AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ನೀರಿನ ಹಣ ಕೇಳಿದಕ್ಕೆ ಹೋಟೆಲ್​​​​ ಮಾಲಿಕನ ಮೇಲೆ ಕಾರು ಹತ್ತಿಸಲು ಯತ್ನ, ವಿಡಿಯೋ ವೈರಲ್​

ಸೇತುವೆಯ ಬಳಿ ಸಣ್ಣ ಉಪಾಹಾರ ಗೃಹವನ್ನು ನಡೆಸುತ್ತಿರುವ 34 ವರ್ಷದ ರಾಮ್ ಚಂದ್ ಈ ದೂರುನ್ನು ನೀಡಿದ್ದಾರೆ. ಮಹೀಂದ್ರಾ ನುವೋಸ್ಪೋರ್ಟ್ ಎಸ್‌ಯುವಿಯಲ್ಲಿ ಬಂದ ಇಬ್ಬರು ವ್ಯಕ್ತಿಗಳು ಎರಡು ಲೋಟ ನೀರು ಕೇಳಿದರು. ಅವರಿಗೆ ನೀರು ನೀಡಿ 5 ರೂ. ಕೇಳಿದೆ. ಆದರೆ ಅವರು ಇದಕ್ಕೆ ನಿರಾಕರಿಸಿದರು, ನಂತರ ನನ್ನ ಮತ್ತು ಅವರ ನಡುವೆ ಜಗಳ ಶುರುವಾಗಿದೆ ಎಂದು ಹೇಳಿದ್ದಾರೆ.

ದೆಹಲಿ: ನೀರಿನ ಹಣ ಕೇಳಿದಕ್ಕೆ ಹೋಟೆಲ್​​​​ ಮಾಲಿಕನ ಮೇಲೆ ಕಾರು ಹತ್ತಿಸಲು ಯತ್ನ, ವಿಡಿಯೋ ವೈರಲ್​
ಅಕ್ಷಯ್​ ಪಲ್ಲಮಜಲು​​
|

Updated on: Jan 03, 2024 | 12:42 PM

Share

ದೆಹಲಿ, ಜ.3: ದೆಹಲಿಯಲ್ಲಿ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ದೆಹಲಿಯ ರಸ್ತೆಯಲ್ಲಿ ಎಸ್‌ಯುವಿ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಪುಂಡಾಟಿಕೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಉತ್ತರ ದೆಹಲಿಯ ಸಿಗ್ನೇಚರ್ ಸೇತುವೆ ಬಳಿ ಮಂಗಳವಾರ (ಜ.3) ಈ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ.

ಸೇತುವೆಯ ಬಳಿ ಸಣ್ಣ ಉಪಾಹಾರ ಗೃಹವನ್ನು ನಡೆಸುತ್ತಿರುವ 34 ವರ್ಷದ ರಾಮ್ ಚಂದ್ ಈ ದೂರುನ್ನು ನೀಡಿದ್ದಾರೆ. ಮಹೀಂದ್ರಾ ನುವೋಸ್ಪೋರ್ಟ್ ಎಸ್‌ಯುವಿಯಲ್ಲಿ ಬಂದ ಇಬ್ಬರು ವ್ಯಕ್ತಿಗಳು ಎರಡು ಲೋಟ ನೀರು ಕೇಳಿದರು. ಅವರಿಗೆ ನೀರು ನೀಡಿ 5 ರೂ. ಕೇಳಿದೆ. ಆದರೆ ಅವರು ಇದಕ್ಕೆ ನಿರಾಕರಿಸಿದರು, ನಂತರ ನನ್ನ ಮತ್ತು ಅವರ ನಡುವೆ ಜಗಳ ಶುರುವಾಗಿದೆ ಎಂದು ಹೇಳಿದ್ದಾರೆ.

ಈ ಕಾರಣಕ್ಕೆ ನನಗೆ ಕಾರಿನಲ್ಲಿ ಬಂದ ಆ ಇಬ್ಬರು ಥಳಿಸಿದ್ದಾರೆ ಎಂದು ರಾಮ್ ಚಂದ್ ಹೇಳಿದ್ದಾರೆ. ಇನ್ನು ವೈರಲ್​​ ಆಗಿರುವ ವಿಡಿಯೋದಲ್ಲಿ ಎಸ್‌ಯುವಿ ಕಾರು ಯು-ಟರ್ನ್ ತೆಗೆದುಕೊಂಡು ರಾಂಗ್ ಸೈಡ್‌ನಲ್ಲಿ ಬಂದು ಅಲ್ಲಿರುವ ಜನರಿಗೆ ಡಿಕ್ಕಿ ಹೊಡೆಯಲು ಪ್ರಯತ್ನಿಸಿದ್ದಾರೆ. ಇನ್ನು ಅವರನ್ನು ಹಿಡಿಯಲು ಈ ರಸ್ತೆಯಲ್ಲಿ ನಿಂತ ಕೆಲವೊಂದು ಜನರು ಆ ಕಾರಿನ ಮೇಲೆ ಕಲ್ಲು , ದೋಣೆಗಳಿಂದ ದಾಳಿ ಮಾಡುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: ಯುವತಿ ಮೇಲೆ ಅತ್ಯಾಚಾರವಾಗಿಲ್ಲ, ಮೆದುಳು ನಾಪತ್ತೆ: ಮರಣೋತ್ತರ ಪರೀಕ್ಷೆ ವರದಿಯ ಸ್ಪೋಟಕ ಮಾಹಿತಿ ಬಹಿರಂಗ

ಕಾರಿನ ಮಾಲೀಕರನ್ನು ಮೊಹಮ್ಮದ್ ಹಬೀಬ್ ಎಂದು ಗುರುತಿಸಲಾಗಿದೆ. ವಾಹನದಲ್ಲಿ ಬಂದ ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?