AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಆರು ಜನರ ಮೇಲೆ ದಾಳಿ ಮಾಡಿದ ಚಿರತೆ ತಿರುಪ್ಪೂರ್‌ನಲ್ಲಿ ಸೆರೆ

ಸೋಮವಾರದಿಂದಲೇ ಈ ಚಿರತೆ ತಿರುಗಾಡುತ್ತಿತ್ತು.  ಚಿರತೆ ಆರಂಭದಲ್ಲಿ ಅವಿನಾಶಿ ಸಮೀಪದ ಹಳ್ಳಿಯಲ್ಲಿ ಕಾಣಿಸಿಕೊಂಡಿದ್ದು, ನಂತರ ತಿರುಪ್ಪೂರ್ ಪ್ರವೇಶಿಸಿದೆ.

ತಮಿಳುನಾಡು: ಆರು ಜನರ ಮೇಲೆ ದಾಳಿ ಮಾಡಿದ ಚಿರತೆ ತಿರುಪ್ಪೂರ್‌ನಲ್ಲಿ ಸೆರೆ
ಚಿರತೆ (ಪ್ರಾತಿನಿಧಿಕ ಚಿತ್ರ)
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jan 28, 2022 | 3:54 PM

Share

ತಿರುಪ್ಪೂರ್‌: ತಮಿಳುನಾಡಿನ ತಿರುಪ್ಪೂರ್ (Tiruppur) ಜಿಲ್ಲೆಯಲ್ಲಿ ಗುರುವಾರ ಕನಿಷ್ಠ ಆರು ಜನರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು(Leopard) ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಸೆರೆ ಹಿಡಿಯುವ ವೇಳೆ ಚಿರತೆ ಭದ್ರತಾ ಸಿಬ್ಬಂದಿ ಮೇಲೆಯೂ ದಾಳಿ ಮಾಡಿದೆ. ಅದೃಷ್ಟವಶಾತ್, ಸಿಬ್ಬಂದಿ ದಾಳಿಯಿಂದ ಪಾರಾಗುವಲ್ಲಿ ಯಶಸ್ವಿಯಾದರು. ಸೋಮವಾರದಿಂದಲೇ ಈ ಚಿರತೆ ತಿರುಗಾಡುತ್ತಿತ್ತು.  ಚಿರತೆ ಆರಂಭದಲ್ಲಿ ಅವಿನಾಶಿ ಸಮೀಪದ ಹಳ್ಳಿಯಲ್ಲಿ ಕಾಣಿಸಿಕೊಂಡಿದ್ದು, ನಂತರ ತಿರುಪ್ಪೂರ್ ಪ್ರವೇಶಿಸಿದೆ. ‘ದಿ ಹಿಂದೂ’ ಪತ್ರಿಕೆಯ ವರದಿ ಪ್ರಕಾರ, ಅರಣ್ಯ ಸಿಬ್ಬಂದಿ ಬುಧವಾರ ಸಂಜೆ ತಿರುಪ್ಪೂರ್‌ನ ಹೊರವಲಯದಲ್ಲಿರುವ ಪೊಂಗುಪಾಳ್ಯಂನಲ್ಲಿ ಮೊಕ್ಕಾಂ ಹೂಡಿದ್ದರು. ನಂತರ, ತಿರುಪ್ಪೂರ್ ಸಿಟಿ ಪೊಲೀಸ್ ವ್ಯಾಪ್ತಿಯ ಅಮ್ಮಪಾಳ್ಯಂನಲ್ಲಿರುವ ಖಾಸಗಿ ಗಾರ್ಮೆಂಟ್ಸ್ ಕಂಪನಿಯ ಗೋಡೌನ್‌ನಲ್ಲಿ ಚಿರತೆ ಕಾಣಿಸಿಕೊಂಡಿದೆ.  ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ಥಳಕ್ಕೆ ಧಾವಿಸಿದರು. ಈ ನಡುವೆ ಗಾರ್ಮೆಂಟ್ಸ್ ಕಂಪನಿಯ 66 ವರ್ಷದ ಭದ್ರತಾ ಸಿಬ್ಬಂದಿ ಮೇಲೆ ಚಿರತೆ ದಾಳಿ ನಡೆಸಿದೆ. ಆದರೆ, ಚಿರತೆ ಮತ್ತೆ ಅರಣ್ಯ ಸಿಬ್ಬಂದಿ ಕಣ್ತಪ್ಪಿಸಿ ಆ ಪ್ರದೇಶದ ಕೃಷಿ ಕ್ಷೇತ್ರಕ್ಕೆ ನುಗ್ಗಿದೆ. 

ಚಿರತೆ ಕಾಣಿಸುತ್ತಿದ್ದಂತೆ ಅಧಿಕಾರಿಗಳು ಪ್ರಾಣಿಗಳ ಮೇಲೆ ಟ್ರ್ಯಾಂಕ್ವಿಲೈಸರ್ ಭರ್ಜಿ ಹಾರಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಈ ಹಿಂದೆ ಅರಣ್ಯ ಇಲಾಖೆಯೊಂದಿಗೆ ಸಹಕರಿಸಿದ ಪಶುವೈದ್ಯ ಸಹಾಯಕ ಶಸ್ತ್ರಚಿಕಿತ್ಸಕ ಇ ವಿಜಯರಾಘವನ್ ಅವರು ಮಧ್ಯಾಹ್ನ 1.30 ರ ಸುಮಾರಿಗೆ ಮೊದಲ ಭರ್ಜಿ ಅನ್ನು ಹಾರಿಸಿದರು. ಚಿರತೆಯ ಮೇಲೆ ಎರಡನೇ ಭರ್ಜಿ ಕೂಡ ಹಾರಿಸಲಾಯಿತು, ಇದು ಚಿರತೆಯನ್ನು ಬೋನಿನೊಳಗೆ ಇರಿಸಲು ಸಿಬ್ಬಂದಿಗೆ ಸಹಾಯ ಮಾಡಿತು. ಜನವರಿ 24 ರಂದು ಅವಿನಾಶಿ ತಾಲೂಕಿನ ಪಪ್ಪಂಕುಳಂ ಗ್ರಾಮದ ಜೋಳದ ಜಮೀನಿನಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಚಿರತೆ ದಾಳಿ ನಡೆಸಿತ್ತು. ಕಳೆದ ನಾಲ್ಕು ದಿನಗಳಲ್ಲಿ ಚಿರತೆ ದಾಳಿಗೆ ಮೂವರು ಕಳ್ಳಬೇಟೆ ತಡೆ ವೀಕ್ಷಕರು ಸೇರಿದಂತೆ ಒಟ್ಟು ಆರು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ಕೆನಡಾ-ಅಮೆರಿಕ ಗಡಿ ಬಳಿ ತೀವ್ರ ಚಳಿಗೆ ಸಿಲುಕಿ ಸಾವಿಗೀಡಾದ ಭಾರತೀಯ ಕುಟುಂಬದ ಗುರುತು ಪತ್ತೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ