AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಅಕೌಂಟ್​​​ನಲ್ಲಿ ಏಕಾಏಕಿ ಲಕ್ಷಾಂತರ ರೂ. ನೋಡಿ ಫುಲ್​ ಖುಷಿಯಾದ ವ್ಯಕ್ತಿ; ಕಳ್ಳತನ ಮಾಡದೆ ಇದ್ರೂ ಜೈಲುಪಾಲು !

ದಕ್ಷಿಣ ಗ್ರಾಮೀಣ ಬ್ಯಾಂಕ್​​​ನ ಭಕ್ತಿಯಾರ್​​ಪುರ ಶಾಖೆಯ ಸಿಬ್ಬಂದಿ ಮಾಡಿದ ಪ್ರಮಾದ ಇದು. ಒಬ್ಬರ ಅಕೌಂಟ್​ನಿಂದ ಇನ್ನೊಬ್ಬರ ಅಕೌಂಟ್​ಗೆ ಹಣ ವರ್ಗಾವಣೆ ಮಾಡುವಾಗ ಅದೇನೋ ಎಡವಟ್ಟು ಮಾಡಿದ್ದರು.

ತನ್ನ ಅಕೌಂಟ್​​​ನಲ್ಲಿ ಏಕಾಏಕಿ ಲಕ್ಷಾಂತರ ರೂ. ನೋಡಿ ಫುಲ್​ ಖುಷಿಯಾದ ವ್ಯಕ್ತಿ; ಕಳ್ಳತನ ಮಾಡದೆ ಇದ್ರೂ ಜೈಲುಪಾಲು !
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 16, 2021 | 9:55 AM

Share

ಬಿಹಾರ್​: ಬ್ಯಾಂಕ್ (Bank)​​ವೊಂದರಲ್ಲಿ ಆದ ತಾಂತ್ರಿಕ ದೋಷದಿಂದಾಗಿ ವ್ಯಕ್ತಿಯೊಬ್ಬ 1.61 ಲಕ್ಷ ರೂಪಾಯಿಯನ್ನು ಪಡೆಯುವಂತಾಯಿತು. ಆದರೆ ಅದು ನಿಮ್ಮ ಹಣವಲ್ಲ. ಆಕಸ್ಮಿಕವಾಗಿ ನಿಮ್ಮ ಅಕೌಂಟ್​ಗೆ ಬಂದಿದೆ. ಅದನ್ನು ಹಿಂದಿರುಗಿಸಿ ಎಂದು ಬ್ಯಾಂಕ್​​ನವರು ಕೇಳಿದರೆ ಆ ವ್ಯಕ್ತಿಯೀಗ ಹಣ ವಾಪಸ್​ ಕೊಡಲು ಸುತಾರಾಂ ಒಪ್ಪುತ್ತಿಲ್ಲ. ಅದರ ಬದಲಿಗೆ, ನಾನು ಈ ಹಣವನ್ನು ಹಿಂದಿರುಗಿಸುವುದಿಲ್ಲ. ಇದು ನನಗೆಂದೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳಿಸಿದ ಆರ್ಥಿಕ ನೆರವು ಎನ್ನುತ್ತಿದ್ದಾರೆ. ಅಂದಹಾಗೆ ಈ ಘಟನೆ ನಡೆದದ್ದು ಬಿಹಾರದ ಖಗಾರಿಯಾ ಎಂಬಲ್ಲಿ.  

ದಕ್ಷಿಣ ಗ್ರಾಮೀಣ ಬ್ಯಾಂಕ್​​​ನ ಭಕ್ತಿಯಾರ್​​ಪುರ ಶಾಖೆಯ ಸಿಬ್ಬಂದಿ ಮಾಡಿದ ಪ್ರಮಾದ ಇದು. ಒಬ್ಬರ ಅಕೌಂಟ್​ನಿಂದ ಇನ್ನೊಬ್ಬರ ಅಕೌಂಟ್​ಗೆ ಹಣ ವರ್ಗಾವಣೆ ಮಾಡುವಾಗ ಅದೇನೋ ದೋಷ ಮಾಡಿದ್ದರಿಂದ, ಸಂಬಂಧವೇ ಇಲ್ಲ ರಂಜಿತ್​ ಕುಮಾರ್​ ದಾಸ್​ ಎಂಬುವರು ಅಕೌಂಟ್​​ಗೆ ಹೋಗಿತ್ತು. ರಂಜಿತ್​​ ಕುಮಾರ್​ ತನ್ನ ಅಕೌಂಟ್​​ನಲ್ಲಿ ಬರೋಬ್ಬರಿ 1,60,970 ರೂಪಾಯಿ ನೋಡಿದ್ದೇ ನೋಡಿದ್ದು ಸಿಕ್ಕಾಪಟೆ ಖುಷಿ ಆದರು. ಇದು ಲಕ್​ ಎಂದೇ ಭಾವಿಸಿದರು. ಅಷ್ಟು ದೊಡ್ಡ ಮಟ್ಟಣದ ಹಣವನ್ನು ಬೇಕಾಬಿಟ್ಟಿ ಖಾಲಿ ಮಾಡಬಾರದು ಎಂದು ನಿರ್ಧರಿಸಿ, ಸಣ್ಣ ಮೊತ್ತದಲ್ಲಿ ಹಣ ತೆಗೆಯಲು ಪ್ರಾರಂಭಿಸಿದರು.  ಇದು ಖಂಡಿತವಾಗಿಯೂ ಪ್ರಧಾನಿ ನರೇಂದ್ರ ಮೋದಿಯವರ ಯಾವುದೋ ಯೋಜನೆಯಿಂದ, ಕೇಂದ್ರ ಸರ್ಕಾರದಿಂದ ಬಂದ ಹಣ ಎಂದೇ ಭಾವಿಸಿದ್ದರು.

ಆದರೆ ಕೆಲವೇ ಹೊತ್ತಲ್ಲಿ ಬ್ಯಾಂಕ್​ಗೆ ತನ್ನ ತಪ್ಪಿನ ಅರಿವಾಯಿತು. ಅಧಿಕಾರಿಗಳು ರಂಜಿತ್​​ಗೆ ಕರೆ ಮಾಡಿ ಹಣ ಹಿಂದಿರುಗಿಸಲು ಹೇಳಿದರು. ಆದರೆ ಅವರು ಸುತಾರಾಂ ಒಪ್ಪಲೇ ಇಲ್ಲ. ಕಣ್ತಪ್ಪಿನಿಂದ ನಿಮ್ಮ ಖಾತೆಗೆ ಬಂದ ಹಣ ಎಂದರೂ ಅವರು ಒಪ್ಪುತ್ತಲೇ ಇಲ್ಲ. ನನ್ನ ಖಾತೆಗೆ ಪ್ರಧಾನಿ ಮೋದಿಯವರೇ ಹಣ ಕಳಿಸಿದ್ದಾರೆ. ಅದನ್ನು ನಾನು ಹಿಂದಿರುಗಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅದಾದ ಬಳಿಕ ದಕ್ಷಿಣ ಗ್ರಾಮೀಣ ಬ್ಯಾಂಕ್​​ನವರು ರಂಜಿತ್​ಗೆ ನೋಟಿಸ್​ ಕೂಡ ನೀಡಿದರು. ಆಗಲೂ ಹಣ ವಾಪಸ್​ ಮಾಡಲು ಆತ ಒಪ್ಪದೆ ಇದ್ದಾಗ ಮಾನ್ಸಿ ಠಾಣೆಯ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.  ಇದೀಗ ರಂಜಿತ್​​ರನ್ನು ಬಂಧಿಸಿರುವ ಪೊಲೀಸರು ಖಗಾರಿಯಾ ಜೈಲಿಗೆ ಕಳಿಸಿದ್ದಾರೆ.

ಇದನ್ನೂ ಓದಿ: 70ರ ವಯಸ್ಸಿನಲ್ಲೂ ಸಾಧನೆಯ ಬೆಳಕು ಚೆಲ್ಲಿದ ವ್ಯಕ್ತಿ, ವಿದ್ಯುತ್ ಬಲ್ಬ್‌ಗಳಲ್ಲಿ ‘ನಮೋಕರ್ ಮಂತ್ರ’ ಕೆತ್ತನೆ

ನಿಮಗೆ ಕಾಜು ಬರ್ಫಿ ಅಂದ್ರೆ ಇಷ್ಟಾನಾ? ತಯಾರಿಸುವ ವಿಧಾನವನ್ನು ವಿಡಿಯೋದಲ್ಲೇ ನೋಡಿ

(A man gets Rs 1.60 lakh after bank error In Bihar)

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ