AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Environment Day 2021: ಟೆರೇಸ್​ ಮೇಲೆ ಪುಟ್ಟ ಕಾಡು ನಿರ್ಮಾಣ ಮಾಡಿದ ಮಧ್ಯಪ್ರದೇಶದ ವ್ಯಕ್ತಿ..2500ಕ್ಕೂ ಹೆಚ್ಚು ಮರಗಳು

ಸೋಹನ್​ಲಾಲ್​​ ಅವರ ಮನೆ ಟೆರೇಸ್​​ ಮೇಲೆ ಸೇಬು, ಹುಣಸೆ ಸೇರಿ ಒಟ್ಟು 40 ವಿವಿಧ ತಳಿಗಳು ಇವೆ. ನಾನು ನನ್ನ ಸಂಬಳದ ಬಹುತೇಕ ಭಾಗವನ್ನು ಈ ಹಸಿರು ಮರಗಳಿಗಾಗಿ ಬಳಕೆ ಮಾಡಿದ್ದೇನೆ ಎನ್ನುತ್ತಾರೆ ಸೋಹನ್​ ಲಾಲ್​ ದ್ವಿವೇದಿ.

World Environment Day 2021: ಟೆರೇಸ್​ ಮೇಲೆ ಪುಟ್ಟ ಕಾಡು ನಿರ್ಮಾಣ ಮಾಡಿದ ಮಧ್ಯಪ್ರದೇಶದ ವ್ಯಕ್ತಿ..2500ಕ್ಕೂ ಹೆಚ್ಚು ಮರಗಳು
ಸೋಹನ್​ ಲಾಲ್​ ದ್ವಿವೇದಿ
TV9 Web
| Edited By: |

Updated on: Jun 05, 2021 | 4:32 PM

Share

ಮಧ್ಯಪ್ರದೇಶದ ವ್ಯಕ್ತಿಯೊಬ್ಬರು ತಮ್ಮ ಮನೆ ಮೇಲೆ ಒಂದು ಸಣ್ಣ ಅರಣ್ಯವನ್ನೇ ಸೃಷ್ಟಿಸಿದ್ದಾರೆ. ಇಂದಿನ ವಿಶ್ವ ಪರಿಸರ ದಿನಾಚರಣೆ ದಿನ ಆ ಫೋಟೋಗಳು ಸಿಕ್ಕಾಪಟೆ ವೈರಲ್​ ಆಗಿವೆ. ಇವರ ಹೆಸರು ಸೋಹನ್​ ಲಾಲ್​ ದ್ವಿವೇದಿ. ಮನೆಯ ಟೆರೇಸ್​​ಮೇಲೆ 40 ಪ್ರಭೇದದ, 2500ಕ್ಕೂ ಹೆಚ್ಚು ಬೋನ್ಸಾಯ್​ ಮರಗಳನ್ನು ಬೆಳೆಸಿ ಅರಣ್ಯ ನಿರ್ಮಿಸಿದ್ದಾರೆ.

ಸೋಹನ್​ ಲಾಲ್​ ಅವರು ವಿದ್ಯುತ್​ ಮಂಡಳಿಯಲ್ಲಿ ಕೆಲಸ ಮಾಡುತ್ತಿದ್ದರು. ಉದ್ಯೋಗದಿಂದ ನಿವೃತ್ತಿಹೊಂದಿದ ನಂತರ ಈ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಹೀಗೆ ಬೋನ್ಸಾಯ್​ ಅರಣ್ಯ ನಿರ್ಮಾಣ ಮಾಡಲು ಮುಂಬೈ ಮೂಲದ ಮಹಿಳೆಯೊಬ್ಬರೇ ಸ್ಫೂರ್ತಿ ಎನ್ನುತ್ತಾರೆ ಸೋಹನ್​ ಲಾಲ್​. ಆಕೆ ಟೆರೇಸ್​ ಮೇಲೆ 250 ಬೋನ್ಸಾಯ್​ ಮರಗಳನ್ನು ನೆಟ್ಟಿ-ಬೆಳೆಸಿದ್ದರು. ಆಕೆಯ ಬಗ್ಗೆ ಪತ್ರಿಕೆಯಲ್ಲಿ ಓದಿದ್ದ ಸೋಹನ್​ ಲಾಲ್​ ತಾನೂ ಯಾಕೆ ಅದನ್ನು ಮಾಡಬಾರದು ಎಂದು ಯೋಚಿಸಿ, ಕಾರ್ಯಪ್ರವೃತ್ತರಾದರು. ಇದೀಗ ಇವರ ಮನೆ ಟೆರೇಸ್​ಗೆ ಹೋದರೆ ಅಲ್ಲೊಂದು ಬೋನ್ಸಾಯ್​ ಕಾಡು ನಿರ್ಮಾಣವಾಗಿದ್ದನ್ನು ನೋಡಬಹುದಾಗಿದೆ.

ಬೋನ್ಸಾಯ್​ ಮರಗಳೆಂದರೆ ಪುಟ್ಟಪುಟ್ಟ ಮರಗಳು. ಅವು ನೋಡಲೂ ಅಷ್ಟೇ ಸುಂದರವಾಗಿರುತ್ತದೆ. ಸೋಹನ್​ಲಾಲ್​​ ಅವರ ಮನೆ ಟೆರೇಸ್​​ ಮೇಲೆ ಸೇಬು, ಹುಣಸೆ ಸೇರಿ ಒಟ್ಟು 40 ವಿವಿಧ ತಳಿಗಳು ಇವೆ. ನಾನು ನನ್ನ ಸಂಬಳದ ಬಹುತೇಕ ಭಾಗವನ್ನು ಈ ಹಸಿರು ಮರಗಳಿಗಾಗಿ ಬಳಕೆ ಮಾಡಿದ್ದೇನೆ. ಇವತ್ತಿಗೂ ದಿನದ ಬಹುತೇಕ ಸಮಯ ಇಲ್ಲಿಯೇ ಕಳೆಯುತ್ತೇನೆ ಎನ್ನುತ್ತಾರೆ ಸೋಹನ್​ಲಾಲ್​. ಅದರಲ್ಲೂ ಈಗಂತೂ ಲಾಕ್​ಡೌನ್​. ನನಗೆ ಮನೆಯಿಂದ ಹೊರಹೋಗಿ ಯಾವುದೇ ಕೆಲಸ ಮಾಡಲೂ ಸಾಧ್ಯವಾಗುತ್ತಿಲ್ಲ. ನಮ್ಮ ಮನೆಯ ಟೆರೇಸ್​​ನಿಂದ ನನಗೆ ತುಂಬ ಆರಾಮ ಎನ್ನಿಸಿದೆ ಎಂದಿದ್ದಾರೆ.

A man creates mini forest on his terrace in Madhya Pradesh

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ