AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ, ಕಾಪಾಡಿದ ಮತ್ತೊಂದು ಶ್ವಾನ

ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ.

Maharashtra: ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ, ಕಾಪಾಡಿದ ಮತ್ತೊಂದು ಶ್ವಾನ
ಸಿಸಿಟಿವಿ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Jul 28, 2023 | 2:54 PM

Share

ನಾಸಿಕ್, ಜು.28​: ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ. ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದಾಗ ಪಕ್ಕದಲ್ಲೇ ಇದ್ದ ಮತ್ತೊಂದು ನಾಯಿ, ದಾಳಿಗೊಳಗಾಗಿದ್ದ ನಾಯಿಯ ಕೂಗು ಕೇಳಿ ಓಡಿ ಬಂದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​ ಆಗಿದೆ.

ನಾಸಿಕ್‌ನ ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ, ಸಿಸಿ ಟಿವಿಯಲ್ಲಿ ರೆಕಾರ್ಡ್​​ ಆಗಿರುವಂತೆ ವಿಡಿಯೋದಲ್ಲಿ ಚಿರತೆಯು ಮನೆ ಆವರಣದಿಂದ ಶ್ವಾನ ಮಲಗಿರುವ ಕಡೆಗೆ ಬರುವುದನ್ನು ನೋಡಬಹುದು. ಮನೆಯ ದ್ವಾರದ ಬಳಿ ಮಲಗಿದ್ದ ಶ್ವಾನದ ಬಳಿ ನಿಧಾನವಾಗಿ ಹೆಜ್ಜೆ ಹಾಕುತ್ತ ಬಂದು ಥಟ್ಟನೆ ದಾಳಿ ಮಾಡಿದೆ. ಈ ನಾಯಿ ಕೂಗು ಕೇಳಿ ಪಕ್ಕದಲ್ಲೇ ಮಲಗಿದ್ದ ಮತ್ತೊಂದು ಶ್ವಾನ ಚಿರತೆಯನ್ನು ಓಡಿಸಲು ಮುಂದಾಗಿದೆ. ನಂತರ ಎರಡು ನಾಯಿಗಳು ಸೇರಿ ಚಿರತೆಯನ್ನು ಮನೆಯ ಆವರಣದಿಂದ ಓಡಿಸಿದೆ.

ಇದನ್ನೂ ಓದಿ: ಒಂದೂವರೆ ತಾಸು ಮುಂಚಿತವಾಗಿ ಬಂದು 45 ಪ್ರಯಾಣಿಕರನ್ನು ಬಿಟ್ಟು ಹೊರಟೇ ಬಿಡ್ತು ಗೋವಾ ಎಕ್ಸ್​ಪ್ರೆಸ್​ ರೈಲು

ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿ ವೃಶಾಲಿ ಗಾಡೆ ಅವರು ಸುದ್ದಿ ಸಂಸ್ಥೆ ಎಎನ್​​ಐಗೆ ನೀಡಿರುವ ಹೇಳಿಕೆ ಪ್ರಕಾರ ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಪ್ರಭಾವ್ಕರ್ ಮನುಡೆ ಎಂಬವವರ ಮನೆಗೆ ಈ ಚಿರತೆ ಬಂದಿದೆ. ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದೆ. ಮತ್ತೊಂದು ಶ್ವಾನ ದಾಳಿಗೊಳಗಾಗಿದ್ದ ನಾಯಿಯ ಕೂಗು ಕೇಳಿ ಚಿರತೆಯನ್ನು ಅಲ್ಲಿಂದ ಓಡಿಸಿದೆ. ಚಿರತೆ ಪಕ್ಕದಲ್ಲೇ ಇರುವ ಹೊಲದ ಮೂಲಕ ಈ ಪ್ರದೇಶಕ್ಕೆ ಬಂದಿದೆ ಎಂದು ಶಂಕಿಸಲಾಗಿದೆ. ಇನ್ನೂ ಈ ಚಿರತೆಯನ್ನು ಪತ್ತೆ ಮಾಡಲು ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಇಲ್ಲಿಯವರೆಗೆ ಈ ಚಿರತೆ ಮನುಷ್ಯರ ಮೇಲೆ ದಾಳಿ ಮಾಡಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ