AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ನೀರಿನ ಹಣ ಕೇಳಿದಕ್ಕೆ ಹೋಟೆಲ್​​​​ ಮಾಲಿಕನ ಮೇಲೆ ಕಾರು ಹತ್ತಿಸಲು ಯತ್ನ, ವಿಡಿಯೋ ವೈರಲ್​

ಸೇತುವೆಯ ಬಳಿ ಸಣ್ಣ ಉಪಾಹಾರ ಗೃಹವನ್ನು ನಡೆಸುತ್ತಿರುವ 34 ವರ್ಷದ ರಾಮ್ ಚಂದ್ ಈ ದೂರುನ್ನು ನೀಡಿದ್ದಾರೆ. ಮಹೀಂದ್ರಾ ನುವೋಸ್ಪೋರ್ಟ್ ಎಸ್‌ಯುವಿಯಲ್ಲಿ ಬಂದ ಇಬ್ಬರು ವ್ಯಕ್ತಿಗಳು ಎರಡು ಲೋಟ ನೀರು ಕೇಳಿದರು. ಅವರಿಗೆ ನೀರು ನೀಡಿ 5 ರೂ. ಕೇಳಿದೆ. ಆದರೆ ಅವರು ಇದಕ್ಕೆ ನಿರಾಕರಿಸಿದರು, ನಂತರ ನನ್ನ ಮತ್ತು ಅವರ ನಡುವೆ ಜಗಳ ಶುರುವಾಗಿದೆ ಎಂದು ಹೇಳಿದ್ದಾರೆ.

ದೆಹಲಿ: ನೀರಿನ ಹಣ ಕೇಳಿದಕ್ಕೆ ಹೋಟೆಲ್​​​​ ಮಾಲಿಕನ ಮೇಲೆ ಕಾರು ಹತ್ತಿಸಲು ಯತ್ನ, ವಿಡಿಯೋ ವೈರಲ್​
ಅಕ್ಷಯ್​ ಪಲ್ಲಮಜಲು​​
|

Updated on: Jan 03, 2024 | 12:42 PM

Share

ದೆಹಲಿ, ಜ.3: ದೆಹಲಿಯಲ್ಲಿ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ದೆಹಲಿಯ ರಸ್ತೆಯಲ್ಲಿ ಎಸ್‌ಯುವಿ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಪುಂಡಾಟಿಕೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಉತ್ತರ ದೆಹಲಿಯ ಸಿಗ್ನೇಚರ್ ಸೇತುವೆ ಬಳಿ ಮಂಗಳವಾರ (ಜ.3) ಈ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ.

ಸೇತುವೆಯ ಬಳಿ ಸಣ್ಣ ಉಪಾಹಾರ ಗೃಹವನ್ನು ನಡೆಸುತ್ತಿರುವ 34 ವರ್ಷದ ರಾಮ್ ಚಂದ್ ಈ ದೂರುನ್ನು ನೀಡಿದ್ದಾರೆ. ಮಹೀಂದ್ರಾ ನುವೋಸ್ಪೋರ್ಟ್ ಎಸ್‌ಯುವಿಯಲ್ಲಿ ಬಂದ ಇಬ್ಬರು ವ್ಯಕ್ತಿಗಳು ಎರಡು ಲೋಟ ನೀರು ಕೇಳಿದರು. ಅವರಿಗೆ ನೀರು ನೀಡಿ 5 ರೂ. ಕೇಳಿದೆ. ಆದರೆ ಅವರು ಇದಕ್ಕೆ ನಿರಾಕರಿಸಿದರು, ನಂತರ ನನ್ನ ಮತ್ತು ಅವರ ನಡುವೆ ಜಗಳ ಶುರುವಾಗಿದೆ ಎಂದು ಹೇಳಿದ್ದಾರೆ.

ಈ ಕಾರಣಕ್ಕೆ ನನಗೆ ಕಾರಿನಲ್ಲಿ ಬಂದ ಆ ಇಬ್ಬರು ಥಳಿಸಿದ್ದಾರೆ ಎಂದು ರಾಮ್ ಚಂದ್ ಹೇಳಿದ್ದಾರೆ. ಇನ್ನು ವೈರಲ್​​ ಆಗಿರುವ ವಿಡಿಯೋದಲ್ಲಿ ಎಸ್‌ಯುವಿ ಕಾರು ಯು-ಟರ್ನ್ ತೆಗೆದುಕೊಂಡು ರಾಂಗ್ ಸೈಡ್‌ನಲ್ಲಿ ಬಂದು ಅಲ್ಲಿರುವ ಜನರಿಗೆ ಡಿಕ್ಕಿ ಹೊಡೆಯಲು ಪ್ರಯತ್ನಿಸಿದ್ದಾರೆ. ಇನ್ನು ಅವರನ್ನು ಹಿಡಿಯಲು ಈ ರಸ್ತೆಯಲ್ಲಿ ನಿಂತ ಕೆಲವೊಂದು ಜನರು ಆ ಕಾರಿನ ಮೇಲೆ ಕಲ್ಲು , ದೋಣೆಗಳಿಂದ ದಾಳಿ ಮಾಡುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ: ಯುವತಿ ಮೇಲೆ ಅತ್ಯಾಚಾರವಾಗಿಲ್ಲ, ಮೆದುಳು ನಾಪತ್ತೆ: ಮರಣೋತ್ತರ ಪರೀಕ್ಷೆ ವರದಿಯ ಸ್ಪೋಟಕ ಮಾಹಿತಿ ಬಹಿರಂಗ

ಕಾರಿನ ಮಾಲೀಕರನ್ನು ಮೊಹಮ್ಮದ್ ಹಬೀಬ್ ಎಂದು ಗುರುತಿಸಲಾಗಿದೆ. ವಾಹನದಲ್ಲಿ ಬಂದ ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ