AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿ ಬಂಧನ; ಮ್ಯಾಟ್ರಿಮೋನಿ ತಾಣದಲ್ಲೇ ಟಾರ್ಗೆಟ್​ ಮಾಡ್ತಿದ್ದ

ಈ ವ್ಯಕ್ತಿ ಪ್ರತಿಬಾರಿಯೂ ತನ್ನ ಫೋನ್​ನಂಬರ್​ ಬದಲಿಸುತ್ತಿದ್ದ. ಪ್ರತೀಸಲ ಊಬರ್​, ಓಲಾ ಕ್ಯಾಬ್​ಗಳನ್ನು ಬುಕ್​​ ಮಾಡುವಾಗಲೂ ಬೇರೆಬೇರೆ ಸಿಮ್​​ಗಳನ್ನೇ  ಬಳಸುತ್ತಿದ್ದ. ಈ ವ್ಯಕ್ತಿಗೆ ಕಂಪ್ಯೂಟರ್​ ಬಗ್ಗೆಯೂ ಅಪಾರ ತಿಳಿವಳಿಕೆ ಇದೆ. ಹ್ಯಾಕರ್​ ಕೂಡ ಹೌದು ಎಂದು ಮುಂಬೈ ಡೆಪ್ಯೂಟಿ ಪೊಲೀಸ್​ ಕಮೀಷನರ್​​ ಸುರೇಶ್​ ಮೆಂಗಾಡೆ ತಿಳಿಸಿದ್ದಾರೆ.

12 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿ ಬಂಧನ; ಮ್ಯಾಟ್ರಿಮೋನಿ ತಾಣದಲ್ಲೇ ಟಾರ್ಗೆಟ್​ ಮಾಡ್ತಿದ್ದ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 08, 2021 | 5:26 PM

Share

ಸುಮಾರು 12 ಮಹಿಳೆಯರನ್ನು ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿರುವ 37 ವರ್ಷದ ವ್ಯಕ್ತಿಯನ್ನು ನವೀ ಮುಂಬೈ ಪೊಲೀಸರು ಮಲಾಡ್​ ಎಂಬಲ್ಲಿ ಬಂಧಿಸಿದ್ದಾರೆ. ಈತನ ಹೆಸರು ಮಹೇಶ್​ ಅಲಿಯಾಸ್ ಕರಣ್​ ಗುಪ್ತಾ. ಇವನು ಮೆಕ್ಯಾನಿಕಲ್​ ಇಂಜನಿಯರ್​ ಆಗಿದ್ದು, ಹಲವು ಗೌರವಾನ್ವಿತ ಕಂಪನಿಗಳಲ್ಲಿ ಕೆಲಸ ಕೂಡ ಮಾಡಿದ್ದಾನೆ. ಮ್ಯಾಟ್ರಿಮೋನಿ ಮೂಲಕ ಮಹಿಳೆಯರನ್ನು ವಂಚಿಸಿ ಅತ್ಯಾಚಾರ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಕರಣ್​ ಗುಪ್ತಾ ತುಂಬ ಮ್ಯಾಟ್ರಿಮೋನಿಯಲ್​ ಸೈಟ್​​ನಲ್ಲಿ ಹಲವು ನಕಲಿ ಖಾತೆಗಳನ್ನು ಹೊಂದಿದ್ದ. ಅದರ ಮೂಲಕ ಆತ ವಿದ್ಯಾವಂತ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ವಧು-ವರರ ವೇದಿಕೆ ಮೂಲಕ ಅಂಥ ಯುವತಿಯರನ್ನು ಹುಡುಕಿ, ಅವರನ್ನು ಸಂಪರ್ಕ ಮಾಡುತ್ತಿದ್ದ. ಬಳಿಕ ಅವರಿಂದ ಫೋನ್​ ನಂಬರ್​ ಪಡೆಯುತ್ತಿದ್ದ. ಪಬ್​, ರೆಸ್ಟೋರೆಂಟ್​​ಗಳಲ್ಲಿ ಭೇಟಿಯಾಗೋಣ ಎಂದು ಕರೆಯುತ್ತಿದ್ದ. ತನ್ನನ್ನು ತಾನು ಸಭ್ಯನಂತೆ ಬಿಂಬಿಸಿಕೊಳ್ಳುತ್ತಿದ್ದ. ಹೀಗೆ ಭೇಟಿಯಾದ ಸಂದರ್ಭದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ವ್ಯಕ್ತಿ ಪ್ರತಿಬಾರಿಯೂ ತನ್ನ ಫೋನ್​ನಂಬರ್​ ಬದಲಿಸುತ್ತಿದ್ದ. ಪ್ರತೀಸಲ ಊಬರ್​, ಓಲಾ ಕ್ಯಾಬ್​ಗಳನ್ನು ಬುಕ್​​ ಮಾಡುವಾಗಲೂ ಬೇರೆಬೇರೆ ಸಿಮ್​​ಗಳನ್ನೇ  ಬಳಸುತ್ತಿದ್ದ. ಈ ವ್ಯಕ್ತಿಗೆ ಕಂಪ್ಯೂಟರ್​ ಬಗ್ಗೆಯೂ ಅಪಾರ ತಿಳಿವಳಿಕೆ ಇದೆ. ಹ್ಯಾಕರ್​ ಕೂಡ ಹೌದು ಎಂದು ಮುಂಬೈ ಡೆಪ್ಯೂಟಿ ಪೊಲೀಸ್​ ಕಮೀಷನರ್​​ ಸುರೇಶ್​ ಮೆಂಗಾಡೆ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಗುಪ್ತಾ 12 ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸೆದಿದ್ದಾನೆಂದು ಅನ್ನಿಸುತ್ತದೆ. ಆದರೆ ಆ ಸಂಖ್ಯೆ ದೊಡ್ಡದಿದೆ ಎಂಬುದು ನಮ್ಮ ಅನುಮಾನ. ಈ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ