AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಟಾರ್ಡಿಯೋದ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ; ಏಳು ಜನರ ದುರ್ಮರಣ

ಮುಂಬೈನ 20 ಅಂತಸ್ತಿನ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪ್ರಸ್ತುತ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಏಳು ಜನರು ಮೃತಪಟ್ಟಿದ್ದು, ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮುಂಬೈ: ಟಾರ್ಡಿಯೋದ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ; ಏಳು ಜನರ ದುರ್ಮರಣ
20 ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ (Credits: ANI/ Twitter)
TV9 Web
| Edited By: |

Updated on:Jan 22, 2022 | 11:07 AM

Share

ಮುಂಬೈ: ನಗರದ ಟಾರ್ಡಿಯೊದಲ್ಲಿನ (Tardeo) ನಾನಾ ಚೌಕ್‌ನಲ್ಲಿರುವ ಕಮಲಾ ಬಿಲ್ಡಿಂಗ್‌ನಲ್ಲಿ (Kamala Building) ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. 20 ಅಂತಸ್ತಿನ ದೊಡ್ಡ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಇತರ ಸಿಬ್ಬಂದಿಗಳು ಆಗಮಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಘಟನೆಯಲ್ಲಿ ಪ್ರಸ್ತುತ ಲಭ್ಯವಾಗಿರುವ ಮಾಹಿತಿಯಂತೆ, ಏಳು ಜನರು ಮೃತಪಟ್ಟಿದ್ದಾರೆ. 20 ಅಂತಸ್ತಿನ ಕಟ್ಟಡದ 18ನೇ ಮಹಡಿಯಲ್ಲಿ 3ನೇ ಹಂತದ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಇಲಾಖೆಯ ಪ್ರಕಾರ, 7.28 ಕ್ಕೆ ಘಟನೆ ವರದಿಯಾಗಿದೆ ಮತ್ತು 8.10 ಕ್ಕೆ ‘ಹಂತ 3’ ಎಂದು ಘೋಷಿಸಲಾಯಿತು.

ಬೆಂಕಿಯನ್ನು ನಿಯಂತ್ರಿಸಲು 13 ಅಗ್ನಿಶಾಮಕ ವಾಹನಗಳು ಮತ್ತು ಏಳು ಜಂಬೋ ಟ್ಯಾಂಕರ್‌ಗಳನ್ನು ನಿಯೋಜಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಗಾಯಾಳುಗಳನ್ನು ಸಮೀಪದ ಭಾಟಿಯಾ ಮತ್ತು ನಾಯರ್ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಪ್ರಸ್ತುತ ಘಟನಾ ಸ್ಥಳದಲ್ಲಿ 5 ಆಂಬುಲೆನ್ಸ್​​ ಸೇವೆ ಒದಗಿಸಲಾಗಿದೆ ಎಂದು ಎಎನ್​ಐ ತಿಳಿಸಿದೆ.

ಘಟನೆಯಲ್ಲಿ ಒಟ್ಟು 7 ಜನರು ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಕುರಿತು ಎಎನ್​ಐ ಟ್ವೀಟ್ ಇಲ್ಲಿದೆ:

ಇದನ್ನೂ ಓದಿ:

ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿ ಅಲ್ಲ ಎಂದ ಪ್ರಿಯಾಂಕಾ ಗಾಂಧಿ; ಉಲ್ಟಾ ಹೊಡೆದಿದ್ದು ಯಾಕೆ?

ಕೋಲಾರ: ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಇಬ್ಬರ ದುರ್ಮರಣ; ತಿರುಪತಿಯಿಂದ ವಾಪಸಾಗುವಾಗ ಘಟನೆ

Published On - 9:29 am, Sat, 22 January 22

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು