AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ನೀರಿನ ಹಣ ಕೇಳಿದಕ್ಕೆ ಹೋಟೆಲ್​​​​ ಮಾಲಿಕನ ಮೇಲೆ ಕಾರು ಹತ್ತಿಸಲು ಯತ್ನ, ವಿಡಿಯೋ ವೈರಲ್​

ಸೇತುವೆಯ ಬಳಿ ಸಣ್ಣ ಉಪಾಹಾರ ಗೃಹವನ್ನು ನಡೆಸುತ್ತಿರುವ 34 ವರ್ಷದ ರಾಮ್ ಚಂದ್ ಈ ದೂರುನ್ನು ನೀಡಿದ್ದಾರೆ. ಮಹೀಂದ್ರಾ ನುವೋಸ್ಪೋರ್ಟ್ ಎಸ್‌ಯುವಿಯಲ್ಲಿ ಬಂದ ಇಬ್ಬರು ವ್ಯಕ್ತಿಗಳು ಎರಡು ಲೋಟ ನೀರು ಕೇಳಿದರು. ಅವರಿಗೆ ನೀರು ನೀಡಿ 5 ರೂ. ಕೇಳಿದೆ. ಆದರೆ ಅವರು ಇದಕ್ಕೆ ನಿರಾಕರಿಸಿದರು, ನಂತರ ನನ್ನ ಮತ್ತು ಅವರ ನಡುವೆ ಜಗಳ ಶುರುವಾಗಿದೆ ಎಂದು ಹೇಳಿದ್ದಾರೆ.

ದೆಹಲಿ: ನೀರಿನ ಹಣ ಕೇಳಿದಕ್ಕೆ ಹೋಟೆಲ್​​​​ ಮಾಲಿಕನ ಮೇಲೆ ಕಾರು ಹತ್ತಿಸಲು ಯತ್ನ, ವಿಡಿಯೋ ವೈರಲ್​
ಅಕ್ಷಯ್​ ಪಲ್ಲಮಜಲು​​
|

Updated on: Jan 03, 2024 | 12:42 PM

Share

ದೆಹಲಿ, ಜ.3: ದೆಹಲಿಯಲ್ಲಿ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ದೆಹಲಿಯ ರಸ್ತೆಯಲ್ಲಿ ಎಸ್‌ಯುವಿ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಪುಂಡಾಟಿಕೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಉತ್ತರ ದೆಹಲಿಯ ಸಿಗ್ನೇಚರ್ ಸೇತುವೆ ಬಳಿ ಮಂಗಳವಾರ (ಜ.3) ಈ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ.

ಸೇತುವೆಯ ಬಳಿ ಸಣ್ಣ ಉಪಾಹಾರ ಗೃಹವನ್ನು ನಡೆಸುತ್ತಿರುವ 34 ವರ್ಷದ ರಾಮ್ ಚಂದ್ ಈ ದೂರುನ್ನು ನೀಡಿದ್ದಾರೆ. ಮಹೀಂದ್ರಾ ನುವೋಸ್ಪೋರ್ಟ್ ಎಸ್‌ಯುವಿಯಲ್ಲಿ ಬಂದ ಇಬ್ಬರು ವ್ಯಕ್ತಿಗಳು ಎರಡು ಲೋಟ ನೀರು ಕೇಳಿದರು. ಅವರಿಗೆ ನೀರು ನೀಡಿ 5 ರೂ. ಕೇಳಿದೆ. ಆದರೆ ಅವರು ಇದಕ್ಕೆ ನಿರಾಕರಿಸಿದರು, ನಂತರ ನನ್ನ ಮತ್ತು ಅವರ ನಡುವೆ ಜಗಳ ಶುರುವಾಗಿದೆ ಎಂದು ಹೇಳಿದ್ದಾರೆ.

ಈ ಕಾರಣಕ್ಕೆ ನನಗೆ ಕಾರಿನಲ್ಲಿ ಬಂದ ಆ ಇಬ್ಬರು ಥಳಿಸಿದ್ದಾರೆ ಎಂದು ರಾಮ್ ಚಂದ್ ಹೇಳಿದ್ದಾರೆ. ಇನ್ನು ವೈರಲ್​​ ಆಗಿರುವ ವಿಡಿಯೋದಲ್ಲಿ ಎಸ್‌ಯುವಿ ಕಾರು ಯು-ಟರ್ನ್ ತೆಗೆದುಕೊಂಡು ರಾಂಗ್ ಸೈಡ್‌ನಲ್ಲಿ ಬಂದು ಅಲ್ಲಿರುವ ಜನರಿಗೆ ಡಿಕ್ಕಿ ಹೊಡೆಯಲು ಪ್ರಯತ್ನಿಸಿದ್ದಾರೆ. ಇನ್ನು ಅವರನ್ನು ಹಿಡಿಯಲು ಈ ರಸ್ತೆಯಲ್ಲಿ ನಿಂತ ಕೆಲವೊಂದು ಜನರು ಆ ಕಾರಿನ ಮೇಲೆ ಕಲ್ಲು , ದೋಣೆಗಳಿಂದ ದಾಳಿ ಮಾಡುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: ಯುವತಿ ಮೇಲೆ ಅತ್ಯಾಚಾರವಾಗಿಲ್ಲ, ಮೆದುಳು ನಾಪತ್ತೆ: ಮರಣೋತ್ತರ ಪರೀಕ್ಷೆ ವರದಿಯ ಸ್ಪೋಟಕ ಮಾಹಿತಿ ಬಹಿರಂಗ

ಕಾರಿನ ಮಾಲೀಕರನ್ನು ಮೊಹಮ್ಮದ್ ಹಬೀಬ್ ಎಂದು ಗುರುತಿಸಲಾಗಿದೆ. ವಾಹನದಲ್ಲಿ ಬಂದ ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ