರಭಾವ್ಕರ್ ಮನುಡೆ ಎಂಬವವರ ಮನೆಗೆ ಈ ಚಿರತೆ ಬಂದಿದೆ. ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದೆ. ಮತ್ತೊಂದು ಶ್ವಾನ ದಾಳಿಗೊಳಗಾಗಿದ್ದ ನಾಯಿಯ ಕೂಗು ಕೇಳಿ ಚಿರತೆಯನ್ನು ಅಲ್ಲಿಂದ ಓಡಿಸಿದೆ. ಚಿರತೆ ಪಕ್ಕದಲ್ಲೇ ಇರುವ ಹೊಲದ ಮೂಲಕ ಈ ಪ್ರದೇಶಕ್ಕೆ ಬಂದಿದೆ ಎಂದು ಶಂಕಿಸಲಾಗಿದೆ. ಇನ್ನೂ ಈ ಚಿರತೆಯನ್ನು ಪತ್ತೆ ಮಾಡಲು ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಇಲ್ಲಿಯವರೆಗೆ ಈ ಚಿರತೆ ಮನುಷ್ಯರ ಮೇಲೆ ದಾಳಿ ಮಾಡಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್