AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯಲು ದೇವಸ್ಥಾನ ಪ್ರವೇಶಿಸಿದ್ದ ಮುಸ್ಲಿಂ ಹುಡುಗನಿಗೆ ಮನಬಂದಂತೆ ಥಳಿಸಿದ್ದವ ಅರೆಸ್ಟ್​; ಎಸ್​ಪಿಯಿಂದ ಖಡಕ್​ ಎಚ್ಚರಿಕೆ

ಶೃಂಗಿ ನಂದನ್​ ಯಾದವ್​ ಇಂಜಿನಿಯರಿಂಗ್​ ಪದವೀಧರನಾಗಿದ್ದು, ಮೂಲತಃ ಬಿಹಾರದ ಭಾಗಲ್​ಪುರದವನು. ನಿರುದ್ಯೋಗಿಯಾಗಿರುವ ಈತ ಕಳೆದ ಮೂರು ತಿಂಗಳಿಂದಲೂ ದೇವಸ್ಥಾನದಲ್ಲೇ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನೀರು ಕುಡಿಯಲು ದೇವಸ್ಥಾನ ಪ್ರವೇಶಿಸಿದ್ದ ಮುಸ್ಲಿಂ ಹುಡುಗನಿಗೆ ಮನಬಂದಂತೆ ಥಳಿಸಿದ್ದವ ಅರೆಸ್ಟ್​; ಎಸ್​ಪಿಯಿಂದ ಖಡಕ್​ ಎಚ್ಚರಿಕೆ
ಬಂಧಿತ ಶೃಂಗಿ ನಂದನ್ ಯಾದವ್​
Lakshmi Hegde
|

Updated on: Mar 14, 2021 | 8:00 PM

Share

ಘಾಜಿಯಾಬಾದ್​: ಬಾಯಾರಿಕೆ ಆಯಿತೆಂದು ನೀರು ಕುಡಿಯಲು ದೇವಸ್ಥಾನದ ಒಳಹೊಕ್ಕಿದ್ದ ಮುಸ್ಲಿಂ ಹುಡುಗನಿಗೆ ಹಿಗ್ಗಾಮುಗ್ಗಾ ಥಳಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿತ್ತು. 14 ವರ್ಷದ ಮುಸ್ಲಿಂ ಹುಡಗನೊಬ್ಬ ನೀರಿಗಾಗಿ ದೇವಾಲಯದ ಒಳಗೆ ಹೋಗಿದ್ದ. ಅದನ್ನು ನೋಡಿದ ಅಲ್ಲಿಯೇ ಇದ್ದ ಯುವಕನೊಬ್ಬ ಆತನನ್ನು ಹಿಡಿದುಕೊಂಡು ಸಿಕ್ಕಾಪಟೆ ಹೊಡೆದಿದ್ದ. ಈ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದ್ದಲ್ಲದೆ, ನೆಟ್ಟಿಗರಿಂದ ತುಂಬ ಆಕ್ರೋಶವೂ ವ್ಯಕ್ತವಾಗಿತ್ತು. ಇದೀಗ ಹೊಡೆದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬಂಧಿತನನ್ನು ಶೃಂಗಿ ನಂದನ್ ಯಾದವ್ ಎಂದು ಗುರುತಿಸಲಾಗಿದೆ. ಇಂಥ ಸಮಾಜವಿರೋಧಿ ಕೃತ್ಯದಲ್ಲಿ ತೊಡಗುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಘಾಜಿಯಾಬಾದ್ ಎಸ್​ಪಿ ಕಲಾನಿಧಿ ನೈಥಾನಿ ಖಡಕ್​ ಎಚ್ಚರಿಕೆ. ಮುಸ್ಲಿಂ ಹುಡುಗನೊಂದಿಗೆ ಯಾದವ್​ ತುಂಬ ಕ್ರೂರವಾಗಿ ನಡೆದುಕೊಂಡಿದ್ದು ವಿಡಿಯೋದಲ್ಲಿ ಕಾಣಿಸುತ್ತಿತ್ತು. ದೇವಸ್ಥಾನದ ಪ್ರವೇಶ ಮಾಡಿದ್ದ ಹುಡುಗನ ಬಳಿ, ನೀನು ಯಾರು? ನಿನ್ನ ಹೆಸರೇನು? ಅಪ್ಪನ ಹೆಸರೇನು ಎಂದು ಕೇಳಿದ್ದ ಯಾದವ್​? ದೇವಸ್ಥಾನಕ್ಕೆ ಯಾಕೆ ಬಂದೆ ಎಂದೂ ಪ್ರಶ್ನಿಸಿದ್ದ. ಅದಾದ ಬಳಿಕ ಹುಡುಗನ ತಲೆಗೆ ಹೊಡೆದಿದ್ದಲ್ಲದೆ, ಬಲಗೈಯನ್ನು ತಿರುಚಿದ್ದ.

ಇನ್ನು ಶೃಂಗಿ ನಂದನ್​ ಯಾದವ್​ ಇಂಜಿನಿಯರಿಂಗ್​ ಪದವೀಧರನಾಗಿದ್ದು, ಮೂಲತಃ ಬಿಹಾರದ ಭಾಗಲ್​ಪುರದವನು. ನಿರುದ್ಯೋಗಿಯಾಗಿರುವ ಈತ ಕಳೆದ ಮೂರು ತಿಂಗಳಿಂದಲೂ ದೇವಸ್ಥಾನದಲ್ಲೇ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೆ, ವಿಡಿಯೋ ವೈರಲ್​ ಆದ ತಕ್ಷಣ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಕುಂದಾನಗರಿಯಲ್ಲಿ ಕೊರೊನಾರ್ಭಟ 2.0: ಒಂದೇ ದಿನ.. ಒಂದೇ ಕುಟುಂಬದ.. 14 ಮಂದಿಗೆ ವಕ್ಕರಿಸಿದ ವೈರಸ್​

ಒಡಿಶಾ ರೈತ ತಯಾರಿಸಿದ ವಿಶೇಷ ವಾಹನ; ಪೆಟ್ರೋಲ್​-ಡೀಸೆಲ್​ ಬೇಡ್ವೇ ಬೇಡ, ಒಮ್ಮೆ ಬ್ಯಾಟರಿ ಚಾರ್ಜ್ ಮಾಡಿದರೆ 300 ಕಿಮೀ ದೂರ ಓಡಿಸಬಹುದು !

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ