AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನಲ್ಲೇ ಅತ್ಯಂತ ದೊಡ್ಡ ಪಾಪ್​-ಅಪ್​ ಗ್ರೀಟಿಂಗ್ ಕಾರ್ಡ್​ ತಯಾರಿಸಿದ ಭಾರತೀಯ ಮೂಲದ ದುಬೈ ನಿವಾಸಿ; ಗಿನ್ನೆಸ್ ದಾಖಲೆ

17ವರ್ಷಗಳ ಹಿಂದೆ ಚೆನ್ನೈನಿಂದ ದುಬೈಗೆ ಹೋಗಿ ನೆಲೆಸಿರುವ ಸಾರಂಗಪಾಣಿಗೆ ದಾಖಲೆಗಳು ಹೊಸದಲ್ಲ. ಭಾರತ ಮತ್ತು ದುಬೈನಲ್ಲಿ ಸೇರಿ ಇದು ಅವರ 19ನೇ ವಿಶ್ವದಾಖಲೆಯಾಗಿದೆ.

ಜಗತ್ತಿನಲ್ಲೇ ಅತ್ಯಂತ ದೊಡ್ಡ ಪಾಪ್​-ಅಪ್​ ಗ್ರೀಟಿಂಗ್ ಕಾರ್ಡ್​ ತಯಾರಿಸಿದ ಭಾರತೀಯ ಮೂಲದ ದುಬೈ ನಿವಾಸಿ; ಗಿನ್ನೆಸ್ ದಾಖಲೆ
ರಾಮಕುಮಾರ್ ಸಾರಂಗಪಾಣಿ ಮತ್ತು ಅವರು ತಯಾರಿಸಿದ ಗ್ರೀಟಿಂಗ್ ಕಾರ್ಡ್​
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 03, 2021 | 3:48 PM

ದುಬೈ: ಭಾರತೀಯ ಮೂಲದ ರಾಮ್​ಕುಮಾರ್ ಸಾರಂಗಪಾಣಿ ಅವರು ವಿಶ್ವದ ಅತ್ಯಂತ ದೊಡ್ಡ ಪಾಪ್​-ಅಪ್​ ಗ್ರೀಟಿಂಗ್ ಕಾರ್ಡ್​ (3ಡಿ ಆಯಾಮ) ತಯಾರಿಸುವ ಮೂಲಕ ಗಿನ್ನೆಸ್​ ದಾಖಲೆ ನಿರ್ಮಿಸಿದ್ದಾರೆ.

ಈ ಶುಭಾಶಯ ಪತ್ರ 8.2 ಚದರ ಮೀಟರ್​ ವಿಸ್ತಾರವಾಗಿದೆ. ಯುಎಇ ಪ್ರಧಾನಿ, ಉಪಾಧ್ಯಕ್ಷ ಹಾಗೂ ದುಬೈನ ರಾಜನಾಗಿರುವ ಶೇಖ್​ ಮೊಹಮ್ಮದ್​ ಬಿನ್​ ರಶೀದ್​ ಮಕ್ತುಮ್​ ಅವರ 15ನೇ ಪದಗ್ರಹಣ ದಿನದ ನಿಮಿತ್ತ ರಾಮ್​ಕುಮಾರ್​ ಗ್ರೀಟಿಂಗ್​ ಕಾರ್ಡ್​ ತಯಾರಿಸಿದ್ದು, ವಿಶ್ವದಲ್ಲೇ ಅತ್ಯಂತ ದೊಡ್ಡ ಪಾಪ್ ಅಪ್ ಶುಭಾಶಯ ಪತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಕಾರ್ಡ್ ಒಂದು ಸಹಜ ಅಳತೆಯ ಶುಭಾಶಯ ಪತ್ರಕ್ಕಿಂತ 100 ಪಟ್ಟು ದೊಡ್ಡ ಗ್ರೀಟಿಂಗ್​ ಕಾರ್ಡ್ ಆಗಿದೆ. ದುಬೈ ಮೂಲದ ಕಲಾವಿದ ಅಕ್ಬರ್​ ಸಾಹೇಬ್​ ರಚಿಸಿರುವ ಶೇಖ್​ ಮೊಹಮದ್​ ಅವರ ಪೇಂಟಿಂಗ್​ ಈ ಕಾರ್ಡ್​ನಲ್ಲಿದೆ ಎಂದು ಗಲ್ಫ್​ ನ್ಯೂಸ್ ವರದಿ ಮಾಡಿದೆ.

ಇಷ್ಟು ದೊಡ್ಡ, ವಿಶೇಷ ಗ್ರೀಟಿಂಗ್ ಕಾರ್ಡ್ ತಯಾರಿಸಲು 6 ತಿಂಗಳು ಬೇಕಾಯಿತು. ದೋಹಾದಲ್ಲಿ ಜನವರಿ 4ರಿಂದ 18ರವರೆಗೆ ಇದರ ಪ್ರದರ್ಶನ ನಡೆಯಲಿದೆ ಎಂದು ಸಾರಂಗಪಾಣಿ ತಿಳಿಸಿದ್ದಾರೆ. ಈ ಮೊದಲು ಹಾಂಗ್​ಕಾಂಗ್​ ಮೂಲದ ವ್ಯಕ್ತಿಯೋರ್ವರು 6.729 ಚದರ ಮೀಟರ್ ವಿಸ್ತೀರ್ಣದ ಗ್ರೀಟಿಂಗ್ ಕಾರ್ಡ್​ ತಯಾರಿಸಿ ಗಿನ್ನೆಸ್ ದಾಖಲೆ ನಿರ್ಮಿಸಿದ್ದರು. ಅದನ್ನೀಗ ಸಾರಂಗಪಾಣಿ ಮುರಿದಿದ್ದಾರೆ. ಇವರ ಪಾಪ್​ಅಪ್​ ಶುಭಾಶಯ ಪತ್ರ 8.2 ಚದರ ಮೀಟರ್​ ಇದೆ.

17 ವರ್ಷಗಳ ಹಿಂದೆ ಚೆನ್ನೈನಿಂದ ದುಬೈಗೆ ಹೋಗಿ ನೆಲೆಸಿರುವ ಸಾರಂಗಪಾಣಿಗೆ ದಾಖಲೆಗಳು ಹೊಸದಲ್ಲ. ಭಾರತ ಮತ್ತು ದುಬೈನಲ್ಲಿ ಸೇರಿ ಇದು ಅವರ 19ನೇ ವಿಶ್ವದಾಖಲೆಯಾಗಿದೆ.

‘ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ’- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ

ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್
ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್
RCB ದಾಂಡಿಗನ ​ಸಿಡಿಲಬ್ಬರಕ್ಕೆ ಎದುರಾಳಿ ಪಡೆ ತತ್ತರ..!
RCB ದಾಂಡಿಗನ ​ಸಿಡಿಲಬ್ಬರಕ್ಕೆ ಎದುರಾಳಿ ಪಡೆ ತತ್ತರ..!