AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ ಕೆಮಿಕಲ್ ಘಟಕದಲ್ಲಿ ಭಾರೀ ಬೆಂಕಿ; ದೆಹಲಿಯಿಂದ ದೌಡಾಯಿಸಿದ ಅಗ್ನಿಶಾಮಕ ದಳ

ಹರ್ಯಾಣದ ವಿಶೇಷ ಕೋರಿಕೆಯ ಮೇರೆಗೆ, ದೆಹಲಿ ಅಗ್ನಿಶಾಮಕ ಸೇವೆಯು ತನ್ನ ಅಗ್ನಿಶಾಮಕ ಸಿಬ್ಬಂದಿಯನ್ನು ಕಾರ್ಯಾಚರಣೆಗೆ ಕಳುಹಿಸಿದೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಹರ್ಯಾಣ ಕೆಮಿಕಲ್ ಘಟಕದಲ್ಲಿ ಭಾರೀ ಬೆಂಕಿ; ದೆಹಲಿಯಿಂದ ದೌಡಾಯಿಸಿದ ಅಗ್ನಿಶಾಮಕ ದಳ
ಕೆಮಿಕಲ್ ಘಟಕದಲ್ಲಿ ಬೆಂಕಿ
TV9 Web
| Edited By: |

Updated on:Apr 17, 2022 | 9:23 PM

Share

ಹರ್ಯಾಣದ (Haryana) ಸೋನಿಪತ್‌ನ ಕುಂಡ್ಲಿ (Kundli)  ಪ್ರದೇಶದಲ್ಲಿ ರಾಸಾಯನಿಕ ಘಟಕದಲ್ಲಿ (chemical plant) ಭಾನುವಾರ ಸಂಜೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಹರ್ಯಾಣದ ವಿಶೇಷ ಕೋರಿಕೆಯ ಮೇರೆಗೆ, ದೆಹಲಿ ಅಗ್ನಿಶಾಮಕ ಸೇವೆಯು ತನ್ನ ಅಗ್ನಿಶಾಮಕ ಸಿಬ್ಬಂದಿಯನ್ನು ಕಾರ್ಯಾಚರಣೆಗೆ ಕಳುಹಿಸಿದೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮುಂಬೈನ ನಲಸೋಪರದ ಪಾಂಡೆ ನಗರ ಪ್ರದೇಶದ ಗೋಡೌನ್‌ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದ್ದು ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಳೆದ ತಿಂಗಳು, ಮುಂಬೈ ಅಗ್ನಿಶಾಮಕ ದಳದ ಪ್ರಕಾರ ಮಾರ್ಚ್ 29 ರ ಸಂಜೆ ಮುಂಬಾದೇವಿ ದೇವಸ್ಥಾನದ ಬಳಿಯ ಪಟೇಲ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐದು ಜನರು ಗಾಯಗೊಂಡಿದ್ದರು. ಭಾನುವಾರ ಗ್ರೀನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ನವದೆಹಲಿಯ ಉಪಹಾರ್ ಸಿನಿಮಾ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಸಿನಿಮಾ ಹಾಲ್‌ನಲ್ಲಿದ್ದ ಪೀಠೋಪಕರಣಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಜೂನ್ 13, 1997 ರಂದು, ಜೆಪಿ ದತ್ತಾ ಅವರ ‘ಬಾರ್ಡರ್’ ಚಲನಚಿತ್ರ ಪ್ರದರ್ಶನದ ಸಂದರ್ಭದಲ್ಲಿ ಉಪಹಾರ್ ಚಿತ್ರಮಂದಿರದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಉಸಿರುಕಟ್ಟುವಿಕೆಯಿಂದ ಕನಿಷ್ಠ 59 ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಇದನ್ನೂ ಓದಿಶ್ರೀರಾಮನ ಹೆಸರಿನಲ್ಲಿ ಕೋಮುವಾದದ ಬೆಂಕಿ ಹಚ್ಚುವುದು ರಾಮನ ಕಲ್ಪನೆಗೆ ಮಾಡಿದ ಅವಮಾನ: ಸಂಜಯ್ ರಾವತ್

Published On - 9:06 pm, Sun, 17 April 22

Follow Us
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!