AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟವಾಡುತ್ತಿದ್ದ 18 ತಿಂಗಳ ಮಗುವನ್ನು ನೀರಿನ ಟ್ಯಾಂಕ್​ನಲ್ಲಿ ಮುಳುಗಿಸಿ ಕೊಂದಿದ್ದವ ಅರೆಸ್ಟ್​; 50 ರೂ.ಗಾಗಿ ನಡೆದಿತ್ತು ಕೊಲೆ

ಘಟನೆ ನಡೆದದ್ದು ಫೆಬ್ರವರಿಯಲ್ಲಿ. ನರೇಶ್​ ಎಂಬ 22 ವರ್ಷದ ಯುವಕ ಆರೋಪಿ. ನಿರುದ್ಯೋಗಿ ಆಗಿರುವ ಈತ ಫರಿದಾಬಾದ್​​ನ ಸೆಕ್ಟರ್​ 56ರ ನಿವಾಸಿ ಹಾಗೂ ಆತನೊಬ್ಬ ಮಾದಕ ವ್ಯಸನಿ ಎಂದು ಪೊಲೀಸರು ತಿಳಿಸಿದ್ದಾರೆ.

ಆಟವಾಡುತ್ತಿದ್ದ 18 ತಿಂಗಳ ಮಗುವನ್ನು ನೀರಿನ ಟ್ಯಾಂಕ್​ನಲ್ಲಿ ಮುಳುಗಿಸಿ ಕೊಂದಿದ್ದವ ಅರೆಸ್ಟ್​; 50 ರೂ.ಗಾಗಿ ನಡೆದಿತ್ತು ಕೊಲೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 16, 2021 | 10:29 PM

Share

ಗುರುಗ್ರಾಮ: ಪಕ್ಕದ ಮನೆಯ, 18 ತಿಂಗಳ ಮಗುವನ್ನು ನೀರಿನ ಟ್ಯಾಂಕ್​​ನಲ್ಲಿ ಮುಳುಗಿಸಿ ಕೊಂದಿದ್ದ ವ್ಯಕ್ತಿಯೊಬ್ಬ ಈಗ ಅರೆಸ್ಟ್ ಆಗಿದ್ದಾನೆ. ಘಟನೆ ನಡೆದು ಆರು ತಿಂಗಳ ಬಳಿಕ ಈತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ತಾನೇ ಮಗುವನ್ನು ಕೊಂದಿದ್ದಾಗಿ ಪೊಲೀಸರ ಎದುರು ಒಪ್ಪಿಕೊಂಡಿದ್ದಾನೆ. ಅಷ್ಟಕ್ಕೂ ಅಷ್ಟು ಪುಟ್ಟ ಮಗುವನ್ನು ಆ ವ್ಯಕ್ತಿ ಕೊಲ್ಲಲು ಕಾರಣ 50 ರೂಪಾಯಿ!

ಘಟನೆ ನಡೆದದ್ದು ಫೆಬ್ರವರಿಯಲ್ಲಿ. ನರೇಶ್​ ಎಂಬ 22 ವರ್ಷದ ಯುವಕ ಆರೋಪಿ. ನಿರುದ್ಯೋಗಿ ಆಗಿರುವ ಈತ ಫರಿದಾಬಾದ್​​ನ ಸೆಕ್ಟರ್​ 56ರ ನಿವಾಸಿ ಹಾಗೂ ಆತನೊಬ್ಬ ಮಾದಕ ವ್ಯಸನಿ ಎಂದು ಫರಿದಾಬಾದ್ ಪೊಲೀಸ್​ ಪಿಆರ್​ಒ ಸುಬೆ ಸಿಂಗ್​ ತಿಳಿಸಿದ್ದಾರೆ. ಆತನಿಗೆ ಮಗುವಿನ ಮೇಲೆ ಯಾವುದೇ ದ್ವೇಷ ಇರಲಿಲ್ಲ. ಆದರೆ ಆ ಮಗುವಿನ ತಂದೆಗೂ-ಈ ನರೇಶ್​ಗೂ ಪದೇಪದೆ ಜಗಳವಾಗುತ್ತಿತ್ತು. ಹಾಗೇ ಒಂದು ದಿನ ನರೇಶ್​ ತನ್ನ ಪಕ್ಕದ ಮನೆಯವರೊಬ್ಬರ 8ವರ್ಷದ ಮಗಳ ಕೈಯಿಂದ 50 ರೂಪಾಯಿ ಕಸಿದಿದ್ದ. ಅದನ್ನು ನೋಡಿದ್ದ 18 ತಿಂಗಳ ಮಗುವಿನ ತಂದೆ, ನರೇಶ್​ ಜತೆ ಜಗಳ ತೆಗೆದು, ಆತ ಮಾಡಿದ ಕೆಲಸದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ. ಅದಾದ ಮೇಲೆ ನರೇಶ್​ ಹೇಗಾದರೂ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ ಎಂದು ಸುಬೆ ಸಿಂಗ್​ ವಿವರಿಸಿದ್ದಾರೆ.

ಫೆಬ್ರವರಿ 5ರಂದು ನರೇಶ್​ ಆ 18 ತಿಂಗಳ ಗಂಡು ಮಗು ಮನೆಯ ಬಳಿ ಒಬ್ಬನೇ ಆಡುತ್ತಿರುವುದು ಕಂಡು ಬಂತು. ಆತನನ್ನು ಎತ್ತಿಕೊಂಡು ತನ್ನ ಫ್ಲ್ಯಾಟ್​ಗೆ ಕರೆದುಕೊಂಡು ಹೋದ. ನಂತರ ಮಗುವನ್ನು ದೊಡ್ಡದಾದ ನೀರಿನ ಟ್ಯಾಂಕ್​​ನಲ್ಲಿ ಮುಳುಗಿಸಿ, ಯಾರಿಗೂ ಗೊತ್ತಾಗಬಾರದು ಎಂದು ಅದರ ಬಾಯಿಯನ್ನು ಮುಚ್ಚಿದ್ದ. ಮಗುವಿನ ಜೀವ ಹೋಯಿತು. ಇತ್ತ ಮಗುವಿನ ಪಾಲಕರು ಹುಡುಕಾಟ ಶುರು ಮಾಡಿದ್ದರು. ಅತ್ತ ನರೇಶ್​, ಮಗುವನ್ನು ಹತ್ಯೆ ಮಾಡಿದ ತಕ್ಷಣ ತನ್ನ ಸ್ಥಳ ಬದಲಾಯಿಸಿದ್ದ. ಆದರೆ ಆರು ತಿಂಗಳ ನಂತರ ಆತನನ್ನು ಹಿಡಿಯಲಾಗಿದೆ. ಮಗುವಿನ ಕುತ್ತಿಗೆಯಿಂದ ಆತ ಕದ್ದಿದ್ದ ತಾಯತವನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸ್ ಪಿಆರ್​ಒ ತಿಳಿಸಿದ್ದಾರೆ.

ಇದನ್ನೂ ಓದಿ: ‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​

ನಕಲಿ ನಾಗಕನ್ನಿಕೆಯ ಅನಾಚಾರ ಬಯಲು: ಮಹಿಳೆ ಆಸ್ಪತ್ರೆಗೆ ದಾಖಲು; ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?