AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮೂರು ತಿಂಗಳಿಂದ ತಂದೆಯ ಶವದೊಟ್ಟಿಗೇ ವಾಸ ಮಾಡುತ್ತಿದ್ದ ಪುತ್ರ !

ಪುತ್ರ ಕೌಶಿಕ್​ ಮಾನಸಿಕವಾಗಿ ಸ್ಥಿಮಿತದಲ್ಲಿ ಇಲ್ಲದ ವ್ಯಕ್ತಿ ಎಂದು ಹೇಳಿರುವ ಪೊಲೀಸರು ಇದೀಗ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ. ಸಹಜ ಸಾವು ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗುವುದು ಪೋಸ್ಟ್​ ಮಾರ್ಟಮ್​ ರಿಪೋರ್ಟ್ ಬಂದ ಬಳಿಕವಷ್ಟೇ ಎಂದು ಹೇಳಿದ್ದಾರೆ.

Shocking News: ಮೂರು ತಿಂಗಳಿಂದ ತಂದೆಯ ಶವದೊಟ್ಟಿಗೇ ವಾಸ ಮಾಡುತ್ತಿದ್ದ ಪುತ್ರ !
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 24, 2021 | 10:03 AM

Share

ತಂದೆ ಮೃತಪಟ್ಟು ಮೂರು ತಿಂಗಳಾದರೂ ಅವರ ದೇಹವನ್ನು ಮಣ್ಣು ಮಾಡದೆ, ಆ ಶವದೊಂದಿಗೆ ಮೂರು ತಿಂಗಳು ಕಳೆದ 40ವರ್ಷದ ಮಗನನ್ನು ಇದೀಗ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಶಾಕಿಂಗ್ ಘಟನೆ ನಡೆದದ್ದು ಕೋಲ್ಕತ್ತದಲ್ಲಿ. ಮೃತ ವ್ಯಕ್ತಿಯ ಹೆಸರು ಸಂಗ್ರಾಮ್​ ಡೇ. ಅವರಿಗೆ 70 ವರ್ಷವಾಗಿತ್ತು. ವಯೋಸಹಜ ಸಮಸ್ಯೆಯಿಂದ ಮೃತಪಟ್ಟಿದ್ದರು.  ಆದರೆ ಅವರ ಮಗ ಕೌಶಿಕ್​ ಡೇ  ಆ ಶವವನ್ನು ಏನೂ ಮಾಡಲಾಗದೆ ಅದರೊಂದಿಗೆ ಮೂರು ತಿಂಗಳಿಂದ ವಾಸವಾಗಿದ್ದ. 

ಪುತ್ರ ಕೌಶಿಕ್​ ಮಾನಸಿಕವಾಗಿ ಸ್ಥಿಮಿತದಲ್ಲಿ ಇಲ್ಲದ ವ್ಯಕ್ತಿ ಎಂದು ಹೇಳಿರುವ ಪೊಲೀಸರು ಇದೀಗ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ. ಸಹಜ ಸಾವು ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗುವುದು ಪೋಸ್ಟ್​ ಮಾರ್ಟಮ್​ ರಿಪೋರ್ಟ್ ಬಂದ ಬಳಿಕವಷ್ಟೇ ಎಂದು ಹೇಳಿದ್ದಾರೆ. ಸಂಗ್ರಾಮ್ ಡೇ ಅವರು ಮುಂಬೈನ ಬಾಬಾ ಅಟೋಮಿಕ್​ ರಿಸರ್ಚ್​ ಸೆಂಟರ್​​ನಲ್ಲಿ ಕೆಲಸ ಮಾಡಿದವರು. ಕೋಲ್ಕತ್ತದ ಕೆ.ಪಿ.ರಾಯ್​ ಲೇನ್​ನಲ್ಲಿ ಅವರ ಮನೆಯಿತ್ತು. ಇದೀಗ ಅವರ ಶವ ಬಹುತೇಕ ಅಸ್ಥಿಪಂಜರದಂತಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಮೂರು ತಿಂಗಳ ಹಿಂದೆ ತಂದೆ ಮೃತಪಟ್ಟಿದ್ದಾಗಿ ಕೌಶಿಕ್​ ತಿಳಿಸಿದ್ದರೂ, ನಿಖರ ಸಮಯ ತಿಳಿಯಲು ಪೋಸ್ಟ್​ಮಾರ್ಟಮ್​ ರಿಪೋರ್ಟ್ ಬರಬೇಕಿದೆ.

ಇನ್ನೊಂದು ಶಾಕಿಂಗ್​ ಸುದ್ದಿಯೆಂದರೆ, ಪತ್ನಿ ಅರುಣಾ ಡೇ (65) ಕೂಡ ಅದೇ ಮನೆಯಲ್ಲಿದ್ದಾರೆ. ಆದರೆ ಅವರಿಗೆ ಎದ್ದು ಓಡಾಡಲೂ ಆಗದಷ್ಟು ಅನಾರೋಗ್ಯ. ಸಂಗ್ರಾಮ್​ ಡೇ ಕೆಲವು ದಿನಗಳಿಂದ ಕಾಣುತ್ತಿಲ್ಲ. ಆ ಮನೆ ಸ್ವಲ್ಪ ವಿಭಿನ್ನವಾಗಿ ತೋರುತ್ತಿದೆ ಎಂದು ಅಕ್ಕಪಕ್ಕದ ಮನೆಯವರು ಸುಳಿವು ನೀಡಿದ ಬೆನ್ನಲ್ಲೇ ಅಲ್ಲಿಗೆ ಹೋಗಿ ಪರಿಶೀಲನೆ ನಡೆಸಿದ್ದೇವೆ. ಆಗ ಅವರು ಸತ್ತಿದ್ದು ಬೆಳಕಿಗೆ ಬಂದಿದೆ. ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಿಮ್ಸ್​ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ನುರಿತ ವ್ಯವಸ್ಥೆ ಇಲ್ಲ; ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

Published On - 9:53 am, Wed, 24 November 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್