AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಅಧಿಕಾರಿ ಸೋಗಿನಲ್ಲಿ ರಾತ್ರಿ ಶಾಸಕರೊಬ್ಬರ ಮನೆಗೆ ಬಂದು ಆಸ್ತಿ ಬಗ್ಗೆ ತನಿಖೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಓರ್ವ ವ್ಯಕ್ತಿ ತಾನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಎಂದು ಹೇಳಿಕೊಂಡು ಶಾಸಕರೊಬ್ಬರ ಮನೆಗೆ ನುಗ್ಗಿದ ಘಟನೆ ಪುದುಚೇರಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಈ ವ್ಯಕ್ತಿ, ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯಂತೆ ನಟಿಸಿದ್ದು, ಶಾಸಕರನ್ನು ಭೇಟಿ ಮಾಡಿದ್ದು ಮಾತ್ರವಲ್ಲದೆ ಅವರ ಆಸ್ತಿ ಮತ್ತು ಆದಾಯದ ವಿವರಗಳನ್ನು ಕೇಳಿದ್ದಾರೆ. ಭಾನುವಾರ ತಡರಾತ್ರಿ ಪೊಲೀಸರು ಈ ನಕಲಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಆದರೆ, ಈ ವ್ಯಕ್ತಿಯ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ.

ಇಡಿ ಅಧಿಕಾರಿ ಸೋಗಿನಲ್ಲಿ ರಾತ್ರಿ ಶಾಸಕರೊಬ್ಬರ ಮನೆಗೆ ಬಂದು ಆಸ್ತಿ ಬಗ್ಗೆ ತನಿಖೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ
ಬಂಧನ
ನಯನಾ ರಾಜೀವ್
|

Updated on: Oct 23, 2023 | 11:56 AM

Share

ಓರ್ವ ವ್ಯಕ್ತಿ ತಾನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಎಂದು ಹೇಳಿಕೊಂಡು ಶಾಸಕರೊಬ್ಬರ ಮನೆಗೆ ನುಗ್ಗಿದ ಘಟನೆ ಪುದುಚೇರಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಈ ವ್ಯಕ್ತಿ, ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯಂತೆ ನಟಿಸಿದ್ದು, ಶಾಸಕರನ್ನು ಭೇಟಿ ಮಾಡಿದ್ದು ಮಾತ್ರವಲ್ಲದೆ ಅವರ ಆಸ್ತಿ ಮತ್ತು ಆದಾಯದ ವಿವರಗಳನ್ನು ಕೇಳಿದ್ದಾರೆ. ಭಾನುವಾರ ತಡರಾತ್ರಿ ಪೊಲೀಸರು ಈ ನಕಲಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಆದರೆ, ಈ ವ್ಯಕ್ತಿಯ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ.

ಶಾಸಕರ ಮನೆ ತಲುಪಿದ ನಕಲಿ ಇಡಿ ಅಧಿಕಾರಿ ಓಲ್ಗರೆಟ್ ವಿಧಾನಸಭಾ ಕ್ಷೇತ್ರದ ಸ್ವತಂತ್ರ ಶಾಸಕ ಶಿವಶಂಕರ್ ಪ್ರಕಾರ, ಕಳೆದ ಭಾನುವಾರ ರಾತ್ರಿ ವ್ಯಕ್ತಿಯೊಬ್ಬ ಸ್ಕೂಟರ್​ನಲ್ಲಿ ಅವರ ಮನೆಗೆ ಬಂದಿದ್ದಾನೆ. ವ್ಯಕ್ತಿ ತನ್ನನ್ನು ತಾನು ಚೆನ್ನೈನ ಕಚೇರಿಯ ಇಡಿ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಈ ವೇಳೆ ವ್ಯಕ್ತಿಯೊಬ್ಬರು ಶಾಸಕರ ಬಳಿ ಕಳೆದ ಕೆಲವು ವರ್ಷಗಳಲ್ಲಿ ಗಳಿಸಿದ ಆಸ್ತಿ ವಿವರ ಕೇಳಿದ್ದಾರೆ. ಆರೋಪಿಯು ಮನೆಗೆ ಬಂದಿದ್ದ ಸ್ಕೂಟರ್ ಅನ್ನು ಸಹ ಬಾಡಿಗೆಗೆ ತೆಗೆದುಕೊಳ್ಳಲಾಗಿತ್ತು ಎಂದು ಶಾಸಕರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಡಾ.ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ಸಿಇಒಗೆ ಬೆದರಿಕೆ ಹಾಕಿದ ನಕಲಿ ಪಿಎಂಒ ಅಧಿಕಾರಿ

ಆರೋಪಿಯ ಬಳಿ ಗುರುತಿನ ಚೀಟಿ ಇರಲಿಲ್ಲ ಇದೇ ವೇಳೆ ವ್ಯಕ್ತಿಯ ಮುಖಭಾವ ನೋಡಿ ಶಾಸಕ ಶಿವಶಂಕರ್‌ಗೆ ಅನುಮಾನ ಬಂದಿದ್ದು, ಬಳಿಕ ಶಾಸಕರು ವ್ಯಕ್ತಿ ಬಳಿ ಗುರುತಿನ ಚೀಟಿ ಕೇಳಿದ್ದಾರೆ. ಈ ಕುರಿತು ಆರೋಪಿಯು ಪ್ರಸ್ತುತ ತನ್ನ ಬಳಿ ಗುರುತಿನ ಚೀಟಿ ಇಲ್ಲ ಎಂದು ಹೇಳಿದ್ದ, ಕಚೇರಿಯ ದೂರವಾಣಿ ಸಂಖ್ಯೆ ಕೇಳಿದರೂ ಕೊಡಲು ನಿರಾಕರಿಸಿದ್ದ. ಆಗ ಶಾಸಕರ ಅನುಮಾನ ನಂಬಿಕೆಯಾಗಿ ಬದಲಾಗಿದ್ದು, ತಡಮಾಡದೆ ರೆಡ್ಡಿಪಾಳ್ಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಆರೋಪಿಗಳು 7 ಶಾಸಕರನ್ನು ಸಂಪರ್ಕಿಸಿದ್ದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಶಾಸಕರ ಮನೆಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ತನ್ನನ್ನು ಮಾತ್ರವಲ್ಲದೆ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರನ್ನು ಒಳಗೊಂಡ ಪುದುಚೇರಿಯ ಏಳು ಶಾಸಕರನ್ನೂ ಸಂಪರ್ಕಿಸಿದ್ದಾನೆ ಎಂದು ಶಾಸಕ ಶಿವಶಂಕರ್ ಹೇಳಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More