AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನಲ್ಲೇ ಅತ್ಯಂತ ದೊಡ್ಡ ಪಾಪ್​-ಅಪ್​ ಗ್ರೀಟಿಂಗ್ ಕಾರ್ಡ್​ ತಯಾರಿಸಿದ ಭಾರತೀಯ ಮೂಲದ ದುಬೈ ನಿವಾಸಿ; ಗಿನ್ನೆಸ್ ದಾಖಲೆ

17ವರ್ಷಗಳ ಹಿಂದೆ ಚೆನ್ನೈನಿಂದ ದುಬೈಗೆ ಹೋಗಿ ನೆಲೆಸಿರುವ ಸಾರಂಗಪಾಣಿಗೆ ದಾಖಲೆಗಳು ಹೊಸದಲ್ಲ. ಭಾರತ ಮತ್ತು ದುಬೈನಲ್ಲಿ ಸೇರಿ ಇದು ಅವರ 19ನೇ ವಿಶ್ವದಾಖಲೆಯಾಗಿದೆ.

ಜಗತ್ತಿನಲ್ಲೇ ಅತ್ಯಂತ ದೊಡ್ಡ ಪಾಪ್​-ಅಪ್​ ಗ್ರೀಟಿಂಗ್ ಕಾರ್ಡ್​ ತಯಾರಿಸಿದ ಭಾರತೀಯ ಮೂಲದ ದುಬೈ ನಿವಾಸಿ; ಗಿನ್ನೆಸ್ ದಾಖಲೆ
ರಾಮಕುಮಾರ್ ಸಾರಂಗಪಾಣಿ ಮತ್ತು ಅವರು ತಯಾರಿಸಿದ ಗ್ರೀಟಿಂಗ್ ಕಾರ್ಡ್​
Lakshmi Hegde
| Edited By: |

Updated on: Jan 03, 2021 | 3:48 PM

Share

ದುಬೈ: ಭಾರತೀಯ ಮೂಲದ ರಾಮ್​ಕುಮಾರ್ ಸಾರಂಗಪಾಣಿ ಅವರು ವಿಶ್ವದ ಅತ್ಯಂತ ದೊಡ್ಡ ಪಾಪ್​-ಅಪ್​ ಗ್ರೀಟಿಂಗ್ ಕಾರ್ಡ್​ (3ಡಿ ಆಯಾಮ) ತಯಾರಿಸುವ ಮೂಲಕ ಗಿನ್ನೆಸ್​ ದಾಖಲೆ ನಿರ್ಮಿಸಿದ್ದಾರೆ.

ಈ ಶುಭಾಶಯ ಪತ್ರ 8.2 ಚದರ ಮೀಟರ್​ ವಿಸ್ತಾರವಾಗಿದೆ. ಯುಎಇ ಪ್ರಧಾನಿ, ಉಪಾಧ್ಯಕ್ಷ ಹಾಗೂ ದುಬೈನ ರಾಜನಾಗಿರುವ ಶೇಖ್​ ಮೊಹಮ್ಮದ್​ ಬಿನ್​ ರಶೀದ್​ ಮಕ್ತುಮ್​ ಅವರ 15ನೇ ಪದಗ್ರಹಣ ದಿನದ ನಿಮಿತ್ತ ರಾಮ್​ಕುಮಾರ್​ ಗ್ರೀಟಿಂಗ್​ ಕಾರ್ಡ್​ ತಯಾರಿಸಿದ್ದು, ವಿಶ್ವದಲ್ಲೇ ಅತ್ಯಂತ ದೊಡ್ಡ ಪಾಪ್ ಅಪ್ ಶುಭಾಶಯ ಪತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಕಾರ್ಡ್ ಒಂದು ಸಹಜ ಅಳತೆಯ ಶುಭಾಶಯ ಪತ್ರಕ್ಕಿಂತ 100 ಪಟ್ಟು ದೊಡ್ಡ ಗ್ರೀಟಿಂಗ್​ ಕಾರ್ಡ್ ಆಗಿದೆ. ದುಬೈ ಮೂಲದ ಕಲಾವಿದ ಅಕ್ಬರ್​ ಸಾಹೇಬ್​ ರಚಿಸಿರುವ ಶೇಖ್​ ಮೊಹಮದ್​ ಅವರ ಪೇಂಟಿಂಗ್​ ಈ ಕಾರ್ಡ್​ನಲ್ಲಿದೆ ಎಂದು ಗಲ್ಫ್​ ನ್ಯೂಸ್ ವರದಿ ಮಾಡಿದೆ.

ಇಷ್ಟು ದೊಡ್ಡ, ವಿಶೇಷ ಗ್ರೀಟಿಂಗ್ ಕಾರ್ಡ್ ತಯಾರಿಸಲು 6 ತಿಂಗಳು ಬೇಕಾಯಿತು. ದೋಹಾದಲ್ಲಿ ಜನವರಿ 4ರಿಂದ 18ರವರೆಗೆ ಇದರ ಪ್ರದರ್ಶನ ನಡೆಯಲಿದೆ ಎಂದು ಸಾರಂಗಪಾಣಿ ತಿಳಿಸಿದ್ದಾರೆ. ಈ ಮೊದಲು ಹಾಂಗ್​ಕಾಂಗ್​ ಮೂಲದ ವ್ಯಕ್ತಿಯೋರ್ವರು 6.729 ಚದರ ಮೀಟರ್ ವಿಸ್ತೀರ್ಣದ ಗ್ರೀಟಿಂಗ್ ಕಾರ್ಡ್​ ತಯಾರಿಸಿ ಗಿನ್ನೆಸ್ ದಾಖಲೆ ನಿರ್ಮಿಸಿದ್ದರು. ಅದನ್ನೀಗ ಸಾರಂಗಪಾಣಿ ಮುರಿದಿದ್ದಾರೆ. ಇವರ ಪಾಪ್​ಅಪ್​ ಶುಭಾಶಯ ಪತ್ರ 8.2 ಚದರ ಮೀಟರ್​ ಇದೆ.

17 ವರ್ಷಗಳ ಹಿಂದೆ ಚೆನ್ನೈನಿಂದ ದುಬೈಗೆ ಹೋಗಿ ನೆಲೆಸಿರುವ ಸಾರಂಗಪಾಣಿಗೆ ದಾಖಲೆಗಳು ಹೊಸದಲ್ಲ. ಭಾರತ ಮತ್ತು ದುಬೈನಲ್ಲಿ ಸೇರಿ ಇದು ಅವರ 19ನೇ ವಿಶ್ವದಾಖಲೆಯಾಗಿದೆ.

‘ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ’- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ