AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮೂರು ತಿಂಗಳಿಂದ ತಂದೆಯ ಶವದೊಟ್ಟಿಗೇ ವಾಸ ಮಾಡುತ್ತಿದ್ದ ಪುತ್ರ !

ಪುತ್ರ ಕೌಶಿಕ್​ ಮಾನಸಿಕವಾಗಿ ಸ್ಥಿಮಿತದಲ್ಲಿ ಇಲ್ಲದ ವ್ಯಕ್ತಿ ಎಂದು ಹೇಳಿರುವ ಪೊಲೀಸರು ಇದೀಗ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ. ಸಹಜ ಸಾವು ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗುವುದು ಪೋಸ್ಟ್​ ಮಾರ್ಟಮ್​ ರಿಪೋರ್ಟ್ ಬಂದ ಬಳಿಕವಷ್ಟೇ ಎಂದು ಹೇಳಿದ್ದಾರೆ.

Shocking News: ಮೂರು ತಿಂಗಳಿಂದ ತಂದೆಯ ಶವದೊಟ್ಟಿಗೇ ವಾಸ ಮಾಡುತ್ತಿದ್ದ ಪುತ್ರ !
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 24, 2021 | 10:03 AM

Share

ತಂದೆ ಮೃತಪಟ್ಟು ಮೂರು ತಿಂಗಳಾದರೂ ಅವರ ದೇಹವನ್ನು ಮಣ್ಣು ಮಾಡದೆ, ಆ ಶವದೊಂದಿಗೆ ಮೂರು ತಿಂಗಳು ಕಳೆದ 40ವರ್ಷದ ಮಗನನ್ನು ಇದೀಗ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಶಾಕಿಂಗ್ ಘಟನೆ ನಡೆದದ್ದು ಕೋಲ್ಕತ್ತದಲ್ಲಿ. ಮೃತ ವ್ಯಕ್ತಿಯ ಹೆಸರು ಸಂಗ್ರಾಮ್​ ಡೇ. ಅವರಿಗೆ 70 ವರ್ಷವಾಗಿತ್ತು. ವಯೋಸಹಜ ಸಮಸ್ಯೆಯಿಂದ ಮೃತಪಟ್ಟಿದ್ದರು.  ಆದರೆ ಅವರ ಮಗ ಕೌಶಿಕ್​ ಡೇ  ಆ ಶವವನ್ನು ಏನೂ ಮಾಡಲಾಗದೆ ಅದರೊಂದಿಗೆ ಮೂರು ತಿಂಗಳಿಂದ ವಾಸವಾಗಿದ್ದ. 

ಪುತ್ರ ಕೌಶಿಕ್​ ಮಾನಸಿಕವಾಗಿ ಸ್ಥಿಮಿತದಲ್ಲಿ ಇಲ್ಲದ ವ್ಯಕ್ತಿ ಎಂದು ಹೇಳಿರುವ ಪೊಲೀಸರು ಇದೀಗ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ. ಸಹಜ ಸಾವು ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗುವುದು ಪೋಸ್ಟ್​ ಮಾರ್ಟಮ್​ ರಿಪೋರ್ಟ್ ಬಂದ ಬಳಿಕವಷ್ಟೇ ಎಂದು ಹೇಳಿದ್ದಾರೆ. ಸಂಗ್ರಾಮ್ ಡೇ ಅವರು ಮುಂಬೈನ ಬಾಬಾ ಅಟೋಮಿಕ್​ ರಿಸರ್ಚ್​ ಸೆಂಟರ್​​ನಲ್ಲಿ ಕೆಲಸ ಮಾಡಿದವರು. ಕೋಲ್ಕತ್ತದ ಕೆ.ಪಿ.ರಾಯ್​ ಲೇನ್​ನಲ್ಲಿ ಅವರ ಮನೆಯಿತ್ತು. ಇದೀಗ ಅವರ ಶವ ಬಹುತೇಕ ಅಸ್ಥಿಪಂಜರದಂತಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಮೂರು ತಿಂಗಳ ಹಿಂದೆ ತಂದೆ ಮೃತಪಟ್ಟಿದ್ದಾಗಿ ಕೌಶಿಕ್​ ತಿಳಿಸಿದ್ದರೂ, ನಿಖರ ಸಮಯ ತಿಳಿಯಲು ಪೋಸ್ಟ್​ಮಾರ್ಟಮ್​ ರಿಪೋರ್ಟ್ ಬರಬೇಕಿದೆ.

ಇನ್ನೊಂದು ಶಾಕಿಂಗ್​ ಸುದ್ದಿಯೆಂದರೆ, ಪತ್ನಿ ಅರುಣಾ ಡೇ (65) ಕೂಡ ಅದೇ ಮನೆಯಲ್ಲಿದ್ದಾರೆ. ಆದರೆ ಅವರಿಗೆ ಎದ್ದು ಓಡಾಡಲೂ ಆಗದಷ್ಟು ಅನಾರೋಗ್ಯ. ಸಂಗ್ರಾಮ್​ ಡೇ ಕೆಲವು ದಿನಗಳಿಂದ ಕಾಣುತ್ತಿಲ್ಲ. ಆ ಮನೆ ಸ್ವಲ್ಪ ವಿಭಿನ್ನವಾಗಿ ತೋರುತ್ತಿದೆ ಎಂದು ಅಕ್ಕಪಕ್ಕದ ಮನೆಯವರು ಸುಳಿವು ನೀಡಿದ ಬೆನ್ನಲ್ಲೇ ಅಲ್ಲಿಗೆ ಹೋಗಿ ಪರಿಶೀಲನೆ ನಡೆಸಿದ್ದೇವೆ. ಆಗ ಅವರು ಸತ್ತಿದ್ದು ಬೆಳಕಿಗೆ ಬಂದಿದೆ. ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಿಮ್ಸ್​ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ನುರಿತ ವ್ಯವಸ್ಥೆ ಇಲ್ಲ; ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

Published On - 9:53 am, Wed, 24 November 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?