AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ.. ಅಪ್ಪನ ಸಾವಿಗೆ ಕಾರಣನಾದ ಅಣ್ಣನನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಮ್ಮ

ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಸಂಜಯ್​ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ತಂದೆ ಸಾವಿಗೀಡಾಗಿದ್ದಾರೆ. ಈ ಘಟನೆಯಿಂದ ಕುಪಿತನಾದ ಬಾಬು ಸೇಡು ತೀರಿಸಿಕೊಳ್ಳುವ ಸಲುವಾಗಿ ತನ್ನ ಸಹಚರರೊಂದಿಗೆ ಸೇರಿ ಅಣ್ಣನ ಕತ್ತು ಹಿಸುಕಿ ಕೊಲೆಗೈದಿದ್ದಾನೆ.

ಆಸ್ತಿಗಾಗಿ.. ಅಪ್ಪನ ಸಾವಿಗೆ ಕಾರಣನಾದ ಅಣ್ಣನನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಮ್ಮ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Jan 13, 2021 | 10:33 AM

Share

ಲಕ್ನೋ: ತಂದೆಯ ಸಾವಿಗೆ ಕಾರಣನಾದ ಅಣ್ಣನನ್ನು ಆತನ ತಮ್ಮನೇ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಸಂಜಯ್​ (34) ಎಂಬುವವನ ನಗ್ನ ದೇಹ ಜಹಾಂಗೀರ್​ಪುರದ ಬಳಿ ಪತ್ತೆಯಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸಿದಾಗ ಆತನ ತಮ್ಮ ಬಾಬು ಈ ಕೃತ್ಯ ನಡೆಸಿದ್ದಾನೆ ಎನ್ನುವುದು ತಿಳಿದುಬಂದಿದೆ.

ಬಾಬು ಮತ್ತು ಸಂಜಯ್​ ಸಹೋದರರಾಗಿದ್ದು, ಕಳೆದ ವಾರ ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಸಂಜಯ್​ ತನ್ನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ತಂದೆ ಸಾವಿಗೀಡಾಗಿದ್ದಾರೆ. ಈ ಘಟನೆಯಿಂದ ಕುಪಿತನಾದ ಬಾಬು ಸೇಡು ತೀರಿಸಿಕೊಳ್ಳುವ ಸಲುವಾಗಿ ತನ್ನ ಸಹಚರರೊಂದಿಗೆ ಸೇರಿ ಅಣ್ಣನ ಕತ್ತು ಹಿಸುಕಿ ಕೊಲೆಗೈದಿದ್ದಾನೆ.

ಸಹೋದರರನ್ನು ಕೊಲೆ ಮಾಡಿದ್ದಾಗಿ ಬಾಬು ಒಪ್ಪಿಕೊಂಡಿದ್ದು, ತನ್ನ ತಂದೆಯ ಸಾವಿಗೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದೆ ಎಂದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಾಬು ಮತ್ತು ರವೀಂದರ್ ಇಬ್ಬರನ್ನೂ ಬಂಧಿಸಿದ್ದಾರೆ. ಆದರೆ, ಕೊಲೆಯಲ್ಲಿ ಭಾಗಿಯಾದ ಲೋಕೇಂದ್ರ ಮತ್ತು ದೀಪು ಎಂಬ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.

ಅಪ್ರಾಪ್ತ ಬಾಲಕಿಯ ಶವ ಪತ್ತೆ, ಕೊಲೆ ಶಂಕೆ

ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ