AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗತ್ತಿನಲ್ಲೇ ಅತ್ಯಂತ ದೊಡ್ಡ ಪಾಪ್​-ಅಪ್​ ಗ್ರೀಟಿಂಗ್ ಕಾರ್ಡ್​ ತಯಾರಿಸಿದ ಭಾರತೀಯ ಮೂಲದ ದುಬೈ ನಿವಾಸಿ; ಗಿನ್ನೆಸ್ ದಾಖಲೆ

17ವರ್ಷಗಳ ಹಿಂದೆ ಚೆನ್ನೈನಿಂದ ದುಬೈಗೆ ಹೋಗಿ ನೆಲೆಸಿರುವ ಸಾರಂಗಪಾಣಿಗೆ ದಾಖಲೆಗಳು ಹೊಸದಲ್ಲ. ಭಾರತ ಮತ್ತು ದುಬೈನಲ್ಲಿ ಸೇರಿ ಇದು ಅವರ 19ನೇ ವಿಶ್ವದಾಖಲೆಯಾಗಿದೆ.

ಜಗತ್ತಿನಲ್ಲೇ ಅತ್ಯಂತ ದೊಡ್ಡ ಪಾಪ್​-ಅಪ್​ ಗ್ರೀಟಿಂಗ್ ಕಾರ್ಡ್​ ತಯಾರಿಸಿದ ಭಾರತೀಯ ಮೂಲದ ದುಬೈ ನಿವಾಸಿ; ಗಿನ್ನೆಸ್ ದಾಖಲೆ
ರಾಮಕುಮಾರ್ ಸಾರಂಗಪಾಣಿ ಮತ್ತು ಅವರು ತಯಾರಿಸಿದ ಗ್ರೀಟಿಂಗ್ ಕಾರ್ಡ್​
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 03, 2021 | 3:48 PM

Share

ದುಬೈ: ಭಾರತೀಯ ಮೂಲದ ರಾಮ್​ಕುಮಾರ್ ಸಾರಂಗಪಾಣಿ ಅವರು ವಿಶ್ವದ ಅತ್ಯಂತ ದೊಡ್ಡ ಪಾಪ್​-ಅಪ್​ ಗ್ರೀಟಿಂಗ್ ಕಾರ್ಡ್​ (3ಡಿ ಆಯಾಮ) ತಯಾರಿಸುವ ಮೂಲಕ ಗಿನ್ನೆಸ್​ ದಾಖಲೆ ನಿರ್ಮಿಸಿದ್ದಾರೆ.

ಈ ಶುಭಾಶಯ ಪತ್ರ 8.2 ಚದರ ಮೀಟರ್​ ವಿಸ್ತಾರವಾಗಿದೆ. ಯುಎಇ ಪ್ರಧಾನಿ, ಉಪಾಧ್ಯಕ್ಷ ಹಾಗೂ ದುಬೈನ ರಾಜನಾಗಿರುವ ಶೇಖ್​ ಮೊಹಮ್ಮದ್​ ಬಿನ್​ ರಶೀದ್​ ಮಕ್ತುಮ್​ ಅವರ 15ನೇ ಪದಗ್ರಹಣ ದಿನದ ನಿಮಿತ್ತ ರಾಮ್​ಕುಮಾರ್​ ಗ್ರೀಟಿಂಗ್​ ಕಾರ್ಡ್​ ತಯಾರಿಸಿದ್ದು, ವಿಶ್ವದಲ್ಲೇ ಅತ್ಯಂತ ದೊಡ್ಡ ಪಾಪ್ ಅಪ್ ಶುಭಾಶಯ ಪತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಕಾರ್ಡ್ ಒಂದು ಸಹಜ ಅಳತೆಯ ಶುಭಾಶಯ ಪತ್ರಕ್ಕಿಂತ 100 ಪಟ್ಟು ದೊಡ್ಡ ಗ್ರೀಟಿಂಗ್​ ಕಾರ್ಡ್ ಆಗಿದೆ. ದುಬೈ ಮೂಲದ ಕಲಾವಿದ ಅಕ್ಬರ್​ ಸಾಹೇಬ್​ ರಚಿಸಿರುವ ಶೇಖ್​ ಮೊಹಮದ್​ ಅವರ ಪೇಂಟಿಂಗ್​ ಈ ಕಾರ್ಡ್​ನಲ್ಲಿದೆ ಎಂದು ಗಲ್ಫ್​ ನ್ಯೂಸ್ ವರದಿ ಮಾಡಿದೆ.

ಇಷ್ಟು ದೊಡ್ಡ, ವಿಶೇಷ ಗ್ರೀಟಿಂಗ್ ಕಾರ್ಡ್ ತಯಾರಿಸಲು 6 ತಿಂಗಳು ಬೇಕಾಯಿತು. ದೋಹಾದಲ್ಲಿ ಜನವರಿ 4ರಿಂದ 18ರವರೆಗೆ ಇದರ ಪ್ರದರ್ಶನ ನಡೆಯಲಿದೆ ಎಂದು ಸಾರಂಗಪಾಣಿ ತಿಳಿಸಿದ್ದಾರೆ. ಈ ಮೊದಲು ಹಾಂಗ್​ಕಾಂಗ್​ ಮೂಲದ ವ್ಯಕ್ತಿಯೋರ್ವರು 6.729 ಚದರ ಮೀಟರ್ ವಿಸ್ತೀರ್ಣದ ಗ್ರೀಟಿಂಗ್ ಕಾರ್ಡ್​ ತಯಾರಿಸಿ ಗಿನ್ನೆಸ್ ದಾಖಲೆ ನಿರ್ಮಿಸಿದ್ದರು. ಅದನ್ನೀಗ ಸಾರಂಗಪಾಣಿ ಮುರಿದಿದ್ದಾರೆ. ಇವರ ಪಾಪ್​ಅಪ್​ ಶುಭಾಶಯ ಪತ್ರ 8.2 ಚದರ ಮೀಟರ್​ ಇದೆ.

17 ವರ್ಷಗಳ ಹಿಂದೆ ಚೆನ್ನೈನಿಂದ ದುಬೈಗೆ ಹೋಗಿ ನೆಲೆಸಿರುವ ಸಾರಂಗಪಾಣಿಗೆ ದಾಖಲೆಗಳು ಹೊಸದಲ್ಲ. ಭಾರತ ಮತ್ತು ದುಬೈನಲ್ಲಿ ಸೇರಿ ಇದು ಅವರ 19ನೇ ವಿಶ್ವದಾಖಲೆಯಾಗಿದೆ.

‘ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ’- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?