AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಗರ್ಲ್​​ಫ್ರೆಂಡ್ ಮದುವೆ ನಿಲ್ಲಿಸಲು, ಮುಖ್ಯಮಂತ್ರಿಗೇ ಐಡಿಯಾ ಕೊಟ್ಟ..; ವೈರಲ್​ ಆಯ್ತು ಟ್ವೀಟ್​

ಮೇ 13ರಂದು ಮುಖ್ಯಮಂತ್ರಿ ನಿತೀಶ್​ ಕುಮಾರ್ ಅವರು ಒಂದು ಟ್ವೀಟ್ ಮಾಡಿದ್ದರು. ಲಾಕ್​ಡೌನ್ ಮಾಡಿದ್ದರಿಂದ ಬಿಹಾರದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಹಾಗಾಗಿ ಮೇ 25ರವರೆಗೂ ಲಾಕ್​ಡೌನ್ ಮುಂದುವರಿಸಲಾಗುವುದು ಎಂದು ಹೇಳಿದ್ದರು.

ತನ್ನ ಗರ್ಲ್​​ಫ್ರೆಂಡ್ ಮದುವೆ ನಿಲ್ಲಿಸಲು, ಮುಖ್ಯಮಂತ್ರಿಗೇ ಐಡಿಯಾ ಕೊಟ್ಟ..; ವೈರಲ್​ ಆಯ್ತು ಟ್ವೀಟ್​
ಬಿಹಾರದ ಮುಖ್ಯಮಂತ್ರಿ ಮತ್ತು ವೈರಲ್ ಆದ ಟ್ವೀಟ್​
Lakshmi Hegde
|

Updated on: May 23, 2021 | 11:40 PM

Share

ಕೊವಿಡ್​ 19 ಸೋಂಕಿನ ಪ್ರಸರಣ ಹೆಚ್ಚುತ್ತಿರುವುದರಿಂದ ರಾಜ್ಯದಲ್ಲಿ ಸದ್ಯ ಮದುವೆಗಳನ್ನು ನಿಷೇಧಿಸಿ ಎಂದು ಬಿಹಾರದಲ್ಲಿ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಟ್ವಿಟರ್​ನಲ್ಲಿ ಮನವಿ ಮಾಡಿದ್ದಾನೆ. ಆತನ ಮನವಿಯನ್ನು ಓದಿ ಟ್ವಿಟ್ಟಿಗರು ಸಿಕ್ಕಾಪಟೆ ನಕ್ಕಿದ್ದಾರೆ. ಹಾಗೇ, ಅವನ ಟ್ವೀಟ್ ಸಖತ್​ ವೈರಲ್ ಕೂಡ ಆಗಿದೆ. ಈ ವ್ಯಕ್ತಿಯ ಹೆಸರು ಪಂಕಜ್​ ಕುಮಾರ್ ಗುಪ್ತಾ. ತನ್ನ ಪ್ರೇಯಸಿಯ ಮದುವೆಯನ್ನು ನಿಲ್ಲಿಸುವ ಉದ್ದೇಶದಿಂದ ಈತ ಹೀಗೆ ಮನವಿ ಮಾಡಿದ್ದಾನೆ. ಅದನ್ನು ನೋಡಿದ ನೆಟ್ಟಿಗರು ಸಿಕ್ಕಾಪಟೆ ನಕ್ಕಿದ್ದಾರೆ.

ಮೇ 13ರಂದು ಮುಖ್ಯಮಂತ್ರಿ ನಿತೀಶ್​ ಕುಮಾರ್ ಅವರು ಒಂದು ಟ್ವೀಟ್ ಮಾಡಿದ್ದರು. ಲಾಕ್​ಡೌನ್ ಮಾಡಿದ್ದರಿಂದ ಬಿಹಾರದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಹಾಗಾಗಿ ಮೇ 25ರವರೆಗೂ ಲಾಕ್​ಡೌನ್ ಮುಂದುವರಿಸಲಾಗುವುದು ಎಂದು ಹೇಳಿದ್ದರು. ಅದಕ್ಕೆ ಈ ಪಂಕಜ್​ ಕುಮಾರ್ ಗುಪ್ತಾ ರಿಪ್ಲೈ ಮಾಡಿ, ಸರ್​ ನೀವು ಲಾಕ್​ಡೌನ್ ಮಾಡುವ ಜತೆಗೆ ಈ ಸಂದರ್ಭದಲ್ಲಿ ಮದುವೆ ಮಾಡಬಾರದು ಎಂಬ ಆದೇಶ ಹೊರಡಿಸಿದರೆ ಇನ್ನೂ ಒಳ್ಳೆಯದು. ಯಾಕೆಂದರೆ ನನ್ನ ಪ್ರಿಯತಮೆಯ ಮದುವೆ ಮೇ 19ಕ್ಕೆ ನಡೆಯಲಿದೆ. ಹಾಗೊಮ್ಮೆ ವಿವಾಹ ನಡೆಸದಂತೆ ಆದೇಶಿಸಿದರೆ ಅದೂ ಕೂಡ ಮುಂದೆ ಹೋಗುತ್ತದೆ. ಅಷ್ಟರ ಮಟ್ಟಿಗೆ ನಾನು ನಿಮಗೆ ಕೃತಜ್ಞನಾಗಿರುತ್ತೇನೆ ಎಂದು ಹೇಳಿದ್ದ.

ಮುಖ್ಯಮಂತ್ರಿ ಟ್ವೀಟ್​ಗೆ ಪಂಕಜ್​ ಕುಮಾರ್ ಮಾಡಿದ್ದ ರಿಪ್ಲೈ ನೋಡಿ ಜನರು ತುಂಬ ಖುಷಿಯಾಗಿದ್ದರು. ಆತನ ರಿಪ್ಲೈಗೆ ಹಲವು ತಮಾಷೆಭರಿತ ಕಾಮೆಂಟ್​ಗಳನ್ನೂ ಮಾಡಿದ್ದಾರೆ.

ಇದನ್ನೂ ಓದಿ: ‘ರೆಮ್​ಡಿಸಿವಿರ್ ಹಂಚಿಕೆಯಲ್ಲಿ ಅಕ್ರಮ ತಡೆಯಲು ಕ್ರಮ; ತಂತ್ರಜ್ಞಾನ ಆಧಾರಿತ ವ್ಯವಸ್ಥೆ’

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ