AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಅಧಿಕಾರಿ ಸೋಗಿನಲ್ಲಿ ರಾತ್ರಿ ಶಾಸಕರೊಬ್ಬರ ಮನೆಗೆ ಬಂದು ಆಸ್ತಿ ಬಗ್ಗೆ ತನಿಖೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಓರ್ವ ವ್ಯಕ್ತಿ ತಾನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಎಂದು ಹೇಳಿಕೊಂಡು ಶಾಸಕರೊಬ್ಬರ ಮನೆಗೆ ನುಗ್ಗಿದ ಘಟನೆ ಪುದುಚೇರಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಈ ವ್ಯಕ್ತಿ, ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯಂತೆ ನಟಿಸಿದ್ದು, ಶಾಸಕರನ್ನು ಭೇಟಿ ಮಾಡಿದ್ದು ಮಾತ್ರವಲ್ಲದೆ ಅವರ ಆಸ್ತಿ ಮತ್ತು ಆದಾಯದ ವಿವರಗಳನ್ನು ಕೇಳಿದ್ದಾರೆ. ಭಾನುವಾರ ತಡರಾತ್ರಿ ಪೊಲೀಸರು ಈ ನಕಲಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಆದರೆ, ಈ ವ್ಯಕ್ತಿಯ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ.

ಇಡಿ ಅಧಿಕಾರಿ ಸೋಗಿನಲ್ಲಿ ರಾತ್ರಿ ಶಾಸಕರೊಬ್ಬರ ಮನೆಗೆ ಬಂದು ಆಸ್ತಿ ಬಗ್ಗೆ ತನಿಖೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ
ಬಂಧನ
ನಯನಾ ರಾಜೀವ್
|

Updated on: Oct 23, 2023 | 11:56 AM

Share

ಓರ್ವ ವ್ಯಕ್ತಿ ತಾನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಎಂದು ಹೇಳಿಕೊಂಡು ಶಾಸಕರೊಬ್ಬರ ಮನೆಗೆ ನುಗ್ಗಿದ ಘಟನೆ ಪುದುಚೇರಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಈ ವ್ಯಕ್ತಿ, ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯಂತೆ ನಟಿಸಿದ್ದು, ಶಾಸಕರನ್ನು ಭೇಟಿ ಮಾಡಿದ್ದು ಮಾತ್ರವಲ್ಲದೆ ಅವರ ಆಸ್ತಿ ಮತ್ತು ಆದಾಯದ ವಿವರಗಳನ್ನು ಕೇಳಿದ್ದಾರೆ. ಭಾನುವಾರ ತಡರಾತ್ರಿ ಪೊಲೀಸರು ಈ ನಕಲಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಆದರೆ, ಈ ವ್ಯಕ್ತಿಯ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ.

ಶಾಸಕರ ಮನೆ ತಲುಪಿದ ನಕಲಿ ಇಡಿ ಅಧಿಕಾರಿ ಓಲ್ಗರೆಟ್ ವಿಧಾನಸಭಾ ಕ್ಷೇತ್ರದ ಸ್ವತಂತ್ರ ಶಾಸಕ ಶಿವಶಂಕರ್ ಪ್ರಕಾರ, ಕಳೆದ ಭಾನುವಾರ ರಾತ್ರಿ ವ್ಯಕ್ತಿಯೊಬ್ಬ ಸ್ಕೂಟರ್​ನಲ್ಲಿ ಅವರ ಮನೆಗೆ ಬಂದಿದ್ದಾನೆ. ವ್ಯಕ್ತಿ ತನ್ನನ್ನು ತಾನು ಚೆನ್ನೈನ ಕಚೇರಿಯ ಇಡಿ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಈ ವೇಳೆ ವ್ಯಕ್ತಿಯೊಬ್ಬರು ಶಾಸಕರ ಬಳಿ ಕಳೆದ ಕೆಲವು ವರ್ಷಗಳಲ್ಲಿ ಗಳಿಸಿದ ಆಸ್ತಿ ವಿವರ ಕೇಳಿದ್ದಾರೆ. ಆರೋಪಿಯು ಮನೆಗೆ ಬಂದಿದ್ದ ಸ್ಕೂಟರ್ ಅನ್ನು ಸಹ ಬಾಡಿಗೆಗೆ ತೆಗೆದುಕೊಳ್ಳಲಾಗಿತ್ತು ಎಂದು ಶಾಸಕರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಡಾ.ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ಸಿಇಒಗೆ ಬೆದರಿಕೆ ಹಾಕಿದ ನಕಲಿ ಪಿಎಂಒ ಅಧಿಕಾರಿ

ಆರೋಪಿಯ ಬಳಿ ಗುರುತಿನ ಚೀಟಿ ಇರಲಿಲ್ಲ ಇದೇ ವೇಳೆ ವ್ಯಕ್ತಿಯ ಮುಖಭಾವ ನೋಡಿ ಶಾಸಕ ಶಿವಶಂಕರ್‌ಗೆ ಅನುಮಾನ ಬಂದಿದ್ದು, ಬಳಿಕ ಶಾಸಕರು ವ್ಯಕ್ತಿ ಬಳಿ ಗುರುತಿನ ಚೀಟಿ ಕೇಳಿದ್ದಾರೆ. ಈ ಕುರಿತು ಆರೋಪಿಯು ಪ್ರಸ್ತುತ ತನ್ನ ಬಳಿ ಗುರುತಿನ ಚೀಟಿ ಇಲ್ಲ ಎಂದು ಹೇಳಿದ್ದ, ಕಚೇರಿಯ ದೂರವಾಣಿ ಸಂಖ್ಯೆ ಕೇಳಿದರೂ ಕೊಡಲು ನಿರಾಕರಿಸಿದ್ದ. ಆಗ ಶಾಸಕರ ಅನುಮಾನ ನಂಬಿಕೆಯಾಗಿ ಬದಲಾಗಿದ್ದು, ತಡಮಾಡದೆ ರೆಡ್ಡಿಪಾಳ್ಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಆರೋಪಿಗಳು 7 ಶಾಸಕರನ್ನು ಸಂಪರ್ಕಿಸಿದ್ದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಶಾಸಕರ ಮನೆಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ತನ್ನನ್ನು ಮಾತ್ರವಲ್ಲದೆ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರನ್ನು ಒಳಗೊಂಡ ಪುದುಚೇರಿಯ ಏಳು ಶಾಸಕರನ್ನೂ ಸಂಪರ್ಕಿಸಿದ್ದಾನೆ ಎಂದು ಶಾಸಕ ಶಿವಶಂಕರ್ ಹೇಳಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ