AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟವಾಡುತ್ತಿದ್ದ 18 ತಿಂಗಳ ಮಗುವನ್ನು ನೀರಿನ ಟ್ಯಾಂಕ್​ನಲ್ಲಿ ಮುಳುಗಿಸಿ ಕೊಂದಿದ್ದವ ಅರೆಸ್ಟ್​; 50 ರೂ.ಗಾಗಿ ನಡೆದಿತ್ತು ಕೊಲೆ

ಘಟನೆ ನಡೆದದ್ದು ಫೆಬ್ರವರಿಯಲ್ಲಿ. ನರೇಶ್​ ಎಂಬ 22 ವರ್ಷದ ಯುವಕ ಆರೋಪಿ. ನಿರುದ್ಯೋಗಿ ಆಗಿರುವ ಈತ ಫರಿದಾಬಾದ್​​ನ ಸೆಕ್ಟರ್​ 56ರ ನಿವಾಸಿ ಹಾಗೂ ಆತನೊಬ್ಬ ಮಾದಕ ವ್ಯಸನಿ ಎಂದು ಪೊಲೀಸರು ತಿಳಿಸಿದ್ದಾರೆ.

ಆಟವಾಡುತ್ತಿದ್ದ 18 ತಿಂಗಳ ಮಗುವನ್ನು ನೀರಿನ ಟ್ಯಾಂಕ್​ನಲ್ಲಿ ಮುಳುಗಿಸಿ ಕೊಂದಿದ್ದವ ಅರೆಸ್ಟ್​; 50 ರೂ.ಗಾಗಿ ನಡೆದಿತ್ತು ಕೊಲೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 16, 2021 | 10:29 PM

Share

ಗುರುಗ್ರಾಮ: ಪಕ್ಕದ ಮನೆಯ, 18 ತಿಂಗಳ ಮಗುವನ್ನು ನೀರಿನ ಟ್ಯಾಂಕ್​​ನಲ್ಲಿ ಮುಳುಗಿಸಿ ಕೊಂದಿದ್ದ ವ್ಯಕ್ತಿಯೊಬ್ಬ ಈಗ ಅರೆಸ್ಟ್ ಆಗಿದ್ದಾನೆ. ಘಟನೆ ನಡೆದು ಆರು ತಿಂಗಳ ಬಳಿಕ ಈತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ತಾನೇ ಮಗುವನ್ನು ಕೊಂದಿದ್ದಾಗಿ ಪೊಲೀಸರ ಎದುರು ಒಪ್ಪಿಕೊಂಡಿದ್ದಾನೆ. ಅಷ್ಟಕ್ಕೂ ಅಷ್ಟು ಪುಟ್ಟ ಮಗುವನ್ನು ಆ ವ್ಯಕ್ತಿ ಕೊಲ್ಲಲು ಕಾರಣ 50 ರೂಪಾಯಿ!

ಘಟನೆ ನಡೆದದ್ದು ಫೆಬ್ರವರಿಯಲ್ಲಿ. ನರೇಶ್​ ಎಂಬ 22 ವರ್ಷದ ಯುವಕ ಆರೋಪಿ. ನಿರುದ್ಯೋಗಿ ಆಗಿರುವ ಈತ ಫರಿದಾಬಾದ್​​ನ ಸೆಕ್ಟರ್​ 56ರ ನಿವಾಸಿ ಹಾಗೂ ಆತನೊಬ್ಬ ಮಾದಕ ವ್ಯಸನಿ ಎಂದು ಫರಿದಾಬಾದ್ ಪೊಲೀಸ್​ ಪಿಆರ್​ಒ ಸುಬೆ ಸಿಂಗ್​ ತಿಳಿಸಿದ್ದಾರೆ. ಆತನಿಗೆ ಮಗುವಿನ ಮೇಲೆ ಯಾವುದೇ ದ್ವೇಷ ಇರಲಿಲ್ಲ. ಆದರೆ ಆ ಮಗುವಿನ ತಂದೆಗೂ-ಈ ನರೇಶ್​ಗೂ ಪದೇಪದೆ ಜಗಳವಾಗುತ್ತಿತ್ತು. ಹಾಗೇ ಒಂದು ದಿನ ನರೇಶ್​ ತನ್ನ ಪಕ್ಕದ ಮನೆಯವರೊಬ್ಬರ 8ವರ್ಷದ ಮಗಳ ಕೈಯಿಂದ 50 ರೂಪಾಯಿ ಕಸಿದಿದ್ದ. ಅದನ್ನು ನೋಡಿದ್ದ 18 ತಿಂಗಳ ಮಗುವಿನ ತಂದೆ, ನರೇಶ್​ ಜತೆ ಜಗಳ ತೆಗೆದು, ಆತ ಮಾಡಿದ ಕೆಲಸದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ. ಅದಾದ ಮೇಲೆ ನರೇಶ್​ ಹೇಗಾದರೂ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ ಎಂದು ಸುಬೆ ಸಿಂಗ್​ ವಿವರಿಸಿದ್ದಾರೆ.

ಫೆಬ್ರವರಿ 5ರಂದು ನರೇಶ್​ ಆ 18 ತಿಂಗಳ ಗಂಡು ಮಗು ಮನೆಯ ಬಳಿ ಒಬ್ಬನೇ ಆಡುತ್ತಿರುವುದು ಕಂಡು ಬಂತು. ಆತನನ್ನು ಎತ್ತಿಕೊಂಡು ತನ್ನ ಫ್ಲ್ಯಾಟ್​ಗೆ ಕರೆದುಕೊಂಡು ಹೋದ. ನಂತರ ಮಗುವನ್ನು ದೊಡ್ಡದಾದ ನೀರಿನ ಟ್ಯಾಂಕ್​​ನಲ್ಲಿ ಮುಳುಗಿಸಿ, ಯಾರಿಗೂ ಗೊತ್ತಾಗಬಾರದು ಎಂದು ಅದರ ಬಾಯಿಯನ್ನು ಮುಚ್ಚಿದ್ದ. ಮಗುವಿನ ಜೀವ ಹೋಯಿತು. ಇತ್ತ ಮಗುವಿನ ಪಾಲಕರು ಹುಡುಕಾಟ ಶುರು ಮಾಡಿದ್ದರು. ಅತ್ತ ನರೇಶ್​, ಮಗುವನ್ನು ಹತ್ಯೆ ಮಾಡಿದ ತಕ್ಷಣ ತನ್ನ ಸ್ಥಳ ಬದಲಾಯಿಸಿದ್ದ. ಆದರೆ ಆರು ತಿಂಗಳ ನಂತರ ಆತನನ್ನು ಹಿಡಿಯಲಾಗಿದೆ. ಮಗುವಿನ ಕುತ್ತಿಗೆಯಿಂದ ಆತ ಕದ್ದಿದ್ದ ತಾಯತವನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸ್ ಪಿಆರ್​ಒ ತಿಳಿಸಿದ್ದಾರೆ.

ಇದನ್ನೂ ಓದಿ: ‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​

ನಕಲಿ ನಾಗಕನ್ನಿಕೆಯ ಅನಾಚಾರ ಬಯಲು: ಮಹಿಳೆ ಆಸ್ಪತ್ರೆಗೆ ದಾಖಲು; ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ