AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !

ಸ್ಥಳೀಯ ಆಡಳಿತಾಧಿಕಾರಿಗಳು ಹೇಳಿದ್ದು ಬೇರೆ. ಈ ರಸ್ತೆಯಲ್ಲಿರುವ ಎಲ್ಲ ಹಳೇ ಕಟ್ಟಡಗಳಿಗೂ ಬಣ್ಣ ಬಳಿಯಲಾಗಿದೆ. ಎಲ್ಲದಕ್ಕೂ ಒಂದೇ ರೀತಯ ಬಣ್ಣವನ್ನು ಹೊಡೆಸಲಾಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !
ಹೊಸದಾಗಿ ಬಣ್ಣ ಬಳಿದ ಮಸೀದಿ
TV9 Web
| Edited By: |

Updated on: Dec 08, 2021 | 7:35 AM

Share

ವಾರಾಣಸಿ: ಪ್ರಧಾನಮಂತ್ರಿ ನರೇಂದ್ರ ಮೋಡಿ ಡಿಸೆಂಬರ್​ 13-14ರಂದು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡಲಿದ್ದು, ಅಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡುವರು. 2022ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಹಲವು ಕಡೆ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆಯಾಗುತ್ತಿದೆ. ನಿನ್ನೆಯಷ್ಟೇ ಅವರು ಗೋರಖ್​ಪುರಕ್ಕೆ ಭೇಟಿ ನೀಡಿ, ಮೂರು ಬೃಹತ್​ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಇದೀಗ ಡಿ.13ರಂದು ಅವರು ವಾರಾಣಸಿಗೆ ಭೇಟಿ ಕೊಡುತ್ತಿರುವ ಹಿನ್ನೆಲೆಯಲ್ಲಿ, ಕಾಶಿ ವಿಶ್ವನಾಥ ದೇವಾಲಯಕ್ಕೆ ಹೋಗುವ ರಸ್ತೆಯಲ್ಲಿರುವ ಒಂದು ಮಸೀದಿಗೆ ಸ್ಥಳೀಯ ಆಡಳಿತಾಧಿಕಾರಿಗಳು ಕೇಸರಿ ಬಣ್ಣ ಹೊಡೆಸಿದ್ದಾರೆ ಎಂದು ಮಸೀದಿಯ ಸಮಿತಿ ಸದಸ್ಯರು ಹೇಳಿದ್ದಾಗಿ ವರದಿಯಾಗಿದೆ. 

ಆದರೆ ಸ್ಥಳೀಯ ಆಡಳಿತಾಧಿಕಾರಿಗಳು ಹೇಳಿದ್ದು ಬೇರೆ. ಈ ರಸ್ತೆಯಲ್ಲಿರುವ ಎಲ್ಲ ಹಳೇ ಕಟ್ಟಡಗಳಿಗೂ ಬಣ್ಣ ಬಳಿಯಲಾಗಿದೆ. ಎಲ್ಲದಕ್ಕೂ ಒಂದೇ ರೀತಯ ಬಣ್ಣವನ್ನು ಹೊಡೆಸಲಾಗಿದೆ. ಅದು ತಿಳಿ ಗುಲಾಬಿಯೇ ಹೊರತು ಕೇಸರಿಯಲ್ಲ ಎಂದಿದ್ದಾರೆ. ಆದರೆ ಅದು ಕೇಸರಿ ಬಣ್ಣವೇ ಹೌದು ಎಂದು ಸ್ಥಳೀಯ ಮುಸ್ಲಿಂ ಸಮುದಾಯ ಕ್ಯಾತೆ ತೆಗೆದ ಬಳಿಕ ಅದರ ಮೇಲೆ ಮತ್ತೆ ಬಿಳಿ ಬಣ್ಣ ಬಳಿಯಲಾಗಿದೆ.  ಈ ಮಸೀದಿಯ ಹೆಸರು ಅಂಜುಮಾನ್​ ಇಂಟೆಝಮಿಯಾ ಎಂದಾಗಿದ್ದು, ಅದರ ಸಮಿತಿ ಸದಸ್ಯ ಮೊಹಮ್ಮದ್​ ಎಜಾಝ್​ ಇಸ್ಲಾಹಿ ಹೇಳುವ ಪ್ರಕಾರ ಇದು ಮೊದಲು ಬಿಳಿ ಬಣ್ಣದಲ್ಲೇ ಇತ್ತು. ನಂತರ ಕೇಸರಿ ಬಣ್ಣ ಬಡಿಯಲಾಯಿತು. ನಮ್ಮ ಸಮಿತಿಯನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿಯನ್ನೂ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Vastu Tips : ವಾಸ್ತು ಪ್ರಕಾರ ಮನೆಯ ಬಳಿ ಅಪ್ಪಿತಪ್ಪಿಯೂ ಈ ನಾಲ್ಕು ಗಿಡ ಹಾಕಬೇಡಿ, ಅದರಿಂದ ಹಾನಿಯೇ ಹೆಚ್ಚು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ