AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟವಾಡುತ್ತಿದ್ದ 18 ತಿಂಗಳ ಮಗುವನ್ನು ನೀರಿನ ಟ್ಯಾಂಕ್​ನಲ್ಲಿ ಮುಳುಗಿಸಿ ಕೊಂದಿದ್ದವ ಅರೆಸ್ಟ್​; 50 ರೂ.ಗಾಗಿ ನಡೆದಿತ್ತು ಕೊಲೆ

ಘಟನೆ ನಡೆದದ್ದು ಫೆಬ್ರವರಿಯಲ್ಲಿ. ನರೇಶ್​ ಎಂಬ 22 ವರ್ಷದ ಯುವಕ ಆರೋಪಿ. ನಿರುದ್ಯೋಗಿ ಆಗಿರುವ ಈತ ಫರಿದಾಬಾದ್​​ನ ಸೆಕ್ಟರ್​ 56ರ ನಿವಾಸಿ ಹಾಗೂ ಆತನೊಬ್ಬ ಮಾದಕ ವ್ಯಸನಿ ಎಂದು ಪೊಲೀಸರು ತಿಳಿಸಿದ್ದಾರೆ.

ಆಟವಾಡುತ್ತಿದ್ದ 18 ತಿಂಗಳ ಮಗುವನ್ನು ನೀರಿನ ಟ್ಯಾಂಕ್​ನಲ್ಲಿ ಮುಳುಗಿಸಿ ಕೊಂದಿದ್ದವ ಅರೆಸ್ಟ್​; 50 ರೂ.ಗಾಗಿ ನಡೆದಿತ್ತು ಕೊಲೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 16, 2021 | 10:29 PM

Share

ಗುರುಗ್ರಾಮ: ಪಕ್ಕದ ಮನೆಯ, 18 ತಿಂಗಳ ಮಗುವನ್ನು ನೀರಿನ ಟ್ಯಾಂಕ್​​ನಲ್ಲಿ ಮುಳುಗಿಸಿ ಕೊಂದಿದ್ದ ವ್ಯಕ್ತಿಯೊಬ್ಬ ಈಗ ಅರೆಸ್ಟ್ ಆಗಿದ್ದಾನೆ. ಘಟನೆ ನಡೆದು ಆರು ತಿಂಗಳ ಬಳಿಕ ಈತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ತಾನೇ ಮಗುವನ್ನು ಕೊಂದಿದ್ದಾಗಿ ಪೊಲೀಸರ ಎದುರು ಒಪ್ಪಿಕೊಂಡಿದ್ದಾನೆ. ಅಷ್ಟಕ್ಕೂ ಅಷ್ಟು ಪುಟ್ಟ ಮಗುವನ್ನು ಆ ವ್ಯಕ್ತಿ ಕೊಲ್ಲಲು ಕಾರಣ 50 ರೂಪಾಯಿ!

ಘಟನೆ ನಡೆದದ್ದು ಫೆಬ್ರವರಿಯಲ್ಲಿ. ನರೇಶ್​ ಎಂಬ 22 ವರ್ಷದ ಯುವಕ ಆರೋಪಿ. ನಿರುದ್ಯೋಗಿ ಆಗಿರುವ ಈತ ಫರಿದಾಬಾದ್​​ನ ಸೆಕ್ಟರ್​ 56ರ ನಿವಾಸಿ ಹಾಗೂ ಆತನೊಬ್ಬ ಮಾದಕ ವ್ಯಸನಿ ಎಂದು ಫರಿದಾಬಾದ್ ಪೊಲೀಸ್​ ಪಿಆರ್​ಒ ಸುಬೆ ಸಿಂಗ್​ ತಿಳಿಸಿದ್ದಾರೆ. ಆತನಿಗೆ ಮಗುವಿನ ಮೇಲೆ ಯಾವುದೇ ದ್ವೇಷ ಇರಲಿಲ್ಲ. ಆದರೆ ಆ ಮಗುವಿನ ತಂದೆಗೂ-ಈ ನರೇಶ್​ಗೂ ಪದೇಪದೆ ಜಗಳವಾಗುತ್ತಿತ್ತು. ಹಾಗೇ ಒಂದು ದಿನ ನರೇಶ್​ ತನ್ನ ಪಕ್ಕದ ಮನೆಯವರೊಬ್ಬರ 8ವರ್ಷದ ಮಗಳ ಕೈಯಿಂದ 50 ರೂಪಾಯಿ ಕಸಿದಿದ್ದ. ಅದನ್ನು ನೋಡಿದ್ದ 18 ತಿಂಗಳ ಮಗುವಿನ ತಂದೆ, ನರೇಶ್​ ಜತೆ ಜಗಳ ತೆಗೆದು, ಆತ ಮಾಡಿದ ಕೆಲಸದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ. ಅದಾದ ಮೇಲೆ ನರೇಶ್​ ಹೇಗಾದರೂ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ ಎಂದು ಸುಬೆ ಸಿಂಗ್​ ವಿವರಿಸಿದ್ದಾರೆ.

ಫೆಬ್ರವರಿ 5ರಂದು ನರೇಶ್​ ಆ 18 ತಿಂಗಳ ಗಂಡು ಮಗು ಮನೆಯ ಬಳಿ ಒಬ್ಬನೇ ಆಡುತ್ತಿರುವುದು ಕಂಡು ಬಂತು. ಆತನನ್ನು ಎತ್ತಿಕೊಂಡು ತನ್ನ ಫ್ಲ್ಯಾಟ್​ಗೆ ಕರೆದುಕೊಂಡು ಹೋದ. ನಂತರ ಮಗುವನ್ನು ದೊಡ್ಡದಾದ ನೀರಿನ ಟ್ಯಾಂಕ್​​ನಲ್ಲಿ ಮುಳುಗಿಸಿ, ಯಾರಿಗೂ ಗೊತ್ತಾಗಬಾರದು ಎಂದು ಅದರ ಬಾಯಿಯನ್ನು ಮುಚ್ಚಿದ್ದ. ಮಗುವಿನ ಜೀವ ಹೋಯಿತು. ಇತ್ತ ಮಗುವಿನ ಪಾಲಕರು ಹುಡುಕಾಟ ಶುರು ಮಾಡಿದ್ದರು. ಅತ್ತ ನರೇಶ್​, ಮಗುವನ್ನು ಹತ್ಯೆ ಮಾಡಿದ ತಕ್ಷಣ ತನ್ನ ಸ್ಥಳ ಬದಲಾಯಿಸಿದ್ದ. ಆದರೆ ಆರು ತಿಂಗಳ ನಂತರ ಆತನನ್ನು ಹಿಡಿಯಲಾಗಿದೆ. ಮಗುವಿನ ಕುತ್ತಿಗೆಯಿಂದ ಆತ ಕದ್ದಿದ್ದ ತಾಯತವನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸ್ ಪಿಆರ್​ಒ ತಿಳಿಸಿದ್ದಾರೆ.

ಇದನ್ನೂ ಓದಿ: ‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​

ನಕಲಿ ನಾಗಕನ್ನಿಕೆಯ ಅನಾಚಾರ ಬಯಲು: ಮಹಿಳೆ ಆಸ್ಪತ್ರೆಗೆ ದಾಖಲು; ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ