AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ, ಕಾಪಾಡಿದ ಮತ್ತೊಂದು ಶ್ವಾನ

ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ.

Maharashtra: ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ, ಕಾಪಾಡಿದ ಮತ್ತೊಂದು ಶ್ವಾನ
ಸಿಸಿಟಿವಿ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Jul 28, 2023 | 2:54 PM

Share

ನಾಸಿಕ್, ಜು.28​: ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ. ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದಾಗ ಪಕ್ಕದಲ್ಲೇ ಇದ್ದ ಮತ್ತೊಂದು ನಾಯಿ, ದಾಳಿಗೊಳಗಾಗಿದ್ದ ನಾಯಿಯ ಕೂಗು ಕೇಳಿ ಓಡಿ ಬಂದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​ ಆಗಿದೆ.

ನಾಸಿಕ್‌ನ ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ, ಸಿಸಿ ಟಿವಿಯಲ್ಲಿ ರೆಕಾರ್ಡ್​​ ಆಗಿರುವಂತೆ ವಿಡಿಯೋದಲ್ಲಿ ಚಿರತೆಯು ಮನೆ ಆವರಣದಿಂದ ಶ್ವಾನ ಮಲಗಿರುವ ಕಡೆಗೆ ಬರುವುದನ್ನು ನೋಡಬಹುದು. ಮನೆಯ ದ್ವಾರದ ಬಳಿ ಮಲಗಿದ್ದ ಶ್ವಾನದ ಬಳಿ ನಿಧಾನವಾಗಿ ಹೆಜ್ಜೆ ಹಾಕುತ್ತ ಬಂದು ಥಟ್ಟನೆ ದಾಳಿ ಮಾಡಿದೆ. ಈ ನಾಯಿ ಕೂಗು ಕೇಳಿ ಪಕ್ಕದಲ್ಲೇ ಮಲಗಿದ್ದ ಮತ್ತೊಂದು ಶ್ವಾನ ಚಿರತೆಯನ್ನು ಓಡಿಸಲು ಮುಂದಾಗಿದೆ. ನಂತರ ಎರಡು ನಾಯಿಗಳು ಸೇರಿ ಚಿರತೆಯನ್ನು ಮನೆಯ ಆವರಣದಿಂದ ಓಡಿಸಿದೆ.

ಇದನ್ನೂ ಓದಿ: ಒಂದೂವರೆ ತಾಸು ಮುಂಚಿತವಾಗಿ ಬಂದು 45 ಪ್ರಯಾಣಿಕರನ್ನು ಬಿಟ್ಟು ಹೊರಟೇ ಬಿಡ್ತು ಗೋವಾ ಎಕ್ಸ್​ಪ್ರೆಸ್​ ರೈಲು

ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿ ವೃಶಾಲಿ ಗಾಡೆ ಅವರು ಸುದ್ದಿ ಸಂಸ್ಥೆ ಎಎನ್​​ಐಗೆ ನೀಡಿರುವ ಹೇಳಿಕೆ ಪ್ರಕಾರ ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಪ್ರಭಾವ್ಕರ್ ಮನುಡೆ ಎಂಬವವರ ಮನೆಗೆ ಈ ಚಿರತೆ ಬಂದಿದೆ. ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದೆ. ಮತ್ತೊಂದು ಶ್ವಾನ ದಾಳಿಗೊಳಗಾಗಿದ್ದ ನಾಯಿಯ ಕೂಗು ಕೇಳಿ ಚಿರತೆಯನ್ನು ಅಲ್ಲಿಂದ ಓಡಿಸಿದೆ. ಚಿರತೆ ಪಕ್ಕದಲ್ಲೇ ಇರುವ ಹೊಲದ ಮೂಲಕ ಈ ಪ್ರದೇಶಕ್ಕೆ ಬಂದಿದೆ ಎಂದು ಶಂಕಿಸಲಾಗಿದೆ. ಇನ್ನೂ ಈ ಚಿರತೆಯನ್ನು ಪತ್ತೆ ಮಾಡಲು ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಇಲ್ಲಿಯವರೆಗೆ ಈ ಚಿರತೆ ಮನುಷ್ಯರ ಮೇಲೆ ದಾಳಿ ಮಾಡಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ