AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯಲು ದೇವಸ್ಥಾನ ಪ್ರವೇಶಿಸಿದ್ದ ಮುಸ್ಲಿಂ ಹುಡುಗನಿಗೆ ಮನಬಂದಂತೆ ಥಳಿಸಿದ್ದವ ಅರೆಸ್ಟ್​; ಎಸ್​ಪಿಯಿಂದ ಖಡಕ್​ ಎಚ್ಚರಿಕೆ

ಶೃಂಗಿ ನಂದನ್​ ಯಾದವ್​ ಇಂಜಿನಿಯರಿಂಗ್​ ಪದವೀಧರನಾಗಿದ್ದು, ಮೂಲತಃ ಬಿಹಾರದ ಭಾಗಲ್​ಪುರದವನು. ನಿರುದ್ಯೋಗಿಯಾಗಿರುವ ಈತ ಕಳೆದ ಮೂರು ತಿಂಗಳಿಂದಲೂ ದೇವಸ್ಥಾನದಲ್ಲೇ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನೀರು ಕುಡಿಯಲು ದೇವಸ್ಥಾನ ಪ್ರವೇಶಿಸಿದ್ದ ಮುಸ್ಲಿಂ ಹುಡುಗನಿಗೆ ಮನಬಂದಂತೆ ಥಳಿಸಿದ್ದವ ಅರೆಸ್ಟ್​; ಎಸ್​ಪಿಯಿಂದ ಖಡಕ್​ ಎಚ್ಚರಿಕೆ
ಬಂಧಿತ ಶೃಂಗಿ ನಂದನ್ ಯಾದವ್​
Lakshmi Hegde
|

Updated on: Mar 14, 2021 | 8:00 PM

Share

ಘಾಜಿಯಾಬಾದ್​: ಬಾಯಾರಿಕೆ ಆಯಿತೆಂದು ನೀರು ಕುಡಿಯಲು ದೇವಸ್ಥಾನದ ಒಳಹೊಕ್ಕಿದ್ದ ಮುಸ್ಲಿಂ ಹುಡುಗನಿಗೆ ಹಿಗ್ಗಾಮುಗ್ಗಾ ಥಳಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿತ್ತು. 14 ವರ್ಷದ ಮುಸ್ಲಿಂ ಹುಡಗನೊಬ್ಬ ನೀರಿಗಾಗಿ ದೇವಾಲಯದ ಒಳಗೆ ಹೋಗಿದ್ದ. ಅದನ್ನು ನೋಡಿದ ಅಲ್ಲಿಯೇ ಇದ್ದ ಯುವಕನೊಬ್ಬ ಆತನನ್ನು ಹಿಡಿದುಕೊಂಡು ಸಿಕ್ಕಾಪಟೆ ಹೊಡೆದಿದ್ದ. ಈ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದ್ದಲ್ಲದೆ, ನೆಟ್ಟಿಗರಿಂದ ತುಂಬ ಆಕ್ರೋಶವೂ ವ್ಯಕ್ತವಾಗಿತ್ತು. ಇದೀಗ ಹೊಡೆದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬಂಧಿತನನ್ನು ಶೃಂಗಿ ನಂದನ್ ಯಾದವ್ ಎಂದು ಗುರುತಿಸಲಾಗಿದೆ. ಇಂಥ ಸಮಾಜವಿರೋಧಿ ಕೃತ್ಯದಲ್ಲಿ ತೊಡಗುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಘಾಜಿಯಾಬಾದ್ ಎಸ್​ಪಿ ಕಲಾನಿಧಿ ನೈಥಾನಿ ಖಡಕ್​ ಎಚ್ಚರಿಕೆ. ಮುಸ್ಲಿಂ ಹುಡುಗನೊಂದಿಗೆ ಯಾದವ್​ ತುಂಬ ಕ್ರೂರವಾಗಿ ನಡೆದುಕೊಂಡಿದ್ದು ವಿಡಿಯೋದಲ್ಲಿ ಕಾಣಿಸುತ್ತಿತ್ತು. ದೇವಸ್ಥಾನದ ಪ್ರವೇಶ ಮಾಡಿದ್ದ ಹುಡುಗನ ಬಳಿ, ನೀನು ಯಾರು? ನಿನ್ನ ಹೆಸರೇನು? ಅಪ್ಪನ ಹೆಸರೇನು ಎಂದು ಕೇಳಿದ್ದ ಯಾದವ್​? ದೇವಸ್ಥಾನಕ್ಕೆ ಯಾಕೆ ಬಂದೆ ಎಂದೂ ಪ್ರಶ್ನಿಸಿದ್ದ. ಅದಾದ ಬಳಿಕ ಹುಡುಗನ ತಲೆಗೆ ಹೊಡೆದಿದ್ದಲ್ಲದೆ, ಬಲಗೈಯನ್ನು ತಿರುಚಿದ್ದ.

ಇನ್ನು ಶೃಂಗಿ ನಂದನ್​ ಯಾದವ್​ ಇಂಜಿನಿಯರಿಂಗ್​ ಪದವೀಧರನಾಗಿದ್ದು, ಮೂಲತಃ ಬಿಹಾರದ ಭಾಗಲ್​ಪುರದವನು. ನಿರುದ್ಯೋಗಿಯಾಗಿರುವ ಈತ ಕಳೆದ ಮೂರು ತಿಂಗಳಿಂದಲೂ ದೇವಸ್ಥಾನದಲ್ಲೇ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೆ, ವಿಡಿಯೋ ವೈರಲ್​ ಆದ ತಕ್ಷಣ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಕುಂದಾನಗರಿಯಲ್ಲಿ ಕೊರೊನಾರ್ಭಟ 2.0: ಒಂದೇ ದಿನ.. ಒಂದೇ ಕುಟುಂಬದ.. 14 ಮಂದಿಗೆ ವಕ್ಕರಿಸಿದ ವೈರಸ್​

ಒಡಿಶಾ ರೈತ ತಯಾರಿಸಿದ ವಿಶೇಷ ವಾಹನ; ಪೆಟ್ರೋಲ್​-ಡೀಸೆಲ್​ ಬೇಡ್ವೇ ಬೇಡ, ಒಮ್ಮೆ ಬ್ಯಾಟರಿ ಚಾರ್ಜ್ ಮಾಡಿದರೆ 300 ಕಿಮೀ ದೂರ ಓಡಿಸಬಹುದು !

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ