AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ವರ್ಷಗಳ ಬಳಿಕ ದೆಹಲಿ ಪೊಲೀಸರ ಬಲೆಗೆ ಬಿದ್ದ 230 ಚೀಲ ಬೇಳೆಕಾಳುಗಳನ್ನು ಕದ್ದಿದ್ದ ಆರೋಪಿ

ದೆಹಲಿಯ ಸಿರಸ್‌ಪುರದ ಗೋಡೌನ್‌ನಿಂದ 230 ಚೀಲ ಬೇಳೆಕಾಳುಗಳು ಲೂಟಿ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 9 ವರ್ಷಗಳ ಬಳಿಕ ದೆಹಲಿ ಪೊಲೀಸರು ಬಂಧಿಸಿದ್ದಾರೆ.

9 ವರ್ಷಗಳ ಬಳಿಕ ದೆಹಲಿ ಪೊಲೀಸರ ಬಲೆಗೆ ಬಿದ್ದ 230 ಚೀಲ ಬೇಳೆಕಾಳುಗಳನ್ನು ಕದ್ದಿದ್ದ ಆರೋಪಿ
Arrest
TV9 Web
| Edited By: |

Updated on: Sep 30, 2022 | 10:17 AM

Share

ದೆಹಲಿಯ ಸಿರಸ್‌ಪುರದ ಗೋಡೌನ್‌ನಿಂದ 230 ಚೀಲ ಬೇಳೆಕಾಳುಗಳು ಲೂಟಿ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 9 ವರ್ಷಗಳ ಬಳಿಕ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ, ಬಿಹಾರ ಮೂಲದ 32 ವರ್ಷದ ಸಂತೋಷ್ ಕುಮಾರ್ ಎಂದು ಗುರುತಿಸಲಾಗಿದೆ. ದರೋಡೆ, ಮನೆಗಳಲ್ಲಿ ಕಳ್ಳತನ ಸೇರಿದಂತೆ ಒಟ್ಟು 12 ಪ್ರಕರಣಗಳಲ್ಲಿ ಪೊಲೀಸರಿಗೆ ಆತ ಬೇಕಾಗಿದ್ದ. ಆರು ಪ್ರಕರಣಗಳಲ್ಲಿ ಘೋಷಿತ ಅಪರಾಧಿ ಎಂದು ಘೋಷಿಸಲಾಗಿದೆ.

ಪೊಲೀಸ್ ಉಪ ಕಮಿಷನರ್ (ಕ್ರೈಮ್ ಬ್ರಾಂಚ್) ಅಮಿತ್ ಗೋಯೆಲ್ ಪ್ರಕಾರ, “ಸಮಯಪುರ ಬದ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಡಕಾಯಿತಿ ಪ್ರಕರಣದಲ್ಲಿ ಭಾಗಿಯಾಗಿರುವ ದರೋಡೆಕೋರನು ಸಂಬಂಧಪಟ್ಟ ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ತಲೆಮರೆಸಿಕೊಂಡಿದ್ದಾನೆ ಎಂದು ಅಂತರರಾಜ್ಯ ಸೆಲ್ ತಂಡಕ್ಕೆ ಇತ್ತೀಚೆಗೆ ಮಾಹಿತಿ ಸಿಕ್ಕಿತ್ತು, ಅವರು ಆಗಾಗ ದೆಹಲಿಗೆ ಭೇಟಿ ನೀಡುತ್ತಿದ್ದರು.

ಆಗಸ್ಟ್ 18, 2011 ರಂದು, ಆರೋಪಿಯು ತನ್ನ ಸಹಚರರೊಂದಿಗೆ ಗೋಡೌನ್‌ಗೆ ಹೋಗಿ, ಅಲ್ಲಿನ ಕಾವಲುಗಾರರು ಮತ್ತು ಕಾರ್ಮಿಕರಿಗೆ ಬೆದರಿಕೆ ಹಾಕಿ, ಅವರನ್ನು ಕಟ್ಟಿಹಾಕಿ ನಂತರ, ಅವರು 230 ಚೀಲ ಬೇಳೆಕಾಳುಗಳನ್ನು ಹೊತ್ತು ಅಲ್ಲಿಂದ ಕಾಲ್ಕಿತ್ತಿದ್ದರು.

ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಕ್ರೈಂ ಬ್ರಾಂಚ್ ತಂಡವನ್ನು ರಚಿಸಿ ದೆಹಲಿ ಮತ್ತು ನೆರೆಯ ಉತ್ತರ ಪ್ರದೇಶ ಮತ್ತು ಬಿಹಾರದಾದ್ಯಂತ ಸಂಚರಿಸಿತ್ತು. ನಿರಂತರ ಹುಡುಕಾಟ ಮತ್ತು ಸ್ಥಳೀಯ ವಿಚಾರಣೆಯ ನಂತರ, ಸಂತೋಷ್​ನನ್ನು ಸೆಪ್ಟೆಂಬರ್ 26 ರಂದು ಬಿಹಾರದ ಬಂಕಾ ಗ್ರಾಮದಿಂದ ಬಂಧಿಸಲಾಯಿತು.

ಬುಧವಾರ ವಿಚಾರಣೆ ವೇಳೆ ಆರೋಪಿಯು 2010ರಲ್ಲಿ ಆಜಾದ್‌ಪುರ ಮಂಡಿಯಲ್ಲಿ ಕೂಲಿ ಕೆಲಸ ಆರಂಭಿಸಿದ್ದು, ಈ ವೇಳೆ ರಾಜೇಶ್ ಪಾಸ್ವಾನ್ ಸಂಪರ್ಕಕ್ಕೆ ಬಂದಿದ್ದು, ಗೋದಾಮುಗಳಿಂದ ವಸ್ತುಗಳನ್ನು ಕದ್ದು ಅರ್ಧ ದರಕ್ಕೆ ಮಾರಾಟ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಇವರಿಬ್ಬರು ಸೇರಿಕೊಂಡು ದರೋಡೆ, ಕಳ್ಳತನ ನಡೆಸುತ್ತಿದ್ದರು.

ಪೊಲೀಸರ ಪ್ರಕಾರ, ಕಳೆದ 4-5 ವರ್ಷಗಳಿಂದ ಆರೋಪಿಗಳು ದೆಹಲಿ, ಪಾಟ್ನಾ, ಭಾಗಲ್ಪುರ ಮತ್ತು ಬಿಹಾರದ ಇತರೆಡೆ ಸ್ಥಳ ಬದಲಾಯಿಸುತ್ತಿದ್ದರು ಮತ್ತು ತನ್ನ ಸಂಬಂಧಿಕರೊಂದಿಗೆ ತಲೆಮರೆಸಿಕೊಂಡಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ