AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಹಿಂದಿರುಗಿಸಿದ್ರೂ, ಹೆಚ್ಚಿನ ಬಡ್ಡಿ ನೀಡುವಂತೆ ದಲಿತ ಮಹಿಳೆಗೆ ಥಳಿಸಿ, ಬಾಯಿಗೆ ಮೂತ್ರ ಮಾಡಿದ ವ್ಯಕ್ತಿ

ಸಾಲ ನೀಡಿದ ವ್ಯಕ್ತಿಗೆ ಹಣವನ್ನು ಹಿಂದಿರುಗಿಸಿದ್ರೂ ಮಹಿಳೆಗೆ ಹೆಚ್ಚಿನ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಮಹಿಳೆ ನಿರಕಾರಿಸಿದ್ದು, ಇದರಿಂದ ಕೋಪಗೊಂಡ ಸಾಲ ನೀಡಿದ ವ್ಯಕ್ತಿ ಮಹಿಳೆಗೆ ಕ್ರೂರವಾಗಿ ಹಲ್ಲೆ ಮಾಡಿ, ವಿವಸ್ತ್ರಗೊಳಿಸಿದ್ದಾನೆ.

ಸಾಲ ಹಿಂದಿರುಗಿಸಿದ್ರೂ, ಹೆಚ್ಚಿನ ಬಡ್ಡಿ ನೀಡುವಂತೆ ದಲಿತ ಮಹಿಳೆಗೆ ಥಳಿಸಿ, ಬಾಯಿಗೆ ಮೂತ್ರ ಮಾಡಿದ ವ್ಯಕ್ತಿ
ಮಹಿಳೆಗೆ ಹಲ್ಲೆ
ಅಕ್ಷಯ್​ ಪಲ್ಲಮಜಲು​​
|

Updated on:Sep 26, 2023 | 10:22 AM

Share

ಪಾಟ್ನಾ, ಸೆ.25: ಸಾಲ ಹಿಂದಿರುಗಿಸಿದ್ರೂ, ಹೆಚ್ಚಿನ ಬಡ್ಡಿ ನೀಡವಂತೆ ಒತ್ತಾಯಿಸಿ ದಲಿತ ಮಹಿಳೆ ಮೇಲೆ ಹಲ್ಲೆ ಮಾಡಿ, ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬಿಹಾರದ (Bihar) ಪಾಟ್ನಾ ಜಿಲ್ಲೆಯ ಮೋಸಿಂಪುರ ಗ್ರಾಮದಲ್ಲಿ ನಡೆದಿದೆ. ಸಾಲ ನೀಡಿದ ವ್ಯಕ್ತಿಗೆ ಹಣವನ್ನು ಹಿಂದಿರುಗಿಸಿದ್ರೂ ಮಹಿಳೆಗೆ ಹೆಚ್ಚಿನ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಮಹಿಳೆ ನಿರಕಾರಿಸಿದ್ದು, ಇದರಿಂದ ಕೋಪಗೊಂಡ ಸಾಲ ನೀಡಿದ ವ್ಯಕ್ತಿ ಮಹಿಳೆಗೆ ಕ್ರೂರವಾಗಿ ಹಲ್ಲೆ ಮಾಡಿ, ವಿವಸ್ತ್ರಗೊಳಿಸಿದ್ದಾನೆ ಎಂದು ಹೇಳಲಾಗಿದೆ.

ಇನ್ನು ಸಾಲ ನೀಡಿದ ವ್ಯಕ್ತಿಯ ಮಗ ಮಹಿಳೆಯ ಬಾಯಿಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಪತಿ ಪಾಟ್ನಾ ಜಿಲ್ಲೆಯ ಮೋಸಿಂಪುರ ಗ್ರಾಮದ ಪ್ರಮೋದ್ ಸಿಂಗ್ ಅವರಿಂದ ₹ 1,500 ಸಾಲ ಪಡೆದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ದಂಪತಿಗಳು ಸಾಲ ಪಡೆದ ಹಣವನ್ನು ಬಡ್ಡಿ ಸಹಿತ ಮರುಪಾವತಿ ಮಾಡಿದ್ದರು. ಆದರೆ ಪ್ರಮೋದ್ ಸಿಂಗ್ ಹೆಚ್ಚುವರಿ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ದಂಪತಿಗಳು ಒಪ್ಪದಿದ್ದಾಗ ಪ್ರಮೋದ್ ಸಿಂಗ್​​ನ ಮಗ ಮತ್ತು ಆತ ಸಹಾಯಕರು ಹಲ್ಲೆ ಮಾಡಿದ್ದಾರೆ ಎಂದು ಪೊಲೀಸ್​​ ವರದಿ ಹೇಳಿದೆ.

ಶನಿವಾರ ರಾತ್ರಿ ಮನೆಯ ಹೊರಗೆ ನೀರು ತುಂಬಿಸುತ್ತಿರುವಾಗ ಪ್ರಮೋದ್, ಆತನ ಮಗ ಅಂಶು ಮತ್ತು ಇತರ ನಾಲ್ವರು ಪುರುಷರು ತಮ್ಮೊಂದಿಗೆ ಬರುವಂತೆ ಒತ್ತಾಯಿಸಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಗೊತ್ತಿಲ್ಲ ಎಂದು ಪಂಜಾಬ್ ಮೂಲದ ಮಹಿಳೆಗೆ ಥಳಿಸಿದ ಗುಂಪು

ಮಹಿಳೆ ನಾನು ಎಲ್ಲಿಗೂ ಬರುವುದಿಲ್ಲ ಎಂದು ಹೇಳಿದಾಗ ಆಕೆಗೆ ದೊಣ್ಣೆಯಿಂದ ಥಳಿಸಿದ್ದು, ಗ್ರಾಮದ ಹೊರಗೆ ಕರೆದುಕೊಂಡು ಹೋಗಿ ಆಕೆಯನ್ನು ವಿವಸ್ತ್ರಗೊಳಿಸಿದ್ದಾರೆ ಎಂದು ಪೊಲೀಸ್​​ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಪ್ರಮೋದ್ ಸಿಂಗ್ ತನ್ನ ಮಗ ಅಂಶುಗೆ ಮಹಿಳೆಯ ಬಾಯಿಗೆ ಮೂತ್ರ ಮಾಡು ಎಂದು ಹೇಳಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ನಂತರ ಮಹಿಳೆ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದಿದ್ದಾಳೆ. ಇನ್ನು ಈಕೆ ಬೆತ್ತಲೆಯಾಗಿ ಓಡಿಕೊಂಡು ಬರುವುದನ್ನು ಗ್ರಾಮಸ್ಥರು ನೋಡಿದ್ದಾರೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:42 am, Mon, 25 September 23

ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ