AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮೂರು ತಿಂಗಳಿಂದ ತಂದೆಯ ಶವದೊಟ್ಟಿಗೇ ವಾಸ ಮಾಡುತ್ತಿದ್ದ ಪುತ್ರ !

ಪುತ್ರ ಕೌಶಿಕ್​ ಮಾನಸಿಕವಾಗಿ ಸ್ಥಿಮಿತದಲ್ಲಿ ಇಲ್ಲದ ವ್ಯಕ್ತಿ ಎಂದು ಹೇಳಿರುವ ಪೊಲೀಸರು ಇದೀಗ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ. ಸಹಜ ಸಾವು ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗುವುದು ಪೋಸ್ಟ್​ ಮಾರ್ಟಮ್​ ರಿಪೋರ್ಟ್ ಬಂದ ಬಳಿಕವಷ್ಟೇ ಎಂದು ಹೇಳಿದ್ದಾರೆ.

Shocking News: ಮೂರು ತಿಂಗಳಿಂದ ತಂದೆಯ ಶವದೊಟ್ಟಿಗೇ ವಾಸ ಮಾಡುತ್ತಿದ್ದ ಪುತ್ರ !
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 24, 2021 | 10:03 AM

Share

ತಂದೆ ಮೃತಪಟ್ಟು ಮೂರು ತಿಂಗಳಾದರೂ ಅವರ ದೇಹವನ್ನು ಮಣ್ಣು ಮಾಡದೆ, ಆ ಶವದೊಂದಿಗೆ ಮೂರು ತಿಂಗಳು ಕಳೆದ 40ವರ್ಷದ ಮಗನನ್ನು ಇದೀಗ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಶಾಕಿಂಗ್ ಘಟನೆ ನಡೆದದ್ದು ಕೋಲ್ಕತ್ತದಲ್ಲಿ. ಮೃತ ವ್ಯಕ್ತಿಯ ಹೆಸರು ಸಂಗ್ರಾಮ್​ ಡೇ. ಅವರಿಗೆ 70 ವರ್ಷವಾಗಿತ್ತು. ವಯೋಸಹಜ ಸಮಸ್ಯೆಯಿಂದ ಮೃತಪಟ್ಟಿದ್ದರು.  ಆದರೆ ಅವರ ಮಗ ಕೌಶಿಕ್​ ಡೇ  ಆ ಶವವನ್ನು ಏನೂ ಮಾಡಲಾಗದೆ ಅದರೊಂದಿಗೆ ಮೂರು ತಿಂಗಳಿಂದ ವಾಸವಾಗಿದ್ದ. 

ಪುತ್ರ ಕೌಶಿಕ್​ ಮಾನಸಿಕವಾಗಿ ಸ್ಥಿಮಿತದಲ್ಲಿ ಇಲ್ಲದ ವ್ಯಕ್ತಿ ಎಂದು ಹೇಳಿರುವ ಪೊಲೀಸರು ಇದೀಗ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ. ಸಹಜ ಸಾವು ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗುವುದು ಪೋಸ್ಟ್​ ಮಾರ್ಟಮ್​ ರಿಪೋರ್ಟ್ ಬಂದ ಬಳಿಕವಷ್ಟೇ ಎಂದು ಹೇಳಿದ್ದಾರೆ. ಸಂಗ್ರಾಮ್ ಡೇ ಅವರು ಮುಂಬೈನ ಬಾಬಾ ಅಟೋಮಿಕ್​ ರಿಸರ್ಚ್​ ಸೆಂಟರ್​​ನಲ್ಲಿ ಕೆಲಸ ಮಾಡಿದವರು. ಕೋಲ್ಕತ್ತದ ಕೆ.ಪಿ.ರಾಯ್​ ಲೇನ್​ನಲ್ಲಿ ಅವರ ಮನೆಯಿತ್ತು. ಇದೀಗ ಅವರ ಶವ ಬಹುತೇಕ ಅಸ್ಥಿಪಂಜರದಂತಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಮೂರು ತಿಂಗಳ ಹಿಂದೆ ತಂದೆ ಮೃತಪಟ್ಟಿದ್ದಾಗಿ ಕೌಶಿಕ್​ ತಿಳಿಸಿದ್ದರೂ, ನಿಖರ ಸಮಯ ತಿಳಿಯಲು ಪೋಸ್ಟ್​ಮಾರ್ಟಮ್​ ರಿಪೋರ್ಟ್ ಬರಬೇಕಿದೆ.

ಇನ್ನೊಂದು ಶಾಕಿಂಗ್​ ಸುದ್ದಿಯೆಂದರೆ, ಪತ್ನಿ ಅರುಣಾ ಡೇ (65) ಕೂಡ ಅದೇ ಮನೆಯಲ್ಲಿದ್ದಾರೆ. ಆದರೆ ಅವರಿಗೆ ಎದ್ದು ಓಡಾಡಲೂ ಆಗದಷ್ಟು ಅನಾರೋಗ್ಯ. ಸಂಗ್ರಾಮ್​ ಡೇ ಕೆಲವು ದಿನಗಳಿಂದ ಕಾಣುತ್ತಿಲ್ಲ. ಆ ಮನೆ ಸ್ವಲ್ಪ ವಿಭಿನ್ನವಾಗಿ ತೋರುತ್ತಿದೆ ಎಂದು ಅಕ್ಕಪಕ್ಕದ ಮನೆಯವರು ಸುಳಿವು ನೀಡಿದ ಬೆನ್ನಲ್ಲೇ ಅಲ್ಲಿಗೆ ಹೋಗಿ ಪರಿಶೀಲನೆ ನಡೆಸಿದ್ದೇವೆ. ಆಗ ಅವರು ಸತ್ತಿದ್ದು ಬೆಳಕಿಗೆ ಬಂದಿದೆ. ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಿಮ್ಸ್​ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ನುರಿತ ವ್ಯವಸ್ಥೆ ಇಲ್ಲ; ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

Published On - 9:53 am, Wed, 24 November 21

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?