AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀನ್ಸ್ ಧರಿಸಿ ಅಂಗಡಿಗೆ ಬಂದ ಬಾಲಕಿಗೆ ಒದ್ದು ಕಳಿಸಿದ ಮಾಲೀಕ; ಇನ್ನೊಮ್ಮೆ ಬರಬೇಡ ಎಂಬ ಎಚ್ಚರಿಕೆ !

ಬಾಲಕಿ ಮನೆಗೆ ಬಂದು ಅಂಗಡಿಯಲ್ಲಿ ನಡೆದ ಘಟನೆಯನ್ನು ವಿಸ್ತಾರವಾಗಿ ಹೇಳಿಕೊಂಡಿದ್ದಾಳೆ. ಅದನ್ನು ಕೇಳಿದ ಆಕೆಯ ತಂದೆ ಅಂಗಡಿಗೆ ಹೋದರೆ, ಆ ಮಾಲೀಕನ ಇಬ್ಬರು ಮಕ್ಕಳು ಬಾಲಕಿಯ ಅಪ್ಪನ ಮೇಲೆ ಕೂಡ ಹಲ್ಲೆಗೆ ಮುಂದಾಗಿದ್ದಾರೆ.

ಜೀನ್ಸ್ ಧರಿಸಿ ಅಂಗಡಿಗೆ ಬಂದ ಬಾಲಕಿಗೆ ಒದ್ದು ಕಳಿಸಿದ ಮಾಲೀಕ; ಇನ್ನೊಮ್ಮೆ ಬರಬೇಡ ಎಂಬ ಎಚ್ಚರಿಕೆ !
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 01, 2021 | 5:37 PM

Share

ಬುರ್ಖಾ ಧರಿಸದೆ, ಜೀನ್ಸ್ ತೊಟ್ಟು ಬಂದಿದ್ದಾಳೆ ಎಂಬ ಕಾರಣಕ್ಕೆ ಮುಸ್ಲಿಂ ಹುಡುಗಿಯೊಬ್ಬಳಿಗೆ ಅಂಗಡಿ ಮಾಲೀಕ ಒದ್ದು ಕಳಿಸಿದ ಘಟನೆ ಅಸ್ಸಾಂನ ಬಿಸ್ವನಾಥ್​ ಜಿಲ್ಲೆಯಲ್ಲಿ ನಡೆದಿದೆ.  ಈ ಘಟನೆ ನಡೆದದ್ದು ಮೊಬೈಲ್​ ಫೋನ್​ ಸಾಮಗ್ರಿಗಳ ಅಂಗಡಿಯಲ್ಲಿ. ಬಾಲಕಿ ಇಯರ್​ ಫೋನ್​ ಖರೀದಿ ಮಾಡಲೆಂದು ಹೋಗಿದ್ದಳು. 

ಅಂಗಡಿ ಮಾಲೀಕನ ಹೆಸರು ನೂರುಲ್​ ಅಮಿನ್​. ಆಕೆ ಜೀನ್ಸ್​ ಧರಿಸಿ ಹೋಗಿದ್ದರಿಂದ ಕೋಪಗೊಂಡ ಆತ ಇಯರ್​ ಫೋನ್​ ಕೊಡಲು ನಿರಾಕರಿಸಿದ್ದಲ್ಲದೆ, ಕಾಲಿನಲ್ಲಿ ಅಂಗಡಿಯಿಂದ ತಳ್ಳಿದ್ದಾನೆ. ಬುರ್ಖಾ ಧರಿಸದೆ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಈ ಬಗ್ಗೆ ಬಾಲಕಿಯೇ ಹೇಳಿಕೊಂಡಿದ್ದಾಳೆ. ಆತ ವಯಸ್ಸಾದ ವ್ಯಕ್ತಿ..ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಇನ್ನೊಮ್ಮೆ ತನ್ನ ಅಂಗಡಿಗೆ ಬರಬೇಡ ಎಂದು ಹೇಳಿದ್ದಾನೆ. ಅವನ ಅಂಗಡಿ ಆತನ ಮನೆಯಲ್ಲೇ ಇದೆ. ನನ್ನನ್ನು ತಳ್ಳುವುದನ್ನು ಆತನ ಮನೆಯವರೆಲ್ಲ ನೋಡಿದರೂ ಕೂಡ ಸುಮ್ಮನಿದ್ದರು. ಅವರ ಮನೆಯಲ್ಲಿ ಹೆಂಗಸರು ಬುರ್ಖಾ, ಹಿಜಾಬ್ ಧರಿಸಿದ್ದರು ಎಂದು ಬಾಲಕಿ ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಬಾಲಕಿ ಮನೆಗೆ ಬಂದು ಅಂಗಡಿಯಲ್ಲಿ ನಡೆದ ಘಟನೆಯನ್ನು ವಿಸ್ತಾರವಾಗಿ ಹೇಳಿಕೊಂಡಿದ್ದಾಳೆ. ಅದನ್ನು ಕೇಳಿದ ಆಕೆಯ ತಂದೆ ಅಂಗಡಿಗೆ ಹೋದರೆ, ಆ ಮಾಲೀಕನ ಇಬ್ಬರು ಮಕ್ಕಳು ಬಾಲಕಿಯ ಅಪ್ಪನ ಮೇಲೆ ಕೂಡ ಹಲ್ಲೆಗೆ ಮುಂದಾಗಿದ್ದಾರೆ. ಅದಾದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಎಸ್.ಆರ್.ಶ್ರೀನಿವಾಸ್​ ಕಾಂಗ್ರೆಸ್​ಗೆ ಬಂದ್ರೆ ಗುಬ್ಬಿ ಕ್ಷೇತ್ರಕ್ಕೆ ಅವರೇ ಅಭ್ಯರ್ಥಿ: ಸಿದ್ದರಾಮಯ್ಯ ಘೋಷಣೆ

T20 World Cup: ಮಾತಿನ ಮೇಲೆ ನಿಲ್ಲದ ಕೊಹ್ಲಿ! ತಂಡದ ಕಳಪೆ ಪ್ರದರ್ಶನಕ್ಕೆ ಕೊಹ್ಲಿ ಎಡವಟ್ಟು ನಿರ್ಧಾರಗಳೇ ಕಾರಣ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!