AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯಲು ದೇವಸ್ಥಾನ ಪ್ರವೇಶಿಸಿದ್ದ ಮುಸ್ಲಿಂ ಹುಡುಗನಿಗೆ ಮನಬಂದಂತೆ ಥಳಿಸಿದ್ದವ ಅರೆಸ್ಟ್​; ಎಸ್​ಪಿಯಿಂದ ಖಡಕ್​ ಎಚ್ಚರಿಕೆ

ಶೃಂಗಿ ನಂದನ್​ ಯಾದವ್​ ಇಂಜಿನಿಯರಿಂಗ್​ ಪದವೀಧರನಾಗಿದ್ದು, ಮೂಲತಃ ಬಿಹಾರದ ಭಾಗಲ್​ಪುರದವನು. ನಿರುದ್ಯೋಗಿಯಾಗಿರುವ ಈತ ಕಳೆದ ಮೂರು ತಿಂಗಳಿಂದಲೂ ದೇವಸ್ಥಾನದಲ್ಲೇ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನೀರು ಕುಡಿಯಲು ದೇವಸ್ಥಾನ ಪ್ರವೇಶಿಸಿದ್ದ ಮುಸ್ಲಿಂ ಹುಡುಗನಿಗೆ ಮನಬಂದಂತೆ ಥಳಿಸಿದ್ದವ ಅರೆಸ್ಟ್​; ಎಸ್​ಪಿಯಿಂದ ಖಡಕ್​ ಎಚ್ಚರಿಕೆ
ಬಂಧಿತ ಶೃಂಗಿ ನಂದನ್ ಯಾದವ್​
Lakshmi Hegde
|

Updated on: Mar 14, 2021 | 8:00 PM

Share

ಘಾಜಿಯಾಬಾದ್​: ಬಾಯಾರಿಕೆ ಆಯಿತೆಂದು ನೀರು ಕುಡಿಯಲು ದೇವಸ್ಥಾನದ ಒಳಹೊಕ್ಕಿದ್ದ ಮುಸ್ಲಿಂ ಹುಡುಗನಿಗೆ ಹಿಗ್ಗಾಮುಗ್ಗಾ ಥಳಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿತ್ತು. 14 ವರ್ಷದ ಮುಸ್ಲಿಂ ಹುಡಗನೊಬ್ಬ ನೀರಿಗಾಗಿ ದೇವಾಲಯದ ಒಳಗೆ ಹೋಗಿದ್ದ. ಅದನ್ನು ನೋಡಿದ ಅಲ್ಲಿಯೇ ಇದ್ದ ಯುವಕನೊಬ್ಬ ಆತನನ್ನು ಹಿಡಿದುಕೊಂಡು ಸಿಕ್ಕಾಪಟೆ ಹೊಡೆದಿದ್ದ. ಈ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದ್ದಲ್ಲದೆ, ನೆಟ್ಟಿಗರಿಂದ ತುಂಬ ಆಕ್ರೋಶವೂ ವ್ಯಕ್ತವಾಗಿತ್ತು. ಇದೀಗ ಹೊಡೆದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬಂಧಿತನನ್ನು ಶೃಂಗಿ ನಂದನ್ ಯಾದವ್ ಎಂದು ಗುರುತಿಸಲಾಗಿದೆ. ಇಂಥ ಸಮಾಜವಿರೋಧಿ ಕೃತ್ಯದಲ್ಲಿ ತೊಡಗುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಘಾಜಿಯಾಬಾದ್ ಎಸ್​ಪಿ ಕಲಾನಿಧಿ ನೈಥಾನಿ ಖಡಕ್​ ಎಚ್ಚರಿಕೆ. ಮುಸ್ಲಿಂ ಹುಡುಗನೊಂದಿಗೆ ಯಾದವ್​ ತುಂಬ ಕ್ರೂರವಾಗಿ ನಡೆದುಕೊಂಡಿದ್ದು ವಿಡಿಯೋದಲ್ಲಿ ಕಾಣಿಸುತ್ತಿತ್ತು. ದೇವಸ್ಥಾನದ ಪ್ರವೇಶ ಮಾಡಿದ್ದ ಹುಡುಗನ ಬಳಿ, ನೀನು ಯಾರು? ನಿನ್ನ ಹೆಸರೇನು? ಅಪ್ಪನ ಹೆಸರೇನು ಎಂದು ಕೇಳಿದ್ದ ಯಾದವ್​? ದೇವಸ್ಥಾನಕ್ಕೆ ಯಾಕೆ ಬಂದೆ ಎಂದೂ ಪ್ರಶ್ನಿಸಿದ್ದ. ಅದಾದ ಬಳಿಕ ಹುಡುಗನ ತಲೆಗೆ ಹೊಡೆದಿದ್ದಲ್ಲದೆ, ಬಲಗೈಯನ್ನು ತಿರುಚಿದ್ದ.

ಇನ್ನು ಶೃಂಗಿ ನಂದನ್​ ಯಾದವ್​ ಇಂಜಿನಿಯರಿಂಗ್​ ಪದವೀಧರನಾಗಿದ್ದು, ಮೂಲತಃ ಬಿಹಾರದ ಭಾಗಲ್​ಪುರದವನು. ನಿರುದ್ಯೋಗಿಯಾಗಿರುವ ಈತ ಕಳೆದ ಮೂರು ತಿಂಗಳಿಂದಲೂ ದೇವಸ್ಥಾನದಲ್ಲೇ ವಾಸವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೆ, ವಿಡಿಯೋ ವೈರಲ್​ ಆದ ತಕ್ಷಣ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಕುಂದಾನಗರಿಯಲ್ಲಿ ಕೊರೊನಾರ್ಭಟ 2.0: ಒಂದೇ ದಿನ.. ಒಂದೇ ಕುಟುಂಬದ.. 14 ಮಂದಿಗೆ ವಕ್ಕರಿಸಿದ ವೈರಸ್​

ಒಡಿಶಾ ರೈತ ತಯಾರಿಸಿದ ವಿಶೇಷ ವಾಹನ; ಪೆಟ್ರೋಲ್​-ಡೀಸೆಲ್​ ಬೇಡ್ವೇ ಬೇಡ, ಒಮ್ಮೆ ಬ್ಯಾಟರಿ ಚಾರ್ಜ್ ಮಾಡಿದರೆ 300 ಕಿಮೀ ದೂರ ಓಡಿಸಬಹುದು !

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?