AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಆರು ಜನರ ಮೇಲೆ ದಾಳಿ ಮಾಡಿದ ಚಿರತೆ ತಿರುಪ್ಪೂರ್‌ನಲ್ಲಿ ಸೆರೆ

ಸೋಮವಾರದಿಂದಲೇ ಈ ಚಿರತೆ ತಿರುಗಾಡುತ್ತಿತ್ತು.  ಚಿರತೆ ಆರಂಭದಲ್ಲಿ ಅವಿನಾಶಿ ಸಮೀಪದ ಹಳ್ಳಿಯಲ್ಲಿ ಕಾಣಿಸಿಕೊಂಡಿದ್ದು, ನಂತರ ತಿರುಪ್ಪೂರ್ ಪ್ರವೇಶಿಸಿದೆ.

ತಮಿಳುನಾಡು: ಆರು ಜನರ ಮೇಲೆ ದಾಳಿ ಮಾಡಿದ ಚಿರತೆ ತಿರುಪ್ಪೂರ್‌ನಲ್ಲಿ ಸೆರೆ
ಚಿರತೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 28, 2022 | 3:54 PM

Share

ತಿರುಪ್ಪೂರ್‌: ತಮಿಳುನಾಡಿನ ತಿರುಪ್ಪೂರ್ (Tiruppur) ಜಿಲ್ಲೆಯಲ್ಲಿ ಗುರುವಾರ ಕನಿಷ್ಠ ಆರು ಜನರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು(Leopard) ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಸೆರೆ ಹಿಡಿಯುವ ವೇಳೆ ಚಿರತೆ ಭದ್ರತಾ ಸಿಬ್ಬಂದಿ ಮೇಲೆಯೂ ದಾಳಿ ಮಾಡಿದೆ. ಅದೃಷ್ಟವಶಾತ್, ಸಿಬ್ಬಂದಿ ದಾಳಿಯಿಂದ ಪಾರಾಗುವಲ್ಲಿ ಯಶಸ್ವಿಯಾದರು. ಸೋಮವಾರದಿಂದಲೇ ಈ ಚಿರತೆ ತಿರುಗಾಡುತ್ತಿತ್ತು.  ಚಿರತೆ ಆರಂಭದಲ್ಲಿ ಅವಿನಾಶಿ ಸಮೀಪದ ಹಳ್ಳಿಯಲ್ಲಿ ಕಾಣಿಸಿಕೊಂಡಿದ್ದು, ನಂತರ ತಿರುಪ್ಪೂರ್ ಪ್ರವೇಶಿಸಿದೆ. ‘ದಿ ಹಿಂದೂ’ ಪತ್ರಿಕೆಯ ವರದಿ ಪ್ರಕಾರ, ಅರಣ್ಯ ಸಿಬ್ಬಂದಿ ಬುಧವಾರ ಸಂಜೆ ತಿರುಪ್ಪೂರ್‌ನ ಹೊರವಲಯದಲ್ಲಿರುವ ಪೊಂಗುಪಾಳ್ಯಂನಲ್ಲಿ ಮೊಕ್ಕಾಂ ಹೂಡಿದ್ದರು. ನಂತರ, ತಿರುಪ್ಪೂರ್ ಸಿಟಿ ಪೊಲೀಸ್ ವ್ಯಾಪ್ತಿಯ ಅಮ್ಮಪಾಳ್ಯಂನಲ್ಲಿರುವ ಖಾಸಗಿ ಗಾರ್ಮೆಂಟ್ಸ್ ಕಂಪನಿಯ ಗೋಡೌನ್‌ನಲ್ಲಿ ಚಿರತೆ ಕಾಣಿಸಿಕೊಂಡಿದೆ.  ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ಥಳಕ್ಕೆ ಧಾವಿಸಿದರು. ಈ ನಡುವೆ ಗಾರ್ಮೆಂಟ್ಸ್ ಕಂಪನಿಯ 66 ವರ್ಷದ ಭದ್ರತಾ ಸಿಬ್ಬಂದಿ ಮೇಲೆ ಚಿರತೆ ದಾಳಿ ನಡೆಸಿದೆ. ಆದರೆ, ಚಿರತೆ ಮತ್ತೆ ಅರಣ್ಯ ಸಿಬ್ಬಂದಿ ಕಣ್ತಪ್ಪಿಸಿ ಆ ಪ್ರದೇಶದ ಕೃಷಿ ಕ್ಷೇತ್ರಕ್ಕೆ ನುಗ್ಗಿದೆ. 

ಚಿರತೆ ಕಾಣಿಸುತ್ತಿದ್ದಂತೆ ಅಧಿಕಾರಿಗಳು ಪ್ರಾಣಿಗಳ ಮೇಲೆ ಟ್ರ್ಯಾಂಕ್ವಿಲೈಸರ್ ಭರ್ಜಿ ಹಾರಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಈ ಹಿಂದೆ ಅರಣ್ಯ ಇಲಾಖೆಯೊಂದಿಗೆ ಸಹಕರಿಸಿದ ಪಶುವೈದ್ಯ ಸಹಾಯಕ ಶಸ್ತ್ರಚಿಕಿತ್ಸಕ ಇ ವಿಜಯರಾಘವನ್ ಅವರು ಮಧ್ಯಾಹ್ನ 1.30 ರ ಸುಮಾರಿಗೆ ಮೊದಲ ಭರ್ಜಿ ಅನ್ನು ಹಾರಿಸಿದರು. ಚಿರತೆಯ ಮೇಲೆ ಎರಡನೇ ಭರ್ಜಿ ಕೂಡ ಹಾರಿಸಲಾಯಿತು, ಇದು ಚಿರತೆಯನ್ನು ಬೋನಿನೊಳಗೆ ಇರಿಸಲು ಸಿಬ್ಬಂದಿಗೆ ಸಹಾಯ ಮಾಡಿತು. ಜನವರಿ 24 ರಂದು ಅವಿನಾಶಿ ತಾಲೂಕಿನ ಪಪ್ಪಂಕುಳಂ ಗ್ರಾಮದ ಜೋಳದ ಜಮೀನಿನಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಚಿರತೆ ದಾಳಿ ನಡೆಸಿತ್ತು. ಕಳೆದ ನಾಲ್ಕು ದಿನಗಳಲ್ಲಿ ಚಿರತೆ ದಾಳಿಗೆ ಮೂವರು ಕಳ್ಳಬೇಟೆ ತಡೆ ವೀಕ್ಷಕರು ಸೇರಿದಂತೆ ಒಟ್ಟು ಆರು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ಕೆನಡಾ-ಅಮೆರಿಕ ಗಡಿ ಬಳಿ ತೀವ್ರ ಚಳಿಗೆ ಸಿಲುಕಿ ಸಾವಿಗೀಡಾದ ಭಾರತೀಯ ಕುಟುಂಬದ ಗುರುತು ಪತ್ತೆ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ