AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಅಧಿಕಾರಿ ಸೋಗಿನಲ್ಲಿ ರಾತ್ರಿ ಶಾಸಕರೊಬ್ಬರ ಮನೆಗೆ ಬಂದು ಆಸ್ತಿ ಬಗ್ಗೆ ತನಿಖೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಓರ್ವ ವ್ಯಕ್ತಿ ತಾನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಎಂದು ಹೇಳಿಕೊಂಡು ಶಾಸಕರೊಬ್ಬರ ಮನೆಗೆ ನುಗ್ಗಿದ ಘಟನೆ ಪುದುಚೇರಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಈ ವ್ಯಕ್ತಿ, ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯಂತೆ ನಟಿಸಿದ್ದು, ಶಾಸಕರನ್ನು ಭೇಟಿ ಮಾಡಿದ್ದು ಮಾತ್ರವಲ್ಲದೆ ಅವರ ಆಸ್ತಿ ಮತ್ತು ಆದಾಯದ ವಿವರಗಳನ್ನು ಕೇಳಿದ್ದಾರೆ. ಭಾನುವಾರ ತಡರಾತ್ರಿ ಪೊಲೀಸರು ಈ ನಕಲಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಆದರೆ, ಈ ವ್ಯಕ್ತಿಯ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ.

ಇಡಿ ಅಧಿಕಾರಿ ಸೋಗಿನಲ್ಲಿ ರಾತ್ರಿ ಶಾಸಕರೊಬ್ಬರ ಮನೆಗೆ ಬಂದು ಆಸ್ತಿ ಬಗ್ಗೆ ತನಿಖೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ
ಬಂಧನ
ನಯನಾ ರಾಜೀವ್
|

Updated on: Oct 23, 2023 | 11:56 AM

Share

ಓರ್ವ ವ್ಯಕ್ತಿ ತಾನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಎಂದು ಹೇಳಿಕೊಂಡು ಶಾಸಕರೊಬ್ಬರ ಮನೆಗೆ ನುಗ್ಗಿದ ಘಟನೆ ಪುದುಚೇರಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಈ ವ್ಯಕ್ತಿ, ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯಂತೆ ನಟಿಸಿದ್ದು, ಶಾಸಕರನ್ನು ಭೇಟಿ ಮಾಡಿದ್ದು ಮಾತ್ರವಲ್ಲದೆ ಅವರ ಆಸ್ತಿ ಮತ್ತು ಆದಾಯದ ವಿವರಗಳನ್ನು ಕೇಳಿದ್ದಾರೆ. ಭಾನುವಾರ ತಡರಾತ್ರಿ ಪೊಲೀಸರು ಈ ನಕಲಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಆದರೆ, ಈ ವ್ಯಕ್ತಿಯ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ.

ಶಾಸಕರ ಮನೆ ತಲುಪಿದ ನಕಲಿ ಇಡಿ ಅಧಿಕಾರಿ ಓಲ್ಗರೆಟ್ ವಿಧಾನಸಭಾ ಕ್ಷೇತ್ರದ ಸ್ವತಂತ್ರ ಶಾಸಕ ಶಿವಶಂಕರ್ ಪ್ರಕಾರ, ಕಳೆದ ಭಾನುವಾರ ರಾತ್ರಿ ವ್ಯಕ್ತಿಯೊಬ್ಬ ಸ್ಕೂಟರ್​ನಲ್ಲಿ ಅವರ ಮನೆಗೆ ಬಂದಿದ್ದಾನೆ. ವ್ಯಕ್ತಿ ತನ್ನನ್ನು ತಾನು ಚೆನ್ನೈನ ಕಚೇರಿಯ ಇಡಿ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಈ ವೇಳೆ ವ್ಯಕ್ತಿಯೊಬ್ಬರು ಶಾಸಕರ ಬಳಿ ಕಳೆದ ಕೆಲವು ವರ್ಷಗಳಲ್ಲಿ ಗಳಿಸಿದ ಆಸ್ತಿ ವಿವರ ಕೇಳಿದ್ದಾರೆ. ಆರೋಪಿಯು ಮನೆಗೆ ಬಂದಿದ್ದ ಸ್ಕೂಟರ್ ಅನ್ನು ಸಹ ಬಾಡಿಗೆಗೆ ತೆಗೆದುಕೊಳ್ಳಲಾಗಿತ್ತು ಎಂದು ಶಾಸಕರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಡಾ.ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ಸಿಇಒಗೆ ಬೆದರಿಕೆ ಹಾಕಿದ ನಕಲಿ ಪಿಎಂಒ ಅಧಿಕಾರಿ

ಆರೋಪಿಯ ಬಳಿ ಗುರುತಿನ ಚೀಟಿ ಇರಲಿಲ್ಲ ಇದೇ ವೇಳೆ ವ್ಯಕ್ತಿಯ ಮುಖಭಾವ ನೋಡಿ ಶಾಸಕ ಶಿವಶಂಕರ್‌ಗೆ ಅನುಮಾನ ಬಂದಿದ್ದು, ಬಳಿಕ ಶಾಸಕರು ವ್ಯಕ್ತಿ ಬಳಿ ಗುರುತಿನ ಚೀಟಿ ಕೇಳಿದ್ದಾರೆ. ಈ ಕುರಿತು ಆರೋಪಿಯು ಪ್ರಸ್ತುತ ತನ್ನ ಬಳಿ ಗುರುತಿನ ಚೀಟಿ ಇಲ್ಲ ಎಂದು ಹೇಳಿದ್ದ, ಕಚೇರಿಯ ದೂರವಾಣಿ ಸಂಖ್ಯೆ ಕೇಳಿದರೂ ಕೊಡಲು ನಿರಾಕರಿಸಿದ್ದ. ಆಗ ಶಾಸಕರ ಅನುಮಾನ ನಂಬಿಕೆಯಾಗಿ ಬದಲಾಗಿದ್ದು, ತಡಮಾಡದೆ ರೆಡ್ಡಿಪಾಳ್ಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಆರೋಪಿಗಳು 7 ಶಾಸಕರನ್ನು ಸಂಪರ್ಕಿಸಿದ್ದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಶಾಸಕರ ಮನೆಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ತನ್ನನ್ನು ಮಾತ್ರವಲ್ಲದೆ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರನ್ನು ಒಳಗೊಂಡ ಪುದುಚೇರಿಯ ಏಳು ಶಾಸಕರನ್ನೂ ಸಂಪರ್ಕಿಸಿದ್ದಾನೆ ಎಂದು ಶಾಸಕ ಶಿವಶಂಕರ್ ಹೇಳಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?